6.3 ಲಕ್ಷ ಪಿಂಚಣಿದಾರರಿಗೆ ನೆಮ್ಮದಿ ಸುದ್ದಿ ಕೊಟ್ಟ EPFO
ನವದೆಹಲಿ, ಏಪ್ರಿಲ್ 29: ಪಿಂಚಣಿದಾರರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ ಒ) ಶುಭ ಸುದ್ದಿ ನೀಡಿದೆ. ಮೇ 1ರಿಂದ ಮುಂಗಡ ಮೊತ್ತ (Restored Pension)ವನ್ನು ನೀಡುವುದಾಗಿ ಘೋಷಿಸಿದೆ.
ಒಂದೇ ಕಂತಿನಲ್ಲಿ ಪಿಂಚಣಿ ಮೊತ್ತವನ್ನು ನೀಡಲಾಗುತ್ತಿದ್ದು, 15 ವರ್ಷಗಳ ಬಳೀಕ್ ಪೂರ್ಣ ಪ್ರಮಾಣದಲ್ಲಿ ಪ್ರತಿ ತಿಂಗಳ ಪಿಂಚಣಿ ಪಡೆದುಕೊಳ್ಳಬಹುದು.
ಪಿಂಚಣಿಯ ಒಂದು ಭಾಗವನ್ನು ಪಿಂಚಣಿದಾರರಿಗೆ ಮುಂಚಿತವಾಗಿ ನೀಡಲಾಗುತ್ತದೆ. ನಂತರ ತಿಂಗಳ ಪಿಂಚಣಿಯ ಮೂರನೇ ಒಂದು ಭಾಗವನ್ನು ಮುಂದಿನ 15 ವರ್ಷಗಳವರೆಗೆ ಕಡಿತಗೊಳಿಸಲಾಗುತ್ತದೆ. 15 ವರ್ಷಗಳ ನಂತರ ಪಿಂಚಣಿದಾರರು ಪೂರ್ಣ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ.

ಮುಂಗಡ ಪಿಂಚಣಿಯ ಸೌಲಭ್ಯ ಬಳಸುವ ಹಾಗೂ ನಿವೃತ್ತಿಯ ಸಮಯದಲ್ಲಿ ತಮ್ಮ ಪಿಂಚಣಿಯ ಸ್ವಲ್ಪ ಭಾಗವನ್ನು ಕಡಿಮೆ ಮಾಡಿದವರಿಗೆ ಮಾತ್ರ ಈ ಹೊಸ ನಿಯಮ ಅನ್ವಯವಾಗಲಿದೆ. 2008ರ ಸೆಪ್ಟೆಂಬರ್ 26ಕ್ಕೂ ಮುನ್ನ ನಿವೃತ್ತರಾದವರಿಗೆ ಲಾಭ ಸಿಗಲಿದೆ.
ಹಾಲಿ ನಿಯಮದಂತೆ ಇಪಿಎಸ್ -95 ಸದಸ್ಯರಿಗೆ ಪಿಂಚಣಿಯ ಮೂರನೇ ಒಂದು ಭಾಗವನ್ನು 10 ವರ್ಷಗಳವರೆಗೆ ಹಿಂಪಡೆಯಲು ಅವಕಾಶವಿತ್ತು. ಇದನ್ನು ಈಗ 15 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಇದರ ಲಾಭ 6.3 ಲಕ್ಷ ಪಿಂಚಣಿದಾರರಿಗೆ ಸಿಗಲಿದೆ.
ಜನವರಿ 1, 2004 ಹಾಗೂ ಅದಕ್ಕಿಂತ ಮೊದಲು ಕೇಂದ್ರ ಸರ್ಕಾರಿ ನೌಕರಿಗೆ ನೇಮಕವಾಗಿರುವ ಅಥವಾ ಆ ದಿನಾಂಕದ ನಂತರ ಹುದ್ದೆಗೆ ಸೇರಿರುವ ನೌಕರರಿಗೆ ಹಳೆ ಪಿಂಚಣಿ ಯೋಜನೆ ಲಾಭ ಸಿಗಲಿದೆ. 01.01.2004 ನಂತರದ ಅಪಾಯಿಂಟ್ಮೆಂಟ್ ಲೆಟರ್ ಪಡೆದವರಿಗೂ ಲಾಭ ಸಿಗಲಿದೆ ಎಂದು ಮೋದಿ ಸರ್ಕಾರ ಇತ್ತೀಚೆಗೆ ಘೋಷಿಸಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications