ಮನೆ ಬಾಗಿಲಿಗೆ ದಿನಸಿ; ಫ್ಲಿಪ್ ಕಾರ್ಟ್, ವಿಶಾಲ್ ಮಾರ್ಟ್ ಒಪ್ಪಂದ
ಬೆಂಗಳೂರು, ಮೇ 19 : ಜನರಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲು ಫ್ಲಿಪ್ ಕಾರ್ಟ್ ಮತ್ತು ವಿಶಾಲ್ ಮೆಗಾ ಮಾರ್ಟ್ ಒಪ್ಪಂದ ಮಾಡಿಕೊಂಡಿವೆ. ಭಾರತದ 26 ನಗರದಲ್ಲಿ ಜಂಟಿಯಾಗಿ ವಸ್ತುಗಳನ್ನು ಸರಬರಾಜು ಮಾಡಲಿವೆ.
Recommended Video
ಮಂಗಳವಾರ ಫ್ಲಿಪ್ ಕಾರ್ಟ್ ವಿಶಾಲ್ ಮೆಗಾ ಮಾರ್ಟ್ ಜೊತೆಗಿನ ಒಪ್ಪಂದದ ಬಗ್ಗೆ ಘೋಷಣೆ ಮಾಡಿದೆ. ವಿಶಾಲ್ ಮಾರ್ಟ್ ಅಗತ್ಯ ವಸ್ತುಗಳ ಆರ್ಡರ್ ತೆಗೆದುಕೊಳ್ಳಲಿದೆ. ಫ್ಲಿಪ್ ಕಾರ್ಟ್ ಅದನ್ನು ಜನರ ಮನೆ ಬಾಗಿಲಿಗೆ ಪೂರೈಕೆ ಮಾಡುವ ವ್ಯವಸ್ಥೆ ನೋಡಿಕೊಳ್ಳಲಿದೆ.
ವಿಶಾಲ್ ಮೆಗಾ ಮಾರ್ಟ್ ದೇಶದಲ್ಲಿ 365ಕ್ಕೂ ಅಧಿಕ ಸ್ಟೋರ್ಗಳನ್ನು ಹೊಂದಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ವಿವಿಧ ವಸ್ತುಗಳು ಲಭ್ಯವಿರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಫ್ಲಿಪ್ ಕಾರ್ಟ್ ಅಪ್ಲಿಕೇಶನ್ ಮೂಲಕ ಜನರು ಬೇಡಿಕೆ ಸಲ್ಲಿಸಿದಾಗ ಹತ್ತಿರದ ವಿಶಾಲ್ ಮಾರ್ಟ್ನಿಂದ ವಸ್ತುಗಳನ್ನು ಜನರ ಮನೆ ಬಾಗಿಲಿಗೆ ಸುರಕ್ಷಿತವಾಗಿ ತಲುಪಿಸಲಾಗುತ್ತದೆ. ಇದರಿಂದ ಜನರು ಮನೆಯಲ್ಲಿಯೇ ಶಾಪಿಂಗ್ ಮಾಡಬಹುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗಲಿದೆ.
ಫ್ಲಿಪ್ ಕಾರ್ಟ್ನಲ್ಲಿ ವಿಶಾಲ್ ಮಾರ್ಟ್ನ ಸ್ಟೋರ್ ಲಭ್ಯವಾಗುವಂತೆ ಬದಲಾವಣೆ ಮಾಡಲಾಗಿದೆ. ಜನರು ಗೋಧಿ, ಅಕ್ಕಿ, ಎಣ್ಣೆ, ಸೋಪು, ಪೇಸ್ಟ್ ಸೇರಿದಂತೆ ಅಗತ್ಯ ವಸ್ತುಗಳಿಗಾಗಿ ಬೇಡಿಕೆ ಸಲ್ಲಿಸಬಹುದಾಗಿದೆ. ವಾಣಿಜ್ಯ ವಲಯದಲ್ಲಿ ಈ ಒಪ್ಪಂದ ಹೊಸ ಲೆಕ್ಕಾಚಾರ ಹುಟ್ಟು ಹಾಕಿದೆ.
ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಪಾಟ್ನಾ, ಗೌಹಾತಿ, ಜೈಪುರ, ವಾರಣಾಸಿ, ಲಕ್ನೋ, ಕಾನ್ಪುರ, ನೋಯ್ಡಾ, ಪಣಜಿ ಸೇರಿದಂತೆ ಭಾರತದ 26 ನಗರದಲ್ಲಿ ಫ್ಲಿಪ್ ಕಾರ್ಟ್ ಮತ್ತು ವಿಶಾಲ್ ಮಾರ್ಟ್ನ ಜಂಟಿ ಸೇವೆ ಲಭ್ಯವಿದೆ. ಇನ್ನೂ 240ಕ್ಕೂ ಹೆಚ್ಚು ನಗರದಲ್ಲಿ ಸೇವೆ ವಿಸ್ತರಣೆ ಮಾಡಲು ಪ್ರಯತ್ನ ನಡೆದಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications