ಮೆಹುಲ್ ಚೋಕ್ಸಿಗೆ ಸೇರಿದ ದುಬೈ ಆಸ್ತಿ, ಬೆಂಜ್ ಕಾರು ವಶಕ್ಕೆ
ನವದೆಹಲಿ, ಜುಲೈ 12: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಉದ್ಯಮಿ ನೀರವ್ ಮೋದಿ ಅವರ ಬ್ಯಾಂಕ್ ಖಾತೆ ವಶಕ್ಕೆ ಪಡೆದ ಬಳಿಕ ಮತ್ತೊಬ್ಬ ಆರೋಪಿ ಮೆಹುಲ್ ಚೋಕ್ಸಿ ಅವರಿಗೆ ಸಂಬಂಧಿಸಿದ ಆಸ್ತಿ, ವಸ್ತುಗಳನ್ನು ಜಪ್ತಿ ಕಾರ್ಯವನ್ನು ಜಾರಿ ನಿರ್ದೇಶನಲಯವು ಮುಂದುವರೆಸಿದೆ.
ಸ್ವಿಸ್ ಬ್ಯಾಂಕಿನ ನಾಲ್ಕು ಖಾತೆಗಳು ಜಪ್ತಿಯಾಗಿತ್ತು. ಈಗ ಮೋದಿ ಅವರ ಸೋದರಿಗೆ ಸೇರಿದ ಸಿಂಗಪುರದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.

ದುಬೈನಲ್ಲಿರುವ ಆಸ್ತಿ ವಶಕ್ಕೆ: ಚೋಕ್ಸಿಗೆ ಸೇರಿದ ವಾಣಿಜ್ಯ ಕಟ್ಟಡ, ಮರ್ಸಿಡೀಸ್ ಬೆಂಜ್ ಕಾರು, ಬ್ಯಾಂಕ್ ಖಾತೆಗಳ ಠೇವಣಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಜಪ್ತಿಯಾದ ಆಸ್ತಿ ಮೌಲ್ಯ 24.77 ಕೋಟಿ ರು ಎಂದು ಅಂದಾಜಿಸಲಾಗಿದೆ.
ಮನಿಲಾಂಡ್ರಿಂಗ್ ಕಾಯ್ದೆ ಉಲ್ಲಂಘನೆ ಮಾಡಿರುವ ಚೋಕ್ಸಿ ಹಾಗೂ ನೀರವ್ ಮೋದಿ ಅವರಿಗೆ ಸಂಗ್ರಹಿತ ಆಸ್ತಿ ಮೌಲ್ಯ 2,543.7 ಕೋಟಿ ರು ದಾಟುತ್ತದೆ. ಸುಮಾರು 13,000 ಕೋಟಿ ಮೌಲ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಗಳನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ಸೇರಿದಂತೆ ಭಾರತದ ತನಿಖಾ ಸಂಸ್ಥೆಗಳು ಯತ್ನಿಸುತ್ತಿವೆ.
ಭಾರತದಿಂದ ಪರಾರಿಯಾಗಿ ಆಂಟಿಗುವಾದ ಪೌರತ್ವ ಪಡೆದುಕೊಂಡಿರುವ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲು ತನಿಖಾ ಸಂಸ್ಥೆಗಳು ಸತತ ಪ್ರಯತ್ನ ನಡೆಸುತ್ತಿವೆ, ಇದರ ಭಾಗವಾಗಿ ಭಾರತದ ಸಂಸ್ಥೆಗಳು, ಅಧಿಕಾರಿಗಳು ಆಂಟಿಗುವಾದ ಮೇಲೆ ಸತತ ಒತ್ತಡ ಹೇರಿದ್ದವು. ಅದಕ್ಕೆ ಮಣಿದಿರುವ ಅಲ್ಲಿನ ಪ್ರಧಾನಿ ಗ್ಯಾಸ್ಟನ್ ಬ್ರೌನ್, ಚೋಕ್ಸಿಯ ವಾಸದ ಹಕ್ಕನ್ನು ರದ್ದುಗೊಳಿಸಲು ಒಪ್ಪಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications