ಫೇಸ್ಬುಕ್ನ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ
ನವದೆಹಲಿ, ನವೆಂಬರ್ 4: ಮೆಟಾದ ( ಫೇಸ್ಬುಕ್ನ) ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥ ಅಜಿತ್ ಮೋಹನ್ ಅವರು ನವೆಂಬರ್ 3ರಂದು ರಾಜೀನಾಮೆ ನೀಡಿದ್ದಾರೆ.
ಅಜಿತ್ ಮೋಹನ್ ಅವರು ಸ್ಟ್ರೀಮಿಂಗ್ ಮೀಡಿಯಾ ಪ್ಲಾಟ್ಫಾರ್ಮ್ ಹಾಟ್ಸ್ಟಾರ್ ಸೇರಿದಂತೆ ಹೊಸ ವ್ಯವಹಾರಗಳನ್ನು ಪ್ರಾರಂಭಿಸಿದ ಇತಿಹಾಸವನ್ನು ಹೊಂದಿದ್ದಾರೆ. ಅಲ್ಲಿ ಅವರು ಅದರ ಮೊದಲ ಸಿಇಒ ಆಗಿ ಸೇವೆ ಸಲ್ಲಿಸಿದ್ದರು. ಸ್ನ್ಯಾಪ್ನ ಎಪಿಎಸಿ ವ್ಯವಹಾರದ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳುವ ಸಲುವಾಗಿ ಮೋಹನ್ ಅವರು ಮೆಟಾದ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.
ಗ್ಲೋಬಲ್ ಬ್ಯುಸಿನೆಸ್ ಗ್ರೂಪ್ನ ಮೆಟಾದ ಉಪಾಧ್ಯಕ್ಷ ನಿಕೋಲಾ ಮೆಂಡೆಲ್ಸೋನ್, ಕಂಪನಿಯಿಂದ ಹೊರಗೆ ಮತ್ತೊಂದು ಅವಕಾಶವನ್ನು ಪಡೆಯಲು ಅಜಿತ್ ಮೆಟಾದಲ್ಲಿನ ತನ್ನ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ಅವರು ನಮ್ಮ ಭಾರತದ ಕಾರ್ಯಾಚರಣೆಗಳನ್ನು ರೂಪಿಸುವಲ್ಲಿ ಮತ್ತು ಸ್ಕೇಲಿಂಗ್ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಆದ್ದರಿಂದ ಅವರು ಲಕ್ಷಾಂತರ ಭಾರತೀಯ ವ್ಯವಹಾರಗಳು, ಪಾಲುದಾರರು ಮತ್ತು ಜನರಿಗೆ ಸೇವೆ ಸಲ್ಲಿಸದ್ದಾರೆ. ನಾವು ಭಾರತಕ್ಕೆ ಬದ್ಧರಾಗಿದ್ದೇವೆ. ನಮ್ಮ ಎಲ್ಲಾ ಕೆಲಸ ಮತ್ತು ಪಾಲುದಾರಿಕೆಗಳನ್ನು ಮುಂದುವರಿಸಲು ಪ್ರಬಲ ನಾಯಕತ್ವದ ತಂಡವನ್ನು ಹೊಂದಿದ್ದೇವೆ. ಅಜಿತ್ ಅವರ ನಾಯಕತ್ವ ಮತ್ತು ಕೊಡುಗೆಗೆ ನಾವು ಕೃತಜ್ಞರಾಗಿರುತ್ತೇವೆ ಮತ್ತು ಭವಿಷ್ಯಕ್ಕಾಗಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ಅವರು ಹೇಳಿದರು.

2019 ರ ಜನವರಿಯಲ್ಲಿ ಅಜಿತ್ ಮೋಹನ್ ಅವರು ಮೆಟಾದ ಇಂಡಿಯಾ ವ್ಯವಹಾರದ ವ್ಯವಸ್ಥಾಪಕ ನಿರ್ದೇಶಕರ ಪಾತ್ರವನ್ನು ವಹಿಸಿಕೊಂಡಿದ್ದರು. 2017 ರ ಅಕ್ಟೋಬರ್ನಲ್ಲಿ ಮಾಜಿ ಫೇಸ್ಬುಕ್ ಮುಖ್ಯಸ್ಥ ಉಮಂಗ್ ಬೇಡಿ ಅವರನ್ನು ಬದಲಾಯಿಸಲಾಯಿತು. ಮೋಹನ್ ಅವರು ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮತ್ತು ಮ್ಯೂಸಿಯಂ ಆಫ್ ಆರ್ಟ್ ಮತ್ತು ಫೋಟೋಗ್ರಫಿ ಸದಸ್ಯರಾಗಿದ್ದಾರೆ. ಅವರು ಹಿಂದೆ ಆರ್ಥರ್ ಡಿ. ಲಿಟಲ್ ಮತ್ತು ಮೆಕಿನ್ಸೆ & ಕಂಪನಿಗೆ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications