ಪೆಟ್ರೋಲ್ ದರ ದಿನಂಪ್ರತಿ ಪರಿಷ್ಕರಣೆ: ಜೂನ್ 16ರಿಂದ ಜಾರಿ
ದಿನದ ಲೆಕ್ಕಾಚಾರದಲ್ಲಿ ತೈಲ ಬೆಲೆ ಪರಿಷ್ಕರಣೆ ಜಾರಿಗೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 16ರಿಂದ ನೂತನ ಪದ್ಧತಿ ಅನುಷ್ಠಾನಕ್ಕೆ ಸರ್ಕಾರಿ ಸ್ವಾಮ್ಯದ ಕಂಪನಿಗಳ ಈ ನಿರ್ಧಾರಕ್ಕೆ ರಿಲಯನ್ಸ್ ಹಾಗೂ ಎಸ್ಸಾರ್ ಕಂಪನಿಗಳಿಂದಲೂ ಸಹಮತ.
ನವದೆಹಲಿ, ಜೂನ್ 16: ಪ್ರತಿ ದಿನದ ಮಾರುಕಟ್ಟೆ ದರದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಪರಿಷ್ಕರಣೆ ಪದ್ಧತಿ ಇದೇ ತಿಂಗಳ 16ರಿಂದ ಜಾರಿಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು (ಒಎಂಸಿ) ದಿನದ ಆಧಾರದಲ್ಲಿ ತೈಲ ಬೆಲೆ ಪರಿಷ್ಕರಣೆಗೆ ಒಲವು ತೋರಿದ್ದವು. ಈ ಸುದ್ದಿ ಕೆಲವು ದಿನಗಳ ಹಿಂದೆಯೇ ಮಾಧ್ಯಮಗಳಲ್ಲಿ ಹರಿದಾಡಿತ್ತು. ಆದರೆ, ಇದಕ್ಕೆ ದಿನಾಂಕ ನಿಗದಿಯಾಗಿರಲಿಲ್ಲ.[ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲು ಚಿಂತನೆ]

ಇದೀಗ, ದಿನಾಂಕ ನಿಗದಿಯಾಗಿದ್ದು ಜೂನ್ 16ರಿಂದ ಆ ಪದ್ಧತಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಮೇ 1ರಿಂದ ಪಾಂಡಿಚ್ಚೇರಿ, ಚಂಡೀಗಢ, ಜೆಮ್ಷೆಡ್ ಪುರ, ಉದಯ್ ಪುರ ಹಾಗೂ ವಿಶಾಖಪಟ್ಟಣಂನಲ್ಲಿ ಈ ಹೊಸ ಪದ್ಧತಿಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಇದು ಯಶಸ್ವಿಯಾಗಿದ್ದು ಜೂ. 16ರಿಂದ ದೇಶಾದ್ಯಂತ ಜಾರಿಗೊಳಿಸಲಾಗುವುದು ಎಂದು ತೈಲ ಕಂಪನಿಗಳು ಹೇಳಿವೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ನಿರ್ಧಾರಕ್ಕೆ ಇದೀಗ ರಿಲಯನ್ಸ್ ಹಾಗೂ ಎಸ್ಸಾರ ಕಂಪನಿಗಳೂ ಸೈ ಎಂದಿದ್ದು, ಅವೂ ಸಹ ದಿನದ ಮಾರುಕಟ್ಟೆ ಆಧಾರದಲ್ಲಿ ತೈಲ ಬೆಲೆಯನ್ನು ಪರಿಷ್ಕರಿಸಲು ಮುಂದಾಗಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications