ಬೆಳಗಾವಿ, ಮಂಗಳೂರಿನಲ್ಲಿ ಇಂಟೆಲ್ ಚಿಪ್ ಘಟಕ ಸ್ಥಾಪನೆಗೆ ಆಹ್ವಾನ
ಬೆಂಗಳೂರು, ಜೂನ್ 3: ಬೆಳಗಾವಿ, ಮಂಗಳೂರಿನಲ್ಲಿ ಚಿಪ್ ಉತ್ಪಾದನಾ ಘಟಕ ಸ್ಥಾಪಿಸುವುದಾದರೆ ಸರ್ಕಾರದಿಂದ ಎಲ್ಲ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ಇಂಟೆಲ್ ಸಂಸ್ಥೆಗೆ ಭರವಸೆ ನೀಡಿದ್ದಾರೆ. ಇದೇ ವೇಳೆ ಇಂಟೆಲ್ ಇಂಡಿಯಾ ಬಿಸಿನೆಸ್ ಆಪರೇಷನ್ನ ನಿರ್ದೇಶಕ ಮಾನಸ್ ದಾಸ್ ಒಂದು ಕೋಟಿ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.
"ಕೊವಿಡ್ 19 ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಇಂಟೆಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಿರುವುದು ಸಂತಸದ ವಿಷಯ. ಸರ್ಕಾರದ ಪರವಾಗಿ ಅವರಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಡಾ. ಅಶ್ವಥ್ ಹೇಳಿದರು.
ಇಂಟೆಲ್ ಭಾರತದ ಮುಖ್ಯಸ್ಥೆ ನಿವೃತ್ತಿ ರಾಯ್ ಹಾಗೂ ಸಂಸ್ಥೆಯ ಅಧಿಕಾರಿಗಳೊಂದಿಗೆ ಡಾ. ಅಶ್ವತ್ಥನಾರಾಯಣ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

"ಮಂಗಳೂರಿನಲ್ಲೇ ಬಂದರು ಇದೆ, ಬೆಳಗಾವಿಗೆ ಗೋವಾ ಬಂದರು ಸಮೀಪದಲ್ಲಿದೆ. ಈ ಎರಡೂ ಕಡೆಗಳಲ್ಲಿ ಉತ್ಪಾದನಾ ಘಟಕ ಸ್ಥಾಪನೆಗೆ ಅಗತ್ಯ ಸ್ಥಳಾವಕಾಶವೂ ಇದೆ. ಇಂಟೆಲ್ ಸಂಸ್ಥೆ ಈ ಅವಕಾಶವನ್ನು ಬಳಸಿಕೊಳ್ಳುವುದಾದರೆ, ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಭರವಸೆ ನೀಡಲಾಯಿತು,"ಎಂದು ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.

ಇಂಟೆಲ್ ಅಧಿಕಾರಿಗಳಾದ ಅನಂತನಾರಾಯಣ್, ಜಿತೇಂದ್ರ ಚಡ್ಡ, ಮಾನಸ್ ದಾಸ್, ಆನಂದ್ ದೇಶಪಾಂಡೆ, ಅಂಜಲಿ ರಾವ್, ವರ್ಟಿಕಲ್ ಸಲ್ಯೂಶನ್ ಗ್ರೂಪ್ನ ಉಪಾಧ್ಯಕ್ಷ ಕಿಶೋರ್ ರಾಮಿಶೆಟ್ಟಿ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications