ಅಪಮೌಲ್ಯೀಕರಣ: ಅಸಂಘಟಿತ ವ್ಯಾಪಾರಿಗಳಿಗೆ ಪೆಟ್ಟು
ನವದೆಹಲಿ, ಜನವರಿ 11: ಕೇಂದ್ರ ಸರ್ಕಾರ ಕೈಗೊಂಡ ಅಪನಗದೀಕರಣ ನಿರ್ಧಾರದಿಂದ ಜನಸಾಮಾನ್ಯರ ಜತೆಗೆ ಕಟ್ಟಡ ನಿರ್ಮಾಣ ರಂಗ ಹಾಗೂ ಅಸಂಘಟಿತ ವ್ಯಾಪಾರಿಗಳಿಗೂ ಬಿಸಿ ತಟ್ಟಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನ (ಎಸ್ ಬಿಐ) ಆರ್ಥಿಕ ಸಂಶೋಧನಾ ವಿಭಾಗ ಕೈಗೊಂಡಿದ್ದ ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.
ಕಳೆದ ತಿಂಗಳ 30ರಿಂದ ಜನವರಿ 3ರವರೆಗೆ ನಡೆಸಲಾಗಿರುವ ಈ ಸಮೀಕ್ಷೆಯಲ್ಲಿ ಶೇ. 63ರಷ್ಟು ವ್ಯಾಪಾರಿಗಳು ಕೇಂದ್ರ ಸರ್ಕಾರದ ಆದೇಶವನ್ನು ಸ್ವಾಗತಿಸಿದ್ದಾರೆ. ವ್ಯಾಪಾರಿ ವಲಯದಿಂದ ಈ ರೀತಿಯ ಬೆಂಬಲ ವ್ಯಕ್ತವಾಗಿದ್ದರೂ, ಕೇಂದ್ರ ಸರ್ಕಾರದ ನಿರ್ಧಾರವು ಕೆಲ ಸಣ್ಣ, ಮಧ್ಯಮ ಪ್ರಮಾಣದ ವ್ಯಾಪಾರಿಗಳ ನಿದ್ದೆಗೆಡಿಸಿದ್ದಂತೂ ಸತ್ಯವೆಂದು ಸಮೀಕ್ಷಾ ವರದಿ ಹೇಳಿದೆ.[ಅಪನಗದೀಕರಣ ಪೂರ್ವ ಬ್ಯಾಂಕ್ ವ್ಯವಹಾರಗಳ ಮೇಲೆ ತೆರಿಗೆ ಇಲಾಖೆ ಕಣ್ಣು]

ಈ ರೀತಿ ತೊಂದರೆಗೊಳಗಾದ ಪ್ರಮುಖವಾದ ಕ್ಷೇತ್ರಗಳೆಂದರೆ, ಕಟ್ಟಡ ನಿರ್ಮಾಣ ರಂಗ ಹಾಗೂ ಬೀದಿಬದಿಯ ವ್ಯಾಪಾರಿಗಳುಳ್ಳ ಅಸಂಘಟಿತ ವಹಿವಾಟು ರಂಗ.
ಇನ್ನುಳಿದಂತೆ, ಜವಳಿ ವ್ಯಾಪಾರಗಳು, ಸಗಟು ಮಾರಾಟಗಾರರು, ಆಟೋಮೊಬೈಲ್ ಉದ್ದಿಮೆ ಹೊಂದಿರುವವರು, ಮೆಡಿಕಲ್ ಶಾಪ್ ಮಾಲೀಕರು ಸಹ ತೊಂದರೆಗೊಳಗಾಗಿದ್ದರೆಂದು ವರದಿಯಲ್ಲಿ ಹೇಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications