ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಡುಗೆ ಅನಿಲ ಬೆಲೆ ಏರಿಕೆ
ನವದೆಹಲಿ, ಏಪ್ರಿಲ್ 01: ಮೂರು ತಿಂಗಳುಗಳ ಕಾಲ ಇಳಿಕೆ ಕಂಡಿದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ ಮಾರ್ಚ್ 01ರಂದು ಏರಿಕೆಯಾಗಿತ್ತು. ಈಗ ಒಂದು ತಿಂಗಳ ಬಳಿಕ ಮತ್ತೊಮ್ಮೆ ಏರಿಕೆ ಮಾಡಲಾಗಿದೆ .
ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಬ್ಸಿಡಿ ರಹಿತ ಸಿಲಿಂಡರ್ ಖರೀದಿದಾರರಿಗೆ ಕಹಿ ಸುದ್ದಿಯನ್ನು ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಸಂಸ್ಥೆ ನೀಡಿದೆ. ಸಬ್ಸಿಡಿಯುಳ್ಳ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಗಳ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಬ್ಸಿಡಿ ರಹಿತ ಸಿಲಿಂಡರ್ ಗಳ ಬೆಲೆಯಲ್ಲಿ 5 ರೂ. ಏರಿಕೆಯಾಗಿದ್ದು, 14.2 ಕೆ.ಜಿ. ಸಿಲಿಂಡರ್ ಬೆಲೆ ನವದೆಹಲಿಯಲ್ಲಿ 706.50 ರೂ. ತಲುಪಿದೆ. ಸಬ್ಸಿಡಿಯುಳ್ಳ ಪ್ರತಿ ಸಿಲಿಂಡರ್ 495.86 ರು ನಷ್ಟಿದೆ. ಪರಿಷ್ಕೃತ ದರಗಳು ಏಪ್ರಿಲ್ 01ರಿಂದ ಜಾರಿಗೆ ಬರಲಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಸಬ್ಸಿಡಿಯುಳ್ಳ ಸಿಲಿಂಡರ್ 493.57ರು ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 678.50 ರೂ. ಗಳಾಗಿದ್ದರೆ, ಚೆನ್ನೈನಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 722 ಹಾಗೂ ಕೋಲ್ಕತ್ತಾದಲ್ಲಿ 732.50 ರೂಪಾಯಿ ತಲುಪಿದೆ.
ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದ್ದು, 14.2 ಕೆಜಿ ತೂಕದ ಸಿಲಿಂಡರ್ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗ 495.86 ರೂಪಾಯಿ ತಲುಪಿದೆ.
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications