EPFO 3.0 Atm & Upi Withdrawal: ಪಿಎಫ್ ಹಣ ವಿತ್ ಡ್ರಾ ಇನ್ಮುಂದೆ ಸಿಕ್ಕಾಪಟ್ಟೆ ಸುಲಭ!
EPFO 3.0 Atm & Upi Withdrawal: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) - ಇಪಿಎಫ್ಒ ಭರ್ಜರಿ ಗುಡ್ನ್ಯೂಸ್ವೊಂದನ್ನು ತಂದಿದೆ. ದೇಶದಲ್ಲಿರುವ ಲಕ್ಷಾಂತರ ಉದ್ಯೋಗಿಗಳು ತಮ್ಮ ಭವಿಷ್ಯ ನಿಧಿ (PF) ಅಥವಾ ಪಿಎಫ್ ಹಣವನ್ನು ಇನ್ಮುಂದಿನ ದಿನಗಳಲ್ಲಿ ಅವರು ಎಟಿಎಂಗಳಿಂದಲೇ ವಿತ್ ಡ್ರಾ ಮಾಡಿಕೊಳ್ಳಬಹುದಾದ ಭರ್ಜರಿ ಅವಕಾಶವನ್ನು ನೀಡಲು ಮುಂದಾಗಿದೆ. ನಿಮ್ಮ ಬ್ಯಾಂಕ್ ಅಕೌಂಟ್ನಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವಂತೆಯೇ ನಿಮ್ಮ ಪಿಎಫ್ ಹಣವನ್ನು ತೆಗೆದುಕೊಳ್ಳಬಹುದಾಗಿದೆ. ಹೌದು ಈ ಹೊಸ ನಿಯಮವು ಇದೇ ತಿಂಗಳಿನಿಂದ ಜಾರಿಗೆ ಬರಲಿದೆ ಇದಕ್ಕೆ ಸಂಬಂಧಿಸಿದ ಇನ್ನಷ್ಟು ಅಪ್ಡೇಟ್ಸ್ ನೋಡೋಣ.
ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ಹೊಸ ಅಪ್ಡೇಟ್ಸ್ನ ಪ್ರಕಾರ, ನಿಮ್ಮ ಇಪಿಎಫ್ ಹಣವನ್ನು ಹಿಂಪಡೆದುಕೊಳ್ಳುವ ವಿಧಾನವನ್ನು ಅತ್ಯಂತ ಸುಲಭವಾಗಿಸಲಾಗಿದೆ. ಅಲ್ಲದೇ ಎಟಿಎಂನಿಂದಲೇ ನೀವು ಹಣ ವಿತ್ ಡ್ರಾ ಮಾಡಿಕೊಳ್ಳಬಹುದು. ಮೊದಲೆಲ್ಲವೂ ನೀವು ಹಣವನ್ನು ಹಿಂಪಡೆಯಲು ಇಪಿಎಫ್ಒ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿತ್ತು. ಅದಾದ ಮೇಲೆ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗುತ್ತಿತ್ತು. ಬ್ಯಾಂಕ್ ಖಾತೆಯಿಂದ ನೀವು ಆ ನಂತರ ಹಣವನ್ನು ವಿತ್ ಡ್ರಾ ಮಾಡಿಕೊಳ್ಳಲು ಅವಕಾಶ ಇರುತ್ತಿತ್ತು. ಆದರೆ ಇದೀಗ ನೀವು ನೇರವಾಗಿ ಎಟಿಎಂನಿಂದಲೇ ಹಣ ವಿತ್ ಡ್ರಾ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಹಾಗಾದರೆ ಹಣ ವಿತ್ ಡ್ರಾ ಮಾಡುವುದು ಹೇಗೆ ಹಾಗೂ ಅದಕ್ಕೆ ಏನೆಲ್ಲಾ ಮಾಡಬೇಕು ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ..

ಪಿಎಫ್ ವಿತ್ ಡ್ರಾಗೆ ಸಂಬಂಧಿಸಿದಂತೆ ಹೊಸ ಡಿಜಿಟಲ್ ಅಪ್ಡೇಟ್ಸ್ ಬಂದಿದ್ದು. ಇದರ ಪ್ರಕಾರ, ಇಪಿಎಫ್ಒ 3.0 ಮೂಲಕ ಹಲವು ಹೊಸ ಬದಲಾವಣೆಗಳು ಆಗುತ್ತಿವೆ. ಉದ್ಯೋಗಿಗಳು ಅತ್ಯಂತ ಸುಲಭವಾಗಿ ಹಣ ವಿತ್ ಡ್ರಾ ಮಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ಹೊಸ ಬದಲಾವಣೆಗಳನ್ನು ಮಾಡಲಾಗುತ್ತಿದೆ. ನಿಮ್ಮ ಪಿಎಫ್ ಹಣವನ್ನು ನೀವು ಯುಪಿಐ ಅಥವಾ ಎಟಿಎಂ ನಿಂದಲೂ ಸುಲಭವಾಗಿ ವಿತ್ ಡ್ರಾ ಮಾಡಿಕೊಳ್ಳಲು ಅವಕಾಶವಿದೆ. ಈ ರೀತಿ ವಿತ್ ಡ್ರಾ ಮಾಡಿಕೊಳ್ಳುವಾಗ ನೀವು 1 ಲಕ್ಷ ರೂಪಾಯಿಯ ವರೆಗೆ ಹಣ ವಿತ್ ಡ್ರಾ ಮಾಡಿಕೊಳ್ಳಬಹುದಾಗಿದೆ ಎಂದು ಡಿಡಿ ನ್ಯೂಸ್ ವರದಿ ಮಾಡಿದೆ.
ಇನ್ನು ಇಪಿಎಫ್ ಕ್ಲೈಮ್ನಲ್ಲೂ ಹಲವು ಹೊಸ ಬದಲಾವಣೆಗಳನ್ನು ಮಾಡಲಾಗಿದೆ. ಶೇ 95 ರಷ್ಟು ಕ್ಲೈಮ್ಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಇನ್ನುಳಿದ ಶೇ 5ರಷ್ಟು ಕ್ಲೈಮ್ಗಳು ವಿಳಂಬವಾಗುತ್ತಿವೆ ಎಂದು ಹೇಳಲಾಗಿದೆ. ಇದು ಇದೇ ತಿಂಗಳಿನಿಂದ ಜಾರಿಯಾಗಲಿರುವುದರಿಂದ ಜನ ತಮ್ಮ ಪಿಎಫ್ ಹಣ ವಿತ್ ಡ್ರಾ ಮಾಡಿಕೊಳ್ಳುವುದಕ್ಕೆ ತಿಂಗಳು ಗಟ್ಟಲೆ ಕಾಯಬೇಕಾದ ತಾಪತ್ರಯ ತಪ್ಪಲಿದೆ ಅಂತಲೇ ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಅಪ್ಡೇಟ್ ನಿರೀಕ್ಷೆ ಮಾಡಲಾಗಿದ್ದು. ಇದೇ ವಾರದಲ್ಲಿ ಇಪಿಎಫ್ಒ ಮಾಹಿತಿ ನೀಡುವ ಸಾಧ್ಯತೆ ಇದೆ.
ಪಿಎಫ್ ಹಣವನ್ನು ವಿತ್ ಡ್ರಾ ಮಾಡಿಕೊಳ್ಳುವುದು ಮುಂದಿನ ದಿನಗಳಲ್ಲಿ ತುಂಬಾ ಸುಲಭವಾಗಲಿದೆ. ಮೊದಲಿಗಿಂತ ಈ ಪ್ರಕ್ರಿಯೆ ಸರಳೀಕರಣವಾಗಲಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications