ಸೇವಾ ತೆರಿಗೆ ಹೆಚ್ಚಿಗೆ ಕೇಳಿದರೆ ದೂರು ಕೊಡಿ
ನವದೆಹಲಿ, ಏ. 20: ನೀವು ಹೊಟೆಲ್ ಗೆ, ಸಿನಿಮಾ ಮಂದಿರಕ್ಕೆ ತೆರಳಿದ ವೇಳೆ ನೀಡುವ ಬಿಲ್ ಅಥವಾ ಟಿಕೆಟ್ ಮೇಲೆ ಒಮ್ಮೆ ಕಣ್ಣಾಡಿಸುವುದು ಒಳಿತು. ಯಾರಾದರೂ ಶೇ. 14 ಸೇವಾ ತೆರಿಗೆಯನ್ನು ವಸೂಲಿ ಮಾಡುತ್ತಿದ್ದರೆ ಅವರ ಬಗ್ಗೆ ಸ್ಥಳೀಯ ತೆರಿಗೆ ಕಚೇರಿಗೆ ತೆರಳಿ ದೂರು ದಾಖಲಿಸಿ.
ಬಜೆಟ್ ನಲ್ಲಿ ಹೇಳಿದಂತೆ ನಾಗರೀಕರು ಶೇ. 14 ರಷ್ಟು ಸೇವಾ ತೆರಿಗೆಯನ್ನು ಈಗಲೇ ಪಾವತಿ ಮಾಡಬೇಕಾಗಿಲ್ಲ. ಸಂಸತ್ತಿನಲ್ಲಿ ಸಂಸತ್ತಿನಲ್ಲಿ ಹಣಕಾಸು ಮಸೂದೆ ಇನ್ನೂ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.[ಬಜೆಟ್ ಶಾಕ್ : ಹೋಟೆಲ್ ಊಟ ಇನ್ಮುಂದೆ ದುಬಾರಿ?]

ಬಜೆಟ್ನಲ್ಲಿ ಸೇವಾತೆರಿಗೆಯನ್ನು ಶೇ. 12 ರಿಂದ ಶೇ. 14ಕ್ಕೆ ಏರಿಕೆ ಮಾಡುವುದಾಗಿ ತಿಳಿಸಿತ್ತು. ಹಣಕಾಸು ಮಸೂದೆಇನ್ನೂ ಅನುಮೋದನೆಯಾಗಿಲ್ಲ. ಅಂಗೀಕಾರವಾದ ನಂತರ ಸಚಿವಾಲಯ ಹೆಚ್ಚುವರಿ ಸೇವಾ ತೆರಿಗೆ ಸಂಗ್ರಹಕ್ಕೆ ಅಧಿಸೂಚನೆಯನ್ನು ಹೊರಡಿಸಲಿದೆ.
ಸರ್ಕಾರದ ಹೆಸರಿನಲ್ಲಿ ಯಾರಾದರೂ ಶೇ. 14 ಸೇವಾ ತೆರಿಗೆ ಸಂಗ್ರಹ ಮಾಡುತ್ತಿದ್ದರೆ ಅವರ ವಿರುದ್ಧ ತೆರಿಗೆ ಆಯುಕ್ತರಿಗೆ ದೂರು ದಾಖಲಿಸಬಹುದು ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಶಕ್ತಿಕಾಂತ ದಾಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.[ಕೇಂದ್ರ ಬಜೆಟ್ 2015-16: ಯಾವುದು ಏರಿಕೆ? ಯಾವ್ದು ಇಳಿಕೆ? ]
ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಲ್ಲಿ ಸೇವಾ ತೆರಿಗೆಯನ್ನು ಹೆಚ್ಚು ಮಾಡಿದ್ದರು. ಅಲ್ಲದೇ ಬಂಡವಾಳ ಕ್ರೂಢಿಕರಣಕ್ಕೆ ಇದು ನೆರವಾಗಲಿದೆ ಎಂದು ಹೇಳಿದ್ದರು. ಆದರೆ ಅಧಿಕೃತ ಅಧಿಸೂಚನೆ ಹೊರಡಿಸುವ ಮುನ್ನ ಸೇವಾ ತೆರಿಗೆ ಹೆಚ್ಚಳ ವಸೂಲಿ ಅಪರಾಧವಾಗುತ್ತದೆ ಎಂದು ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications