ಇಡಿಯಿಂದ ಜಾಯ್ ಅಲುಕಾಸ್ಗೆ ಸೇರಿದ ₹305 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಜಾಯ್ ಆಲುಕಾಸ್ ಆಭರಣ ಕಂಪೆನಿಯು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಜಾರಿ ನಿರ್ದೇಶನಾಲ ಆರೋಪಿಸಿದೆ.
ತಿರುವನಂತಪುರಂ, ಫೆಬ್ರವರಿ 25: ಜಾರಿ ನಿರ್ದೇಶನಾಲಯವು ಜನಪ್ರಿಯ ಆಭರಣ ಕಂಪೆನಿ ಜಾಯ್ ಆಲುಕಾಸ್ನ ಐದು ಕಚೇರಿಗಳ ಮೇಲೆ ದಾಳಿ ನಡೆಸಿದ ಎರಡು ದಿನಗಳ ನಂತರ ಅದರ ₹ 305.84 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಜಾಯ್ ಆಲುಕಾಸ್ ಆಭರಣ ಕಂಪೆನಿಯು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಜಾರಿ ನಿರ್ದೇಶನಾಲ ಆರೋಪಿಸಿದೆ.

ಜಾಯ್ ಆಲುಕಾಸ್ನ ಮುಖ್ಯಸ್ಥ ಜಾಯ್ ಆಲುಕಾಸ್ ವರ್ಗೀಸ್ ಹವಾಲಾ ಮಾರ್ಗದ ಮೂಲಕ ಭಾರತದಿಂದ ದುಬೈಗೆ ಭಾರಿ ಮೊತ್ತದ ಹಣವನ್ನು ವರ್ಗಾಯಿಸಿದ್ದಾರೆ. ಅಲ್ಲದೆ ದುಬೈನ ಜಾಯ್ ಆಲುಕಾಸ್ ಜ್ಯುವೆಲ್ಲರಿ ಎಲ್ಎಲ್ಸಿಯಲ್ಲಿ ಹೂಡಿಕೆ ಮಾಡಿದೆ ಎಂದು ಇಡಿ ತಿಳಿಸಿದೆ. ಕಂಪೆನಿ ಜಾಯ್ ಅಲುಕಾಸ್ ವರ್ಗೀಸ್ ಅವರ 100 ಪ್ರತಿಶತ ಒಡೆತನದಲ್ಲಿದೆ. ಮಂಗಳವಾರವಷ್ಟೇ ಜಾಯ್ ಆಲುಕಾಸ್ ಕಂಪನಿಯು ತನ್ನ ₹ 2,300 ಕೋಟಿ ಆರಂಭಿಕ ಸಾರ್ವಜನಿಕ ಕೊಡುಗೆ ಅಥವಾ ಐಪಿಒ ಅನ್ನು ಹಿಂತೆಗೆದುಕೊಂಡಿತ್ತು.
ತ್ರಿಶೂರ್ನ ಶೋಭಾ ನಗರದಲ್ಲಿ ನಿವೇಶನ ಮತ್ತು ವಸತಿ ಕಟ್ಟಡ ಒಳಗೊಂಡ ₹ 81.54 ಕೋಟಿ ಮೌಲ್ಯದ 33 ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.ಅಲ್ಲದೆ ₹ 91.22 ಲಕ್ಷ ಮೌಲ್ಯದ ಮೂರು ಬ್ಯಾಂಕ್ ಖಾತೆಗಳು, ₹ 5.58 ಕೋಟಿ ಮೊತ್ತದ ಮೂರು ಸ್ಥಿರ ಠೇವಣಿಗಳು ಮತ್ತು 217.81 ಕೋಟಿ ಮೌಲ್ಯದ ಜೋಯಾಲುಕ್ಕಾಸ್ ಷೇರುಗಳನ್ನು ಸಹ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಕಂಪನಿಯು ತನ್ನ ಐಪಿಒ ದಾಖಲೆಗಳನ್ನು ಬೇಗನೆ, ಮಾರುಕಟ್ಟೆಯ ಪರಿಸ್ಥಿತಿಗಳಿಗೆ ಒಳಪಟ್ಟು ರಿಫೈಲ್ ಮಾಡಲು ಯೋಜಿಸಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಬೇಬಿ ಜಾರ್ಜ್ ಮಂಗಳವಾರ ರಾಯಿಟರ್ಸ್ಗೆ ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ. ಮಾರುಕಟ್ಟೆಯ ಚಂಚಲತೆ ಮತ್ತು ಹೆಚ್ಚಿನ ಹಣದುಬ್ಬರದ ನಡುವೆ ತನ್ನ ಐಪಿಒ ಯೋಜನೆಗಳನ್ನು ವಿಳಂಬಗೊಳಿಸಿದ ಕಂಪೆನಿಗಳಲ್ಲಿ ಜಾಯ್ ಆಲುಕಾಸ್ ಇತ್ತೀಚಿನದು. ಕಂಪನಿಯು ಸರಿಸುಮಾರು 68 ನಗರಗಳಲ್ಲಿ ಶೋರೂಂಗಳನ್ನು ಹೊಂದಿದೆ.
-
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications