ಬ್ಯಾಂಕ್ ಮುಷ್ಕರಕ್ಕೆ ವೇದಿಕೆ ಸಿದ್ಧ: 3 ದಿನ ಹಣ ವಹಿವಾಟಿಲ್ಲ
ನವದೆಹಲಿ, ಮೇ 18: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಸ್ತಾವನೆಯನ್ನು ಖಂಡಿಸಿ 5 ಸಹವರ್ತಿ ಬ್ಯಾಂಕ್ ಗಳು ಶುಕ್ರವಾರ ಮೇ. 20 ರಂದು ದೇಶಾದ್ಯಂತ ಮುಷ್ಕರ ನಡೆಸಲಿವೆ.
ತನ್ನ ಐದು ಸಹವರ್ತಿ ಬ್ಯಾಂಕ್ಗಳು ಮತ್ತು ಹೊಸದಾಗಿ ಸ್ಥಾಪಿತವಾದ ಭಾರತೀಯ ಮಹಿಳಾ ಬ್ಯಾಂಕನ್ನು ತನ್ನಲ್ಲಿ ವಿಲೀನಗೊಳಿಸಬೇಕು ಎಂಬ ಕೋರಿಕೆಯನ್ನು ಕೇಂದ್ರ ಸರಕಾರದ ಮುಂದೆ ಭಾರತೀಯ ಸ್ಟೇಟ್ ಬ್ಯಾಂಕ್ ಇರಿಸಲು ಯೋಜಿಸಿದ್ದು ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.[ಎಸ್ ಬಿಐನಲ್ಲಿ 2200 ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿ]

ಇದನ್ನು ವಿರೋಧಿಸಿ ಸಾಂಕೇತಿಕವಾಗಿ ಅಖೀಲ ಭಾರತ ಬ್ಯಾಂಕ್ ನೌಕರರ ಸಂಘವು ಮೇ 20ರಂದು ಮುಷ್ಕರ ನಡೆಸಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಅರುಣಾಚಲಂ ತಿಳಿಸಿದ್ದಾರೆ.[ಎಟಿಎಂ ಪಿನ್ ಮರೆತುಹೋಗಿದೆಯಾ? ಮೊಬೈಲ್ ಒಟಿಪಿ ನೋಡಿ]
ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ತಿರುವಾಂಕೂರು- ಇವುಗಳನ್ನು ತನ್ನೊಳಗೆ ವಿಲೀನ ಮಾಡಬೇಕು. ಅಂತೆಯೇ ಮಹಿಳಾ ಬ್ಯಾಂಕನ್ನೂ ವಿಲೀನಗೊಳಿಸಲು ತಾತ್ವಿಕ ಒಪ್ಪಿಗೆ ನೀಡಬೇಕುಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದೆ ಎಸ್ ಬಿಐ ಇಡಲು ಮುಂದಾಗಿದೆ.[ಜುಲೈ 29 ಕ್ಕೆ ಮತ್ತೊಂದು ಬ್ಯಾಂಕ್ ಮುಷ್ಕರ]
ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕರೆ ಸದ್ಯ 28 ಲಕ್ಷ ಕೋಟಿ ರೂ.ನಷ್ಟು ಇರುವ ಎಸ್ಬಿಐನ ಬ್ಯಾಲೆನ್ಸ್ ಶೀಟ್ (ಜಮಾಖರ್ಚು ಪಟ್ಟಿ) 37 ಲಕ್ಷ ಕೋಟಿ ರೂ.ಗೆ ಏರಲಿದೆ. ಇನ್ನೊಂದು ಮಹತ್ವದ ಅಂಶ ಎಂದರೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಗಿ ಬದಲಾಗಲಿದೆ.
ಮೂರು ದಿನ ಬ್ಯಾಂಕ್ ಇಲ್ಲ: ಶುಕ್ರವಾರ ಮೇ 20 ರಂದು ಮುಷ್ಕರ, ಮೇ 21 ಶನಿವಾರ ಬುದ್ಧ ಪೂರ್ಣಿಮಾ, ಮೇ 22 ಭಾನುವಾರ . ಹಾಗಾಗಿ ಅಲ್ಲಿಗೆ ಮೂರು ದಿನ ಮೇಲಿನ ಬ್ಯಾಂಕ್ ವಹಿವಾಟುಗಳು ಸ್ಥಗಿತವಾಗುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications