SEBI Chief: ಸೆಬಿ ಮುಖ್ಯಸ್ಥೆ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕಾಂಗ್ರೆಸ್
ಸೆಕ್ಯುರಿಟೀಸ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅಧ್ಯಕ್ಷೆ ಮಾಧವಿ ಪುರಿ ಬುಚ್ ವಿರುದ್ಧ ಕಾಂಗ್ರೆಸ್ ಮತ್ತೊಂದು ಗಂಭೀರ ಆರೋಪ ಮಾಡಿದೆ. ಈಗಾಗಲೇ ಮಾಧವಿ ಪುರಿ ಅವರು ಐಸಿಐಸಿಐ ಸಂಸ್ಥೆಯಿಂದ ನಿವೃತ್ತಿಯಾದ ಬಳಿಕವೂ ಆದಾಯ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು, ಇದೀಗ ಮಾಧವಿ ಅವರು ಬಾಡಿಗೆಯಿಂದ 2.6 ಕೋಟಿ ರೂಪಾಯಿ ಆದಾಯ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಆಂತರಿಕ ವ್ಯಾಪಾರ ಮತ್ತು ಇತರ ಉಲ್ಲಂಘನೆಗಳ ಆರೋಪದಲ್ಲಿ ಸೆಬಿ ತನಿಖೆಯಲ್ಲಿರುವ ಕಂಪನಿಯಾದ ವೋಕಾರ್ಡ್ ಲಿಮಿಟೆಡ್ (Wockhardt Limited) ನೊಂದಿಗೆ ಸಂಯೋಜಿತವಾಗಿರುವ ಘಟಕದಿಂದ ಬಾಡಿಗೆ ಆದಾಯವನ್ನು ಪಡೆದಿದ್ದಾರೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. ಇದು ಸೆಬಿ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಾದಿಸಿದೆ.

ಮಾಧವಿ ಪುರಿ ಬುಚ್ ಅವರು 2018 ರಿಂದ 2024 ರ ನಡುವೆ ಮೊದಲು ಸೆಬಿಯ ಸಂಪೂರ್ಣ ಸದಸ್ಯರಾಗಿ ಮತ್ತು ನಂತರ ಅಧ್ಯಕ್ಷರಾಗಿ, ವೊಕಾರ್ಡ್ ಲಿಮಿಟೆಡ್ಗೆ ಸಂಯೋಜಿತವಾಗಿರುವ ಕರೋಲ್ ಇನ್ಫೋ ಸರ್ವೀಸಸ್ನಿಂದ ₹2.16 ಕೋಟಿ ಪಡೆದಿದ್ದಾರೆ ಎಂದು ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಗಂಭೀರ ಆರೋಪ ಮಾಡಿದ್ದಾರೆ.
ತನಿಖೆಯಲ್ಲಿರುವಾಗ ಹಣಕಾಸು ವ್ಯವಹಾರ
ಸೆಬಿ ವೋಕಾರ್ಡ್ ವಿರುದ್ಧ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಮಾಧವಿ ಪುರಿ ಅವರು ಈ ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ ಮಾರ್ಚ್ 2, 2022 ರಂದು ಸೆಬಿ ಅಧ್ಯಕ್ಷರನ್ನಾಗಿ ಮಾಧವಿ ಪುರಿ ಅವರನ್ನು ನೇಮಕ ಮಾಡಿದೆ. ಅವರು ತಮ್ಮ ಹಿಂದಿನ ಹಣಕಾಸಿನ ವ್ಯವಹಾರಗಳನ್ನು ಮುಂದುವರೆಸಬಹುದು ಎನ್ನುವ ಷರತ್ತಿನ ಮೇಲೆ ಅವರನ್ನು ನೇಮಕ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ವಜಾಗೊಳಿಸಲು ಆಗ್ರಹ
ಒಂದಲ್ಲ ಹಲವು ಆರೋಪಗಳು ಅವರ ಮೇಲಿರುವ ಕಾರಣ ತಕ್ಷಣವೇ ಅವರನ್ನು ಸೆಬಿ ಅಧ್ಯಕ್ಷೆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇಷ್ಟು ದೊಡ್ಡ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆಯ ಅಧ್ಯಕ್ಷರಾಗಿರುವವರು ಪಾರದರ್ಶಕವಾಗಿ ಕೆಲಸ ಮಾಡಬೇಕು, ಇವರ ಮೇಲೆ ಇಷ್ಟು ಆರೋಪ, ಪುರಾವೆಗಳು ಇದ್ದರೂ, ಸುಮ್ಮನಿರುವ ಪ್ರಧಾನಿ ಮೋದಿ ಅವರಿಗೆ ಇನ್ನೆಷ್ಟು ದಾಖಲೆಗಳನ್ನು ತೋರಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೇಳಿದ್ದಾರೆ.
ಮಾಧವಿ ಪುರಿ ಬುಚ್ ವಿರುದ್ಧ ಹಲವು ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಆರೋಪಗಳ ಬಗ್ಗೆ ತನಿಖೆ ಮಾಡಲು ನಿರ್ಧರಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications