ನಿಜವಾದ ಮುನ್ಸೂಚನೆ, ಕಾಗ್ನಿಜೆಂಟ್ ಹಿರಿಯ ಅಧಿಕಾರಿ ಹೊರಕ್ಕೆ
ಬೆಂಗಳೂರು, ಮೇ 14: ಯುಎಸ್ ಮೂಲದ ಪ್ರಮುಖ ಐಟಿ ಕಂಪನಿಯಲ್ಲಿ ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತ ಸಾಧ್ಯತೆ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಹಿರಿಯ ಅಧಿಕಾರಿಯ ನಿರ್ಗಮನದ ಬಗ್ಗೆ ಸುದ್ದಿ ಬಂದಿದೆ.
ಕಳೆದ ಎರಡು ವರ್ಷಗಳಿಂದ ಉದ್ಯೋಗ ಕಡಿತ ಜಾರಿಯಲ್ಲಿದೆ. ಯುವ ಇಂಜಿನಿಯರ್ ಗಳಿಗೆ ಅವಕಾಶ ನೀಡಲು ಕಾಂಗ್ನಿಜೆಂಟ್ ಮುಂದಾಗಿದ್ದು, ಕಳೆದ ಆಗಸ್ಟ್ ನಲ್ಲಿ 200ಕ್ಕೂ ಅಧಿಕ ಉನ್ನತ ಹುದ್ದೆಯ ಅಧಿಕಾರಿಗಳನ್ನು ಸಂಸ್ಥೆ ತೊರೆಯುವಂತೆ ಸೂಚಿಸಲಾಗಿತ್ತು.
ಈಗ ಕಾಗ್ನಿಜೆಂಟ್ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷ, ಜಾಗತಿಕ ವಲಯದ ಮುಖ್ಯಸ್ಥರಾಗಿದ್ದ ದೇಬಶೀಶ್ ಚಟರ್ಜಿ ಅವರು 23 ವರ್ಷಗಳ ನಂತರ ಕಾಗ್ನಿಜೆಂಟ್ ತೊರೆಯಲು ಸಿದ್ಧರಾಗಿರುವ ಸುದ್ದಿ ಬಂದಿದೆ. ಬ್ಯಾಕಿಂಗ್ ಕ್ಷೇತ್ರದಿಂದ ಶೇ 35 ರಷ್ಟು ಆದಾಯ ಗಳಿಸುತ್ತಿರುವ ಕಾಗ್ನಿಜೆಂಟ್ ಪ್ರಗತಿಗೆ ದೇಬಶೀಶ್ ಕಾರಣರಾಗಿದ್ದರು.

ಮುಖ್ಯ ತಂತ್ರಗಾರಿಕಾ ತಜ್ಞ ಮಾಲ್ಕಂ ಫ್ರಾಂಕ್ ಅವರ ಬದಲಿಗೆ ಹಿರಿಯ ಅಧಿಕಾರಿ ಗಜೇನ್ ಕಂಡಯ್ಯ ಅವರನ್ನು ತರಲಾಗಿದೆ. ಬ್ಯಾಂಕಿಂಗ್ ಹಾಗೂ ಫೈನಾನ್ಸ್ ವಿಭಾಗಕ್ಕೆ ಪ್ರಸಾದ್ ಚಿತಾಮನೆನಿ ಅವರು ಮುಖ್ಯಸ್ಥರಾಗಲಿದ್ದಾರೆ.
ವಾರ್ಷಿಕವಾಗಿ ಸುಮಾರು 60 ಮಿಲಿಯನ್ ಡಾಲರ್ ಉಳಿತಾಯ ಮಾಡಲು ಐಟಿ ಸಂಸ್ಥೆ ಕಾಗ್ನಿಜೆಂಟ್ ಮುಂದಾಗಿದೆ. ಈ ನಿಟ್ಟಿನಲ್ಲಿ 400 ಕ್ಕೂ ಅಧಿಕ ಹಿರಿಯ ಕಾರ್ಯಕಾರಿ ಸಿಬ್ಬಂದಿಗೆ ಸ್ವಯಂ ಬೇರ್ಪಡುವಿಕೆ ಪ್ಯಾಕೇಜ್ (ವಿಎಸ್ ಪಿ) ಘೋಷಿಸಿ ಎರಡು ವರ್ಷಗಳು ಕಳೆದಿವೆ.
ಇದಲ್ಲದೆ ಜ್ಯೂನಿಯರ್ ಮಟ್ಟದಲ್ಲಿರುವ ಕೆಲ ಉದ್ಯೋಗಿಗಳನ್ನು ವಾರ್ಷಿಕ ಅಪ್ರೈಸಲ್ ಹೆಸರಿನಲ್ಲಿ ಕೆಲಸದಿಂದ ತೆಗೆಯಲು ನಿರ್ಧರಿಸಲಾಗಿದೆ. 150 ಮಂದಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಇನ್ನು 500 ಮಂದಿ ಈ ಸಾಲಿಗೆ ಸೇರುವ ನಿರೀಕ್ಷೆಯಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications