ಆಧಾರ್ ಬಳಸಿ ಜನ್ಮ ದಿನಾಂಕ ತಿದ್ದುಪಡಿ ಮಾಡಲು EPFO ಒಪ್ಪಿಗೆ
ಬೆಂಗಳೂರು, ಏಪ್ರಿಲ್ 6: ಕೊವಿಡ್19 ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ವಿಥ್ ಡ್ರಾ, ಆನ್ ಲೈನ್ ತಿದ್ದುಪಡಿ ಕುರಿತಂತೆ ಇಪಿಎಫ್ಒ ಹೊಸ ಪ್ರಕಟಣೆ ಹೊರಡಿಸಿದೆ. ಈಗ ಜನ್ಮದಿನಾಂಕ ತಿದ್ದುಪಡಿ ಕುರಿತಂತೆ ಇರುವ ನಿಯಮ ಪರಿಷ್ಕರಿಸಲಾಗಿದೆ.
ಆರ್ಥಿಕ ಪ್ಯಾಕೇಜ್ ಘೋಷಿಸಿದ್ದ ಸರ್ಕಾರ, ಇಪಿಎಫ್ಒ ನಿಯಂತ್ರಣ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಶೇ 75 ರಷ್ಟು ಹಣ ಅಥವಾ ಮೂರು ತಿಂಗಳ ಸಂಬಳ ವಿಥ್ ಡ್ರಾ ಮಾಡಲು ಅನುಮತಿ ಸಿಗಲಿದೆ. ಇದರಿಂದ 4 ಕೋಟಿ 80 ಲಕ್ಷ ಚಂದಾದಾರರಿಗೆ ಅನುಕೂಲವಾಗಲಿದೆ. ಆದರೆ ಈಗಾಗಲೇ ಸರಿಯಾದ ಯುಎಎನ್ ಕೆವೈಸಿ ಹೊಂದಿರುವ ಚಂದಾದಾರರು ಮಾತ್ರ ಸುಲಭವಾಗಿ ವಿಥ್ ಡ್ರಾ ಮಾಡಿಕೊಳ್ಳಬಹುದಾಗಿದೆ.
ಭವಿಷ್ಯ ನಿಧಿ ಚಂದಾದಾರರ ಖಾತೆಯಲ್ಲಿ ನಮೂದಿಸಿರುವ ಜನ್ಮ ದಿನಾಂಕದಲ್ಲಿ ಏನಾದರೂ ತಪ್ಪಿದ್ದು ಬದಲಾವಣೆ ಮಾಡಬೇಕಿದ್ದರೆ ತುಂಬಾ ಕಷ್ಟವಾಗುತ್ತಿತ್ತು. ಈಗ ಇದನ್ನು ಸರಿಪಡಿಸಲು ಆಧಾರ್ ಕಾರ್ಡ್ ಬಳಸಲು ಅನುಮತಿ ಸಿಕ್ಕಿದೆ. ಆಧಾರ್ ಕಾರ್ಡನ್ನು ಪುರಾವೆಯಾಗಿ ಸಲ್ಲಿಸಿ ಆನ್ ಲೈನ್ ನಲ್ಲಿ ಜನ್ಮ ದಿನಾಂಕ ಸರಿಪಡಿಸಿಕೊಳ್ಳಲು ಇಪಿಎಫ್ ಒ ಒಪ್ಪಿಗೆ ನೀಡಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪಿಎಫ್ ಸಂಬಂಧಿಸಿದ ಆನ್ ಲೈನ್ ಸೇವೆಗಳು ಚಂದಾದಾರರಿಗೆ ಸೂಕ್ತವಾಗಿ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಇಪಿಎಫ್ ಒ ಅನೇಕ ವಿಧಾನಗಳನ್ನು ಜಾರಿಗೆ ತಂದಿವೆ. ಇತ್ತೀಚೆಗೆ ಪ್ರಕಟಿಸಿರುವ ಪರಿಷ್ಕೃತ ನಿಯಮದ ಪ್ರಕಾರ, ಜನ್ಮ ದಿನಾಂಕದಲ್ಲಿ 3 ವರ್ಷಕ್ಕಿಂತ ಕಡಿಮೆ ವ್ಯತ್ಯಾಸ ಇದ್ದರೆ ಮಾತ್ರ, ಅಂಥಾ ಪ್ರಕರಣಗಳಲ್ಲಿ ಮಾತ್ರ ಆಧಾರ್ ಕಾರ್ಡ್ ಪುರಾವೆಯಾಗಿ ಬಳಸಲು ಅನುಮತಿ ನೀಡಲಾಗಿದೆ.ಆದರೆ, ಈಗಾಗಲೇ ಸರಿಯಾದ ಯುಎಎನ್ ಕೆವೈಸಿ ಹೊಂದಿರುವ ಚಂದಾದಾರರು ಈ ಬದಲಾವಣೆ ಬಯಸಿದ್ದರೆ ಮಾಡಬಹುದು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications