ಏನಿದು ಆಧಾರ್ ಆಧಾರಿತ ಪೇಮೆಂಟ್ App? ಹೇಗೆ ಕಾರ್ಯ ನಿರ್ವಹಿಸುತ್ತೆ?
ಬೆಂಗಳೂರು, ಡಿಸೆಂಬರ್ 25: ಕೇಂದ್ರ ಸರ್ಕಾರದ ದೇಶದ ಜನತೆಗೆ ಕ್ರಿಸ್ಮಸ್ ಉಡುಗೊರೆ ರೂಪವಾಗಿ ಆಧಾರ್ ಆಧಾರಿತ ಪೇಮೆಂಟ್ ಅಪ್ಲಿಕೇಷನ್ ಹೊರತಂದಿದೆ. ಡಿಜಿಟಲ್ ಇಂಡಿಯಾದ ಭಾಗವಾಗಿರುವ ಈ ಆಂಡ್ರಾಯ್ಡ್ ಆಧಾರಿತ ಆಪ್ ಮೂಲಕ ಸುಲಭವಾಗಿ ಇ ಪೇಮೆಂಟ್ ಮಾಡಬಹುದು.
ಡೆಬಿಟ್/ಕ್ರೆಡಿಟ್ ಕಾರ್ಡ್ಗಳ ಮೂಲಕ ವ್ಯವಹರಿಸುವುದಕ್ಕೆ ಬದಲಾಗಿ ಅತ್ಯಂತ ಸುಲಭವಾಗಿ ನೂತನ ಅಪ್ಲಿಕೇಷನ್ ಬಳಸಬಹುದಾಗಿದೆ. ನಗದು ರಹಿತ ವ್ಯವಹಾರ ಜಾರಿಗೊಳಿಸಲು ಈ ಅಪ್ಲಿಕೇಷನ್ ಹೊರ ತರಲಾಗಿದೆ. ಪೇಟಿಎಂ, ಫ್ರೀಚಾರ್ಚ್ ಮುಂತಾದ ಮೊಬೈಲ್ ವ್ಯಾಲೆಟ್ ಗಳಿಗೆ ಸಮನಾಗಿ ಆಧಾರ್ ಪೇಮೆಂಟ್ ಅಪ್ಲಿಕೇಷನ್ ಬಳಸಬಹುದಾಗಿದೆ.
ಆಂಡ್ರಾಯ್ಡ್ ಫೋನ್ ನಲ್ಲಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಯುಎಡಿಎಐ, ಭಾರತದ ರಾಷ್ಟ್ರೀಯ ಪಾವತಿ ಸಹಕಾರ ಸಂಘ ಮತ್ತು ಐಡಿಎಫ್ಸಿ ಬ್ಯಾಂಕ್ ಈ ಅಪ್ಲಿಕೇಷನ್ ರೂಪಿಸಿದೆ.

ಹೇಗೆ ಕಾರ್ಯ ನಿರ್ವಹಿಸಲಿದೆ?: ಮೊದಲಿಗೆ ಈ ಅಪ್ಲಿಕೇಷನ್ ಬಳಸಲು ನಿಮ್ಮ ಬ್ಯಾಂಕ್ ಖಾತೆಯನ್ನು ನಿಮ್ಮ ಆಧಾರ್ ಸಂಖ್ಯೆ ಜತೆ ಜೋಡಣೆ ಮಾಡಬೇಕು. ಇನ್ನೊಂದೆಡೆ ಮಾರಾಟಗಾರರು ಈ ಅಪ್ಲಿಕೇಷನ್(Merchant App) ಬಳಸಬಹುದಾಗಿದೆ.
ಈ ಮೂಲಕ ಮಾಸ್ಟರ್, ವೀಸಾ ಕಾರ್ಡ್ ಮೂಲಕ ಹಣ ಪಾವತಿ ಮಾಡಲು ಕೊಡಬೇಕಿದ್ದ ಶುಲ್ಕಕ್ಕೆ ಕಡಿವಾಣ ಬೀಳಲಿದೆ.ಮಾರಾಟಗಾರರು ಈ ಅಪ್ಲಿಕೇಷನ್ ಜತೆಗೆ ಬಯೋಮೆಟ್ರಿಕ್ ಸ್ಕ್ಯಾನರ್ ಕೂಡಾ ಹೊಂದಿರಬೇಕು. ಅಪ್ಲಿಕೇಷನ್ ಹಾಗೂ ಸ್ಕ್ಯಾನರ್ ಎರಡನ್ನು ಹೊಂದಿಸಿದ ಬಳಿಕ ಅಪ್ಲಿಕೇಷನ್ ಸುಲಭವಾಗಿ ಬಳಸಬಹುದಾಗಿದೆ.
ಗ್ರಾಹಕರು ಏನು ಮಾಡ್ಬೇಕು?: ಯಾವುದಾದರೂ ವಸ್ತು ಖರೀದಿ ಮಾಡುವಾಗ ಮಾರಾಟಗಾರರ ಬಳಿ ಆಧಾರ್ ಮರ್ಚೆಂಟ್ ಅಪ್ಲಿಕೇಷನ್ ಇದೆಯೇ ಎಂದು ಪ್ರಶ್ನಿಸಬೇಕು. ಅಪ್ಲಿಕೇಷನ್ ಇದ್ದರೆ, ನಿಮ್ಮ ಆಧಾರ್ ವಿವರಗಳನ್ನು ಅವರೊಂದಿಗೆ ಹಂಚಿಕೊಳ್ಳಬೇಕು. ನಂತರ ಆಧಾರ್ ಜತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರ ಲಭ್ಯವಾಗುತ್ತದೆ. ಬೇಕಾದ ಬ್ಯಾಂಕ್ ಬಳಸಿ ವ್ಯವಹರಿಸಬೇಕು. ಇದರ ಜತೆಗೆ ಬಯೋಮೆಟ್ರಿಕ್ ಸ್ಕ್ಯಾನರ್ ಮೂಲಕ ವ್ಯವಹಾರವನ್ನು ಸುರಕ್ಷಿತಗೊಳಿಸಲಾಗುತ್ತದೆ.
ಎರಡು ಖಾತೆಗಳಿದ್ದರೆ ಏನು ಮಾಡುವುದು?: ಗ್ರಾಹಕರು ಒಂದೇ ಬ್ಯಾಂಕಿನಲ್ಲಿ ಎರಡು ಖಾತೆಗಳನ್ನು ಹೊಂದಿದ್ದರೆ, ಎರಡು ಖಾತೆಗಳಿಗೂ ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಈ ರೀತಿ ಆಧಾರ್ ಜೋಡಣೆಯುಳ್ಳ ಬ್ಯಾಂಕ್ ಖಾತೆ ಮೂಲಕ ಸುಲಭವಾಗಿ ಯಾವುದೇ ಕುಗ್ರಾಮದಲ್ಲಿ ಬೇಕಾದರೂ ವ್ಯವಹರಿಸಬಹುದು ಎಂದು ಯುಐಎಡಿಐ ಹೇಳಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications