ಕಾಗ್ನಿಜಂಟ್ ಚೇರ್ಮನ್, ಎಂಡಿ ರಾಮ್ ಕುಮಾರ್ ರಾಜೀನಾಮೆ
ನವದೆಹಲಿ, ಜುಲೈ 09: ದೇಶದ ಪ್ರಮುಖ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಕಾಗ್ನಿಜಂಟ್ ಹಿರಿಯ ಅಧಿಕಾರಿಯನ್ನು ಕಳೆದುಕೊಳ್ಳುತ್ತಿದೆ. ಕಾಗ್ನಿಜಂಟ್ ನಲ್ಲಿ ಕಾರ್ಯ ನಿರ್ವಹಿಸಿದ್ದ ಚೇರ್ಮನ್, ವ್ಯವಸ್ಥಾಪಕ ರಾಮ್ ಕುಮಾರ್ ರಾಮಮೂರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸಿಇಒ ಬ್ರಿಯಾನ್ ಹಂಫ್ರಿಯಿಸ್ ತಿಳಿಸಿದ್ದಾರೆ.
Recommended Video
ಸಿಇಒ ಆಗಿ ಬ್ರಿಯಾನ್ ಹಂಫ್ರಿಯಿಸ್ ಅವರು ಕಳೆದ ವರ್ಷ ಅಧಿಕಾರಕ್ಕೆ ಬಂದ ಬಳಿಕ ಅನೇಕ ಹಿರಿಯ ಅಧಿಕಾರಿಗಳು ಹುದ್ದೆಗಳನ್ನು ತೊರೆಯುತ್ತಿದ್ದಾರೆ. 2019ರಲ್ಲಿ ಸಿಎಂಡಿ ಸ್ಥಾನ ವಹಿಸಿಕೊಂಡಿದ್ದ ರಾಮ್ ಕುಮಾರ್ ಅವರು 10ತಿಂಗಳೊಳಗೆ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಇದಕ್ಕೂ ಮುನ್ನ 22 ವರ್ಷಗಳ ಕಾಗ್ನಿಜಂಟ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಹಿರಿಯ ಉಪಾಧ್ಯಕ್ಷ, ಸಿಕೆಒ, ಕಾರ್ಯಕಾರಿ ನಿರ್ದೇಶಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ನಾಸ್ಕಾಂ ಸ್ಕಿಲ್ ಸೆಕ್ಟರ್ ಕೌನ್ಸಿಲ್ ನ ಸದಸ್ಯರಾಗಿದ್ದರು. ಮದ್ರಾಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅಧ್ಯಕ್ಷರಾಗಿದ್ದಾರೆ.

ಕುಂಭಕೋಣಂ ಮೂಲದ ರಾಮ್ ಕುಮಾರ್ ಅವರು ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಸಮೂಹ ಸಂವಹನದಲ್ಲಿ ಪತ್ರಿಕೋದ್ಯಮ ಪದವಿಯನ್ನು 1990ರಲ್ಲಿ ಲೊಯೊಲಾ ಕಾಲೇಜಿನಿಂದ ಪಡೆದಿದ್ದರು. ಅಮೆರಿಕನ್ ನ್ಯೂ ಜರ್ನಲಿಸಂನಲಿ ಎಂ.ಫಿಲ್ ಪಡೆದಿದ್ದಾರೆ. ಇಂಗ್ಲೀಷ್ ಪ್ರಾಧ್ಯಾಪಕ, ಪ್ರಿನ್ಸಿಪಾಲ್ ಆಗಿ ಕೂಡಾ ಕಾರ್ಯ ನಿರ್ವಹಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications