Breaking: ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ, ಜುಲೈ 6: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರು ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿವೆ.
ಪರಿಷ್ಕೃತ ದರ ಪಟ್ಟಿಯಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕುಟುಂಬಗಳು ಪ್ರತಿ ಸಿಲಿಂಡರ್ಗೆ 1,053 ರೂ. ಪಾವತಿಸಬೇಕಾಗುತ್ತದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸಿಲಿಂಡರ್ ಬೆಲೆ 1,052.50 ರೂ., ಕೋಲ್ಕತ್ತಾದಲ್ಲಿ 1,079 ರೂ. ಮತ್ತು ಚೆನ್ನೈ ನಿವಾಸಿಗಳು 1,068.50 ರೂ. ತೆರಬೇಕಾಗುತ್ತದೆ. ಬೆಂಗಳೂರಲ್ಲಿ ದರ 1005. 50 ರೂ ನಂತಿದೆ. ದೇಶದ ಪ್ರಮುಖ ನಗರಗಳ ಎಲ್ ಪಿ ಜಿ ದರ ತಿಳಿಯಲು ಕ್ಲಿಕ್ ಮಾಡಿ
Domestic 14.2 kg LPG cylinder's prices increased by Rs 50/cylinder with effect from today. Domestic LPG cylinder will now cost Rs 1053 in Delhi. 5kg domestic cylinder price increase by Rs 18/cylinder. 19kg commercial cylinder prices decreased by Rs 8.50.
— ANI (@ANI) July 6, 2022
ಇದೇ ವೇಳೆ 5ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ಕೂಡಾ ಪರಿಷ್ಕರಿಸಲಾಗಿದ್ದು, 18 ರು ಏರಿಕೆ ಕಂಡಿದೆ. 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 8.5 ರು ಪ್ರತಿ ಸಿಲಿಂಡರ್ ನಂತೆ ಇಳಿಕೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಜುಲೈ 1ರಂದು ಇಳಿಕೆ ಮಾಡಲಾಗಿತ್ತು. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂಪಾಯಿ 198 ಕಡಿತ ಮಾಡಲಾಗಿತ್ತು.
ಮೇ ತಿಂಗಳಲ್ಲಿ ಏರಿಕೆಯಾಗಿದ್ದ ದರ
ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಮೇ ತಿಂಗಳಲ್ಲಿ 50 ರು ಪ್ರತಿ ಸಿಲಿಂಡರ್ ಏರಿಕೆಯಾಗಿತ್ತು. ಅದಕ್ಕೂ ಕಳೆದ ತಿಂಗಳು ದೆಹಲಿಯಲ್ಲಿ ಬೆಲೆಯು ರೂಪಾಯಿ 1,003ಕ್ಕೆ ಏರಿಕೆಯಾಗಿತ್ತು. ಒಂದು ತಿಂಗಳಲ್ಲೇ ಎರಡು ಬಾರಿ ಗೃಹ ಬಳಕೆಯ ಎಲ್ಪಿಜಿ ದರ ಹೆಚ್ಚಳವಾಗಿದೆ. ಸಿಲಿಂಡರ್ಗೆ ಸುಮಾರು ರೂಪಾಯಿ 53.50ರಷ್ಟು ಹೆಚ್ಚಳವಾಗಿತ್ತು. ಈ ಬಳಿಕ ದೇಶದ ಹಲವಾರು ಪ್ರಮುಖ ನಗರಗಳಲ್ಲಿ ಎಲ್ಪಿಜಿ ದರವು ಒಂದು ಸಾವಿರದ ಗಡಿ ದಾಟಿತ್ತು.
ಈ ನಡುವೆ ಕಚ್ಚಾತೈಲ ಬೆಲೆ ಏರಿಳಿತ ಕಂಡಿದ್ದರೂ ಮೇ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಬಹುತೇಕ ಸ್ಥಿರವಾಗಿದೆ.
ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.
ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications