ಇಪಿಎಫ್: 2020ಕ್ಕೆ ಘೋಷಿಸಲಾದ 8.5% ಬಡ್ಡಿ ದರ ಕಡಿತವಾಗುವ ಸಾಧ್ಯತೆ
ನವದೆಹಲಿ, ಜೂನ್ 26: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಹಣಕಾಸು ವರ್ಷ 2020 ಕ್ಕೆ ಘೋಷಿಸಲಾದ 8.5% ಬಡ್ಡಿದರವನ್ನು ಕಡಿತಗೊಳಿಸುವ ಸಾಧ್ಯತೆ ಇದೆ.
Recommended Video
ಕೊರೊನಾವೈರಸ್ದಿಂದಾಗಿ ಇಪಿಎಫ್ಒ ಹೂಡಿಕೆಗಳ ಮೇಲಿನ ಆದಾಯ ಮತ್ತು ಹಣದ ಹರಿವಿನ ಪ್ರಮಾಣ ತಗ್ಗಿರುವುದರಿಂದ ಬಡ್ಡಿ ದರವನ್ನು ಕಡಿಮೆಗೊಳಿಸಬಹುದು. ಈ ಮೂಲಕ ಅದರ 60 ಮಿಲಿಯನ್ (ಆರು ಕೋಟಿ) ಚಂದಾದಾರರ ನಿವೃತ್ತಿ ಉಳಿತಾಯದ ಮೇಲಿನ ಪಾವತಿಯನ್ನು ಕಡಿಮೆ ಮಾಡುತ್ತದೆ.
ಆರ್ಥಿಕ ವರ್ಷ 2020ರ ಗಳಿಕೆಯ ಆಧಾರದ ಮೇಲೆ ಬಡ್ಡಿದರವನ್ನು ಘೋಷಿಸಲಾಯಿತು, ಆದರೆ ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಚಂದಾದಾರರಿಗೆ ಪಾವತಿಸಲಾಗುವುದು.

ಘೋಷಿತ ಬಡ್ಡಿಯನ್ನು ಪಾವತಿಸುವ ಸಾಮರ್ಥ್ಯವನ್ನು ನಿರ್ಣಯಿಸಲು ಇಪಿಎಫ್ಒದ ಹಣಕಾಸು, ಹೂಡಿಕೆ ಮತ್ತು ಲೆಕ್ಕಪರಿಶೋಧನಾ ಸಮಿತಿ (ಎಫ್ಐಎಸಿ) ಶೀಘ್ರದಲ್ಲೇ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ ಮೊದಲ ವಾರದಲ್ಲಿ ಘೋಷಿಸಲಾದ 8.5% ಬಡ್ಡಿದರವನ್ನು ಹಣಕಾಸು ಸಚಿವಾಲಯ ಇನ್ನೂ ಅನುಮೋದಿಸಿಲ್ಲ. ಹಣಕಾಸು ಸಚಿವಾಲಯವು ಅನುಮೋದಿಸಿದ ನಂತರವೇ ಕಾರ್ಮಿಕ ಸಚಿವಾಲಯವು ದರವನ್ನು ತಿಳಿಸಬಹುದು.
"ಕಳೆದ ವರ್ಷ ಘೋಷಿಸಿದ ಬಡ್ಡಿದರದ ಆಧಾರದ ಮೇಲೆ ಹಣವನ್ನು ವಿತರಿಸುವುದು ಇಪಿಎಫ್ಒಗೆ ಕಷ್ಟಕರವಾಗಿರುತ್ತದೆ. ಏಕೆಂದರೆ ಹಣದ ಹರಿವು ಗಮನಾರ್ಹವಾಗಿ ಕಡಿಮೆಯಾಗಿದೆ ಮತ್ತು ವಿತರಣೆಯ ಸಮಯದಲ್ಲಿ ಅದರ ಹಣವನ್ನು ದಿವಾಳಿಯಾಗುವುದು ಸುಲಭವಲ್ಲ" ಎಂದು ಚರ್ಚೆಯ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ಹೇಳಿದ್ದಾರೆ.
ಇತ್ತಿಚೆಗಷ್ಟೇ ಕೇಂದ್ರ ಸರ್ಕಾರ ಕೋವಿಡ್ -19 ಬಿಕ್ಕಟ್ಟಿನ ಪರಿಣಾಮದ ಬಗ್ಗೆ ನೌಕರರು ಮತ್ತು ಉದ್ಯೋಗದಾತರಿಗೆ ಸಹಾಯ ಮಾಡಲು ಸರ್ಕಾರವು ಭವಿಷ್ಯ ನಿಧಿ ಸಂಬಂಧಿತ ಪರಿಹಾರ ಕ್ರಮಗಳನ್ನು ಮಾರ್ಚ್ನಿಂದ ಘೋಷಿಸಿದೆ. ಭವಿಷ್ಯ ನಿಧಿ ಕೊಡುಗೆಯನ್ನು ನೌಕರರು ಮತ್ತು ಉದ್ಯೋಗದಾತರಿಗೆ ಮೂರು ತಿಂಗಳವರೆಗೆ ಮೂಲ ವೇತನದ 12 ಪರ್ಸೆಂಟ್ರಿಂದ 10 ಪರ್ಸೆಂಟ್ಗೆ ಇಳಿಸಲಾಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications