ಸಂಕಟದ ಸಂದರ್ಭದಲ್ಲೂ ಹೆಚ್ಚುವರಿ ಸಂಬಳ ಘೋಷಿಸಿದ ಐಟಿ ಕಂಪನಿ
ಬೆಂಗಳೂರು, ಮಾರ್ಚ್ 27: ಕೊರೊನಾವೈರಸ್ ಸೋಂಕಿನ ಭೀತಿ ಐಟಿ-ಬಿಟಿ ಉದ್ಯಮವನ್ನು ಬಹುವಾಗಿ ಕಾಡಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ಭಾರತದಲ್ಲಷ್ಟೇ ಅಲ್ಲದೆ ಅಮೆರಿಕ, ಯುರೋಪ್ ದೇಶಗಳಲ್ಲಿರುವ ಸಂಸ್ಥೆಯ ಕಚೇರಿಗಳನ್ನು ಬಂದ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಅನೇಕ ಕಂಪನಿಗಳು ವರ್ಕ್ ಫ್ರಂ ಹೋಂ ಆಯ್ಕೆ ಬಯಸಿದ್ದಾರೆ. ಕೆಲ ಐಟಿ ಪಾರ್ಕ್ ಗಳಲ್ಲಿ ಕದ್ದು ಮುಚ್ಚಿ ಕಚೇರಿಯಲ್ಲಿ ತುರ್ತು ಕೆಲಸ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಹಲವು ಕಂಪನಿಗಳಿಗೆ ಇದು ಅಪ್ರೈಸಲ್ ಅವಧಿ ಹೀಗಾಗಿ ಐಟಿ ಉದ್ಯೋಗಿಗಳಿಗೆ ತಿಂಗಳ ಸಂಬಳ ಹಾಗೂ ಹೈಕ್ ಎಷ್ಟು ಸಿಗಬಹುದು ಎಂಬ ಚಿಂತೆ ಕಾಡುತ್ತಿದೆ.
ಪುಣ್ಯಕ್ಕೆ ಇವತ್ತು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ನೀಡಿದ ಆರ್ಥಿಕ ಶಕ್ತಿಯಿಂದ ಟೆಕ್ಕಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಮುಂದಿನ ಮೂರು ತಿಂಗಳುಗಳ ಕಾಲ ಗೃಹಸಾಲ, ವಾಹನ ಸಾಲ, ಚಿನ್ನದ ಸಾಲ, ವೈಯಕ್ತಿಕ ಸಾಲ ಪಡೆದಿದ್ದರು ಸಾಲದ ಮೇಲಿನ ಇಎಂಐ ಕಂತನ್ನು ಕಟ್ಟುವುದು ಬೇಕಿಲ್ಲ ಎಂಬ ಶುಭ ಸುದ್ದಿ ಸಿಕ್ಕಿದೆ. ಹೀಗಾಗಿ ಸಾಲ ಮಾಡಿಯಾದ್ರು ತುಪ್ಪ ತಿನ್ನು ಎಂಬ ಮಾತನ್ನು ವೇದವಾಕ್ಯದಂತೆ ಪಾಲಿಸಿ, ಅಪಾರ್ಟ್ಮೆಂಟ್, ಎಸ್ ಯುವಿ ಖರೀದಿಸಿದ್ದ ಟೆಕ್ಕಿಗಳು ನೆಮ್ಮದಿಯಿಂದಿದ್ದಾರೆ.

ಈ ನಡುವೆ ಕಾಗ್ನಿಜೆಂಟ್ ಕಂಪನಿ ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತನ್ನ ಉದ್ಯೋಗಿಗಳಿಗೆ ಒಳ್ಳೆ ಸುದ್ದಿ ನೀಡಿದೆ. ಅಸೋಸಿಯೇಟ್ ಹಾಗೂ ಅದಕ್ಕಿಂತ ಕೆಳಮಟ್ಟದ ಸ್ತರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮೂಲ ಸಂಬಳದ ಆಧಾರದ ಮೇಲೆ ಶೇ 25 ರಷ್ಟು ಹೆಚ್ಚುವರಿ ಸಂಬಳವನ್ನು ಏಪ್ರಿಲ್ ತಿಂಗಳಿನಲ್ಲಿ ನೀಡಲಿದೆ. ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಸಂಸ್ಥೆ ಸಹಕರಿಸುತ್ತಿದೆ. ಈ ಹೆಚ್ಚುವರಿ ಸಂಬಳದಿಂದ ಸುಮಾರು 1,30,000 ಉದ್ಯೋಗಿಗಳಿಗೆ ಲಾಭವಾಗಲಿದೆ. ಅಮೆರಿಕದ ನ್ಯೂಜೆರ್ಸಿ ಮೂಲದ ಈ ಕಂಪನಿ 1994ರಲ್ಲಿ ಸ್ಥಾಪನೆಯಾಗಿದ್ದು, ಐಟಿ, ಡಿಜಿಟಲ್, ತಂತ್ರಜ್ಞಾನ ಸೇವೆ ಒದಗಿಸುತ್ತಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications