2021ರಲ್ಲಿ 23 ಸಾವಿರ ಮಂದಿ ನೇಮಕ: ಕಾಂಗ್ನಿಜೆಂಟ್ ಎಂಡಿ
ಬೆಂಗಳೂರು, ಡಿ. 9: ಭಾರತದ ಪ್ರಮುಖ ಐಟಿ ಸಂಸ್ಥೆ, ಯುಎಸ್ ಮೂಲದ ಕಾಗ್ನಿಜೆಂಟ್ 2020ರಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿತ್ತು. 18 ಸಾವಿರಕ್ಕೂ ಅಧಿಕ ಮಂದಿಗೆ ಯಾವುದೇ ಪ್ರಾಜೆಕ್ಟ್ ನೀಡದೆ ಬೆಂಚ್ ನಲ್ಲಿರಿಸಲಾಗಿತ್ತು. 9ಸಾವಿರ ಮಂದಿಗೆ ಪಿಂಕ್ ಸ್ಲಿಪ್ ನೀಡಲಾಗಿತ್ತು.
ಆದರೆ, 2021ರಲ್ಲಿ ಪರಿಸ್ಥಿತಿ ಬದಲಾಗಲಿದ್ದು, ಸರಿ ಸುಮಾರು 23,000 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಂಸ್ಥೆಯ ಭಾರತ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ನಂಬಿಯಾರ್ ಹೇಳಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿರುವ ನಂಬಿಯಾರ್ ಅವರು ಸದ್ಯ ಸಿಇಒ ಬ್ರಿಯಾನ್ ಹಂಪ್ ಶೈರ್ ಅವರಿಗೆ ರಿಪೋರ್ಟ್ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿರುವ ಸುಮಾರು 2,00,000 ಸಿಬ್ಬಂದಿಗಳ ಕಾರ್ಯಕಾರಿ ಸಮಿತಿ ಪ್ರತಿನಿಧಿಯಾಗಿದ್ದಾರೆ. ಸರ್ಕಾರದ ನೀತಿ ನಿಯಮಕ್ಕೆ ಅನುಗುಣವಾಗಿ ಭಾರತದಲ್ಲಿ ಸಂಸ್ಥೆ ವಿಸ್ತರಣೆಯ ಹೊಣೆಯೂ ನಂಬಿಯಾರ್ ಮೇಲಿದೆ.

"2020ರಲ್ಲಿ ಉದ್ಯೋಗ ಕಡಿತದ ನಡುವೆಯೂ ನಾವು 17,000 ನೇಮಕಾತಿಗಳನ್ನು ಕ್ಯಾಂಪಸ್ ಗಳಲ್ಲಿ ನಡೆಸಿದ್ದೇವೆ. 2016ರಿಂದ ಇಲ್ಲಿ ತನಕ ಇದು ದೊಡ್ಡ ಮಟ್ಟದ ನೇಮಕಾತಿ ಎನ್ನಬಹುದು. 2021ರಲ್ಲಿ ಸುಮಾರು 23, 000 ನೇಮಕಾತಿಯನ್ನು ಕ್ಯಾಂಪಸುಗಳಿಂದ ನಡೆಸಲಾಗುತ್ತದೆ'' ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಭಾರತದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ವಿಶ್ವವಿದ್ಯಾಲಯ, ಚೇಂಬರ್ ಆಫ್ ಕಾಮರ್ಸ್, ನಾಸ್ಕಂ ಮುಂತಾದ ಸಂಸ್ಥೆಗಳ ಜೊತೆಗೆ ಒಡನಾಟ ಇಟ್ಟುಕೊಂಡು ಸಂಸ್ಥೆ ಬೆಳೆಸಲಾಗುತ್ತದೆ ಎಂದು ಹೇಳಿದರು.
Recommended Video
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications