ಮಲ್ಯ ಬಾಯಿ ಸೇರಬೇಕಿದ್ದ ತುತ್ತಿಗೆ ನ್ಯಾಯಾಧೀಕರಣ ತಡೆ
ಬೆಂಗಳೂರು, ಮಾರ್ಚ್, 07: ಯುನೈಟೆಡ್ ಸ್ಪಿರಿಟ್ಸ್ ಕಂಪನಿಯ ಮುಖ್ಯಸ್ಥ ಹುದ್ದೆಯಿಂದ ನಿರ್ಗಮಿಸಿದ್ದಕ್ಕಾಗಿ ಬ್ರಿಟನ್ ನ ಡೈಜಿಯೋ ಕಂಪನಿಯಿಂದ ವಿಜಯ್ ಮಲ್ಯಗೆ ನೀಡಬೇಕಿದ್ದ 515 ಕೋಟಿ ರು. ಮಲ್ಯ ಕೈ ಸೇರುತ್ತಿಲ್ಲ.
515 ಕೋಟಿ ರು. ತಾತ್ಕಾಲಿಕ ಬೆಂಗಳೂರಿನ ಸಾಲ ವಸೂಲಾತಿ ನ್ಯಾಯಾಧೀಕರಣ ಆದೇಶ ನೀಡಿದೆ. ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕುಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಗಳಲ್ಲಿ ಒಂದನ್ನು ಮಾತ್ರ ವಿಚಾರಣೆ ನಡೆಸಿ ಆದೇಶ ಹೊರಡಿಸಲಾಗಿದೆ.[ಸಾಲ ಮಾಡಿ ತುಪ್ಪ ತಿಂದ ಮಲ್ಯಗೆ ಬಂಧನ ಭೀತಿ]

7800 ಕೋಟಿ ಸಾಲ ಮಾಡಿಕೊಂಡಿದ್ದ ಮಲ್ಯ ಅವರನ್ನು ಉದ್ದೇಶಪೂರ್ವಕ ಸುಸ್ತಿದಾರ ಎಂದು ಬ್ಯಾಂಕ್ ಗಳು ಕರೆದಿದ್ದವು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದಲ್ಲಿ 17 ಬ್ಯಾಂಕ್ ಗಳು ತಮಗೆ ಬರಬೇಕಿದ್ದ ಹಣದ ಸಂಬಂಧ ಸಾಲ ವಸೂಲಾತಿ ನ್ಯಾಯಾಧೀಕರಣಕ್ಕೆ ಮನವಿ ಸಲ್ಲಿಕೆ ಮಾಡಿದ್ದರು. ಅದರಲ್ಲಿ ಒಂದು ಅರ್ಜಿಯನ್ನು ನ್ಯಾಯಾಧೀಕರಣ ಸೋಮವಾರ ವಿಚಾರಣೆ ನಡೆಸಿ ಹಣ ಮಲ್ಯ ಕೈ ಸೇರುವುದಿಲ್ಲ ಎಂದು ತಡೆ ಆದೇಶ ನೀಡಿದೆ.
ವಿದೇಶಕ್ಕೆ ಹಾರುತ್ತೇನೆ ಎಂದು ಹೇಳಿದ್ದ ಮಲ್ಯ ಅವರ ವೀಸಾ ಮತ್ತು ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ಬ್ಯಾಂಕ್ ಗಳು ಮನವಿ ಸಲ್ಲಿಕೆ ಮಾಡಿದ್ದವು. ಮುಂದಿನ ವಿಚಾರಣೆ ಮಾರ್ಚ್ 28 ಕ್ಕೆ ನಡೆಯಲಿದೆ.[ತಲೆಮರೆಸಿಕೊಳ್ಳಬೇಕಾದ ದರ್ದು ನನಗಿಲ್ಲ ಎಂದ ಮಲ್ಯ]
ನ್ಯಾಯಾಲಯಕ್ಕೆ ಸೇರುವ ಹಣ
ವಿಜಯ್ ಮಲ್ಯಗೆ ಸಂದಾಯವಾಗಬೇಕಿದ್ದ ಹಣ ಇದೀಗ ನ್ಯಾಯಾಧೀಕರಣದ ಪಾಲಾಗುತ್ತಿದೆ. ಸಾಲ ನೀಡಿದ ಬ್ಯಾಂಕ್ ಗಳಿಗೂ ಸಹ ಸದ್ಯ ಬ್ರಿಟನ್ ನ ಡೈಜಿಯೋ ನೀಡುವ ಹಣದ ಮೇಲೆ ಹಕ್ಕು ಬರುವುದಿಲ್ಲ. ಮಲ್ಯ ಮತ್ತು ಅವರ ಸಂಸ್ಥೆಯ ಕೆಲ ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications