2020-21 ರಲ್ಲಿ ಭಾರತದ ಜಿಡಿಪಿ ಶೇ. 1.5 ಕ್ಕೆ ಇಳಿಕೆ: ಸಮೀಕ್ಷೆ
ನವದೆಹಲಿ, ಜೂನ್ 5: ಕೊರೊನಾವೈರಸ್ ನಿಂದಾಗಿ ಭಾರತಕ್ಕೆ ಆರ್ಥಿಕ ಹೊಡೆತದ ಬಿಸಿ ಕೂಡಾ ದೊಡ್ಡ ಪ್ರಮಾಣದಲ್ಲಿ ತಟ್ಟಿದೆ. ಈ ನಡುವೆ ಭಾರತದ ಜಿಡಿಪಿ ಪ್ರಮಾಣ 2020-21 ರಲ್ಲಿ ಶೇ. 1.5 ಕ್ಕೆ ಇಳಿಕೆಯಾಗಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿರುವ ಸಮೀಕ್ಷೆಯಲ್ಲಿ ಹೇಳಲಾಗಿದೆ.
ಸತತ 8 ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಕುಸಿತ ಕಂಡಿದೆ. 2019-20ರ ಅವಧಿಯಲ್ಲಿ ಶೇ 4.2 ರಷ್ಟು ಜಿಡಿಪಿ ದಾಖಲಾಗಿದ್ದು, ಇದು ವರ್ಷದಿಂದ ವರ್ಷಕ್ಕೆ ಹೋಲಿಕೆಯಲ್ಲಿ 11 ವರ್ಷಗಳಲ್ಲೆ ಮಹಾ ಕುಸಿತ ಎನ್ನಲಾಗಿತ್ತು. 2018-19ರಲ್ಲಿ ಜಿಡಿಪಿ ಶೇ 6.1ರಷ್ಟಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ(ಎನ್ಎಸ್ಒ) ಇತ್ತೀಚೆಗೆ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಭಾರತದಲ್ಲಿ ಮೇ ತಿಂಗಳಲ್ಲಿ Current Situation Index ಕುಸಿದಿದೆ, ಹೀಗಾಗಿ, ಗ್ರಾಹಕರಿಗೆ ವಿಶ್ವಾಸ ಮೂಡಿಲ್ಲ, ಭವಿಷ್ಯದ ನಿರೀಕ್ಷೆ ಸೂಚ್ಯಂಕ(Future Expectations Index) ಕೂಡಾ ನೆಲಕಚ್ಚಿದೆ. ಆದರೆ, 2021-22 ರಲ್ಲಿ ಜಿಡಿಪಿ ಗಣನೀಯ ಚೇತರಿಕೆ ಕಾಣಲಿದ್ದು, ಶೇ. 7.2 ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ Consumer Confidence Survey ತಿಳಿಸಿದೆ.

2020-21 ರಲ್ಲಿ ಖಾಸಗಿ ಬಳಕೆ ಮತ್ತು ವೆಚ್ಚಗಳ ಪ್ರಮಾಣ ಶೇ. 0.5 ಇಳಿದರೂ, ಮುಂದಿನ ವರ್ಷ ದಾಖಲೆಯ ಶೇ.6.9ಕ್ಕೆ ಏರಿಕೆಯಾಗಲಿದೆ ಎಂಬ ವಿಶ್ವಾಸವನ್ನು ಆರ್ ಬಿಐ ಸಮೀಕ್ಷೆ ನೀಡಿದೆ.
ಕೊವಿಡ್ 19 ಮಹಾಮಾರಿ ನಡುವೆ ಲಾಕ್ಡೌನ್ ಸಡಿಲಿಕೆಯಾಗಿ ಗ್ರಾಹಕರು ಖರೀದಿಯತ್ತ ಮನಸ್ಸು ಮಾಡಿದ್ದಾರೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತಾ ಲಕ್ನೋ, ಮುಂಬೈ ಹಾಗೂ ಪಾಟ್ನಾ ಮುಂತಾದ ನಗರಗಳಲ್ಲಿ ಫೋನ್ ಕರೆ ಮೂಲಕ ಸಮೀಕ್ಷೆ ಮಾಡಲಾಗಿದೆ. ಸುಮಾರು 5761 ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.
ಜಿಡಿಪಿ ದರ ಇತಿಹಾಸ:
2012-13ರಲ್ಲಿ ಜಿಡಿಪಿ ದರ ಶೇ 4.3ಕ್ಕೆ ಕುಸಿದಿತ್ತು. ನಂತರ ಏಳು ತ್ರೈಮಾಸಿಕ ಅವಧಿಗಳಲ್ಲಿ ಸತತ ಕುಸಿತ ಅನುಭವಿಸಿತ್ತು. 2017-18ರ 4ನೇ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ ದರ ಶೇ 8.13 ರಷ್ಟಿತ್ತು. 2018-19ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಅದು ಶೇ 7.95ಕ್ಕೆ ಕುಸಿತ ಕಂಡಿತ್ತು. 2018-19ರ 2ನೇ ತ್ರೈಮಾಸಿಕ ಅವಧಿಯಲ್ಲಿ 7.00%ಕ್ಕೆ ಇಳಿದಿತ್ತು. 2018-19ರ 3ನೇ ತ್ರೈಮಾಸಿಕ ಅವಧಿಯಲ್ಲಿ 6.58%ಕ್ಕೆ ಹಿನ್ನಡೆ ಅನುಭವಿಸಿತ್ತು. 2018-19ರ ಕೊನೆಯ ಹಾಗೂ 4ನೇ ತ್ರೈಮಾಸಿಕ ಅವಧಿಯಲ್ಲಿಯೂ ಜಿಡಿಪಿ ತತ್ತರಿಸಿತ್ತು. ಆಗ ಅದು 5.83%ರ ಸಾಧನೆ ಮಾಡಿತ್ತು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications