ಹಣದುಬ್ಬರ ಹೊಡೆತ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ ಏಪ್ರಿಲ್ 01: ಇತ್ತೀಚೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರು ತ್ತಲೇ ಇದೆ. ಈ ನಡುವೆ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಬ್ಬಕ್ಕೂ ಮುನ್ನ ವಾಣಿಜ್ಯ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆ ಮಾಡಲಾಗಿದ್ದು ಸಾರ್ವಜನಿಕರಿಗೆ ಬಾರೀ ತೊಂದರೆಯನ್ನುಂಟು ಮಾಡಿದೆ.
ಯುಗಾದಿ ಹಬ್ಬಕ್ಕೆ ಸಾರ್ವಜನಿಕರು ಹಣದುಬ್ಬರದ ದೊಡ್ಡ ಆಘಾತ ಎದುರಿಸುವಂತಾಗಿದೆ. ತಿಂಗಳ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಬೆಲೆಗಳನ್ನು ಹೆಚ್ಚಿಸಲಾಗಿದ್ದು ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗೆ 250 ರೂ. ಹೆಚ್ಚಳ ಮಾಡಲಾಗಿದೆ. ಇಂದಿನಿಂದ ಇದರ ಬೆಲೆ 2253 ರೂ. ಆಗಲಿದೆ.
ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗದಿದ್ದರೂ ವಾಣಿಜ್ಯ LPG ಸಿಲಿಂಡರ್ನ ಬೆಲೆಗಳನ್ನು ಹೆಚ್ಚಿಸಲಾಗಿದೆ. ಗಮನಿಸಬೇಕಾದ ಅಂಶವೆಂದರೆ ಮಾರ್ಚ್ 22 ರಂದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು 50ರೂ ಹೆಚ್ಚಿಸಲಾಗಿತ್ತು. ಆದರೆ ಅದಕ್ಕೂ ಮೊದಲು ಅಕ್ಟೋಬರ್ 6, 2021 ರಂದು ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಮತ್ತೆ ಬದಲಾಯಿಸಲಾಯಿತು. ನಂತರ ಇದರ ಬೆಲೆ 899.50 ಕ್ಕೆ ಏರಿಸಲಾಗಿದೆ.

6 ಅಕ್ಟೋಬರ್ 2021 ರಂದು ಬೆಲೆಯನ್ನು ಹೆಚ್ಚಿಸಲಾಯಿತು. ಅದರ ನಂತರ 14.2 ಕೆಜಿ ತೂಕದ ಸಬ್ಸಿಡಿ ರಹಿತ ಸಿಲಿಂಡರ್ ದೆಹಲಿಯಲ್ಲಿ 949.50 ರೂ ಆದರೆ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 2003.50ರೂ ಆಗಿದೆ. ಜೊತೆಗೆ 5 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ಈಗ ರೂ. 349 ತಲುಪಿತ್ತು.

ಇತ್ತೀಚೆಗಷ್ಟೇ ಕೆಲವು ಮಾಧ್ಯಮಗಳಲ್ಲಿ ಏಪ್ರಿಲ್ನಲ್ಲಿ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇಂದು ವಾಣಿಜ್ಯ ಸಿಲಿಂಡರ್ನ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಸಮಾಧಾನದ ಸಂಗತಿ. ಅದರ ಬೆಲೆಗಳಿ ಸ್ಥಿರವಾಗಿರುವುದು ಸಮಾಧಾನ ತಂದಿದೆ.
9 ದಿನದೊಳಗೆ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಹಣದುಬ್ಬರದಿಂದ ಜನಸಾಮಾನ್ಯರು ಪರದಾಡುತ್ತಿರುವುದು ಗೊತ್ತೇ ಇದೆ. ಕಳೆದ 9 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 8 ಬಾರಿ ಏರಿಕೆಯಾಗಿದೆ. ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಈ ಎಂಟು ದಿನಗಳ ಬೆಲೆ ಏರಿಕೆಯ ನಂತರ ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 101.81 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 93.07 ರೂ.ಗೆ ತಲುಪಿದ್ದರೆ, ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 116.72 ರೂ.ಗೆ ಏರಿದೆ.

ಹೀಗಾಗಿ ಸಾಮಾನ್ಯ ಜನರು ಅಸಮಾಧಾನಗೊಂಡಿದ್ದಾರೆ. ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಪ್ರತಿಭಟಿಸುತ್ತದೆ. ಇದು ಮಾತ್ರವಲ್ಲ, ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ, ಅಮುಲ್ ಮತ್ತು ಮದರ್ ಡೈರಿಯಂತಹ ದೊಡ್ಡ ಹಾಲು ಉತ್ಪಾದಕರು ಕೂಡ ಹಾಲಿನ ಬೆಲೆಯನ್ನು ಹೆಚ್ಚಿಸಿದ್ದಾರೆ. ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರದ ವಿರುದ್ಧ ಕಾಂಗ್ರೆಸ್ ಗುರುವಾರವೂ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಅಡುಗೆ ಎಣ್ಣೆ ಬೆಲೆ ಕೂಡ ಹೆಚ್ಚಾಗಿದ್ದರಿಂದ ಬೆಂಗಳೂರಿನಲ್ಲಿ ಹೋಟೆಲ್ ಊಟ-ತಿಂಡಿಗಳ ಬೆಲೆಯನ್ನೂ ಇಂದಿನಿಂದ ಏರಿಕೆ ಮಾಡಲಾಗಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications