ನೌಕರರಿಗೆ ಸಿಹಿ ಸುದ್ದಿ: ಇಪಿಎಫ್ ಮೇಲಿನ ಬಡ್ಡಿದರ ಏರಿಕೆ
ನವದೆಹಲಿ, ಫೆಬ್ರವರಿ 21: ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ.
ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿದೆ.

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದೆ. ಈ ನಿರ್ಧಾರವು 2018-19ರ ಹಣಕಾಸು ವರ್ಷದಿಂದಲೇ ಜಾರಿಗೆ ಬರಲಿದೆ.
ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಪಿಂಚಣಿಗೆ ಸಂಬಂಧಿಸಿದ ಪ್ರಸ್ತಾವಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.
ನೌಕರರ ಭವಿಷ್ಯನಿಧಿ ಸಂಸ್ಥೆಯ (ಇಪಿಎಫ್ಒ) ಮಂಡಳಿಯು ಇಪಿಎಫ್ ಬಡ್ಡಿದರ ಹೆಚ್ಚಳಕ್ಕೆ ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಇಪಿಎಫ್ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎನ್ನಲಾಗಿತ್ತು. ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್ ಬಡ್ಡಿದರದ ನಿರ್ಧಾರ ತೆಗೆದುಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications