ಫಿಕ್ಸೆಡ್ ಡೆಪಾಸಿಟ್ ಮೊರೆ ಹೋದ ಅನಿವಾಸಿ ಭಾರತೀಯರು: ಏನು ಉಪಯೋಗ?
ನವದೆಹಲಿ,ಜುಲೈ 23: ಸದ್ಯ ವಿಶ್ವದ ಯಾವ ಮೂಲೆಗೆ ಹೋದರೂ ಕೊರೊನಾವೈರಸ್ ಮತ್ತು ಅದರ ವ್ಯತಿರಿಕ್ತ ಪರಿಣಾಮಗಳೇ ಕಾಣಸಿಗುತ್ತವೆ. ಲಕ್ಷಾಂತರ ಸಾವು-ನೋವು, ಕೋಟ್ಯಾಂತರ ಉದ್ಯೋಗ ನಷ್ಟದ ಜೊತೆಗೆ ಆರ್ಥಿಕತೆಯು ಮಂದಗತಿಯಲ್ಲಿದೆ. ಹಲವು ದೇಶಗಳು ಲಾಕ್ಡೌನ್ ತೆರವುಗೊಳಿಸಿದರೂ ಜಾಗತಿಕ ಆರ್ಥಿಕತೆ ಚೇತರಿಕೆಗೆ ಇನ್ನೂ ಹೆಚ್ಚಿನ ಸಮಯ ಬೇಕಾಗಬಹುದು.
Recommended Video
ಕೊರೊನಾಗೆ ಲಸಿಕೆ ಸಿಗದೇ ಇರುವುದು ಹೂಡಿಕೆದಾರರಲ್ಲಿ ಅನಿಶ್ಚಿತತೆ ಮನೆ ಮಾಡಿದೆ. ಸುರಕ್ಷಿತ ಹೂಡಿಕೆಗಳಾದ ಚಿನ್ನದ ಮೇಲಿನ ಹೂಡಿಕೆಗೆ ಒಲವು ತೋರಿದ್ದಾರೆ. ಇದರ ನಡುವೆ ಅನಿವಾಸಿ ಭಾರತೀಯರು ನಿಶ್ಚಿತ ಠೇವಣಿಗೆ ಮೊರೆ ಹೋಗಿದ್ದಾರೆ.

ನಿಶ್ಚಿತ ಠೇವಣಿಯ ಕಡೆಗೆ ಅನಿವಾಸಿ ಭಾರತೀಯರ ಆಸಕ್ತಿ
ಹೌದು, ಇತ್ತೀಚಿನ ಕೆಲ ತಿಂಗಳಲ್ಲಿ ನಿಶ್ಚಿತ ಠೇವಣಿಯಲ್ಲಿ ಅನಿವಾಸಿ ಭಾರತೀಯರ ಆಸಕ್ತಿ ಹೆಚ್ಚಾಗಿದೆ. ಇದಕ್ಕೆ ಒಂದು ಉದಾಹರಣೆ ಕೇರಳದ ಬ್ಯಾಂಕುಗಳಲ್ಲಿ ಇದೇ ಮೊದಲ ಬಾರಿಗೆ 2 ಲಕ್ಷ ಕೋಟಿ ರುಪಾಯಿಗಳಷ್ಟು ನಿಶ್ಚಿತ ಠೇವಣಿಯನ್ನು ಇಡಲಾಗಿದೆ.

ಉಳಿತಾಯದ ಹಣವನ್ನು ಸುರಕ್ಷಿತವಾಗಿಸಲು ಬ್ಯಾಂಕುಗಳಲ್ಲಿ ಠೇವಣಿ
ಕೊರೊನಾವೈರಸ್ ವಿಶ್ವದ ಆರ್ಥಿಕತೆಯನ್ನು ನಲುಗುವಂತೆ ಮಾಡಿದ್ದು ಈ ಸಮಯದಲ್ಲಿ ಕಷ್ಟಪಟ್ಟು ದುಡಿದ ಹಣವನ್ನು ಹೂಡಿಕೆ ಮಾಡುವ ಧೈರ್ಯ ಬಹುತೇಕರಲ್ಲಿ ಕಡಿಮೆ. ಹೀಗಾಗಿ ವಿದೇಶದಲ್ಲಿ ಕೆಲಸ ಮಾಡುವ ಅನೇಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಉಳಿತಾಯದ ಹಣವನ್ನು ನಿಶ್ಚಿತ ಠೇವಣಿಯಾಗಿ ಪರಿವರ್ತಿಸುತ್ತಿದ್ದಾರೆ.

ಮನೆ, ಜಮೀನು ಖರೀದಿಸುತ್ತಿದ್ದವರು ನಿಶ್ಚಿತ ಠೇವಣಿಗಳ ಮೊರೆ
ಈ ಮೊದಲು ಅರಬ್ ರಾಷ್ಟ್ರಗಳು ಸೇರಿದಂತೆ ವಿದೇಶದಲ್ಲಿ ದುಡಿಯುತ್ತಿದ್ದ ಭಾರತೀಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಜಮೀನು, ಆಸ್ತಿ ಖರೀದಿಗೆ ಬಳಸುತ್ತಿದ್ದರು. ಆದರೆ ಇದೀಗ ಅದೆಲ್ಲವನ್ನು ಬಿಟ್ಟು ತವರಿನಲ್ಲಿ ಬ್ಯಾಂಕುಗಳಲ್ಲಿ ಠೇವಣಿ ಸ್ವರೂಪದಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

ನಿಶ್ಚಿತ ಠೇವಣಿಯಿಂದ ಏನು ಉಪಯೋಗ?
ಕಷ್ಟಪಟ್ಟು ಹಣ ಉಳಿತಾಯ ಮಾಡಿ, ಭವಿಷ್ಯಕ್ಕೆ ಉಪಯೋಗಕ್ಕೆ ಬರಬಹುದು ಎಂದು ಹಣವನ್ನು ನಿಶ್ಚಿತ ಠೇವಣಿ(ಫಿಕ್ಸೆಡ್ ಡೆಪಾಸಿಟ್) ಮಾಡುವುದು ಸಾಮಾನ್ಯ. ಅದರಲ್ಲೂ ಹಿರಿಯ ನಾಗರೀಕರು ತಮ್ಮ ಹಣವನ್ನು ಸುರಕ್ಷಿತವಾಗಿ ಆದಾಯ ಬರುವಂತೆ ಹೂಡಿಕೆ ಮಾಡುವುದು ನಿಶ್ಚಿತ ಠೇವಣಿಗಳಲ್ಲಿ.
ಅನಿವಾಸಿ ಭಾರತೀಯರು ಕೂಡ ಕೊರೊನಾ ಬಿಕಟ್ಟಿನ ಈ ಸಮಯದಲ್ಲಿ ತಮ್ಮ ಹಣ ಸುರಕ್ಷಿತವಾಗಿರಲಿ ಎಂದು ನಿಶ್ಚಿತ ಠೇವಣಿಗಳ ಮೊರೆ ಹೋಗಿದ್ದಾರೆ. ಅದರಲ್ಲೂ ಹಿರಿಯ ನಾಗರೀಕರ ಹೆಸರಿನಲ್ಲಿ ಇಟ್ಟರೆ ಹೆಚ್ಚುವರಿ 0.50 ಪರ್ಸೆಂಟ್ ಬಡ್ಡಿ ದೊರೆಯುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications