'ಫೆರಾ' ಉಲ್ಲಂಘನೆ ಮಲ್ಯ ವಿರುದ್ಧ 'ಇಡಿ' ತನಿಖೆಗೆ ಓಕೆ
ನವದೆಹಲಿ, ಜುಲೈ 13: ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ(ಫೆರಾ) ನಿಯಮ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ಆಘಾತಕಾರಿ ಸುದ್ದಿ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ನಡೆಸುತ್ತಿದ್ದ ತನಿಖೆಗೆ ಇದ್ದ ತಡೆಯನ್ನು ಸುಪ್ರೀಂಕೋರ್ಟ್ ಪಕ್ಕಕ್ಕೆ ಸರಿಸಿ, ತನಿಖೆ ಮುಂದುವರೆಸುವಂತೆ ಆದೇಶಿಸಿದೆ. [ಮತ್ತೆ ಸುಸ್ತಿದಾರನಾದರೂ ಸುಸ್ತಾಗದ ಮಲ್ಯ]
1995ರಲ್ಲಿ ವಿದೇಶದಲ್ಲಿ ಯುಬಿ ಸಮೂಹದ ಕಿಂಗ್ ಫಿಷರ್ ಬ್ರ್ಯಾಂಡ್ ಪ್ರಚಾರಕ್ಕಾಗಿ ಲಂಡನ್ ಮೂಲದ ಬೆನೆಟನ್ ಫಾರ್ಮೂಲಾ ಲಿಮಿಟೆಡ್ ಜೊತೆ ಮಲ್ಯ ಕೆಲ ಒಪ್ಪಂದಗಳನ್ನು ಮಾಡಿಕೊಂಡಿದ್ದರು. [ಗುಜರಿ ಅಂಗಡಿಗೆ ಸೇರಿದ ಮಲ್ಯ ಖಾಸಗಿ ವಿಮಾನ]

ಲಂಡನ್ನಿನಲ್ಲಿ ನಡೆಯುವ ಫಾರ್ಮುಲಾ ಒನ್ ರೇಸಿಂಗ್ ಚಾಂಪಿಯನ್ ಶಿಪ್ ಗಳಲ್ಲಿ ಕಿಂಗ್ ಫಿಷರ್ ಬ್ರ್ಯಾಂಡ್ ಲೋಗೋ ಪ್ರದರ್ಶಿಸಲು ಬೆನೆಟನ್ ಸಂಸ್ಥೆಗೆ ಮಲ್ಯ ಅವರು ಸುಮಾರು 200,000 ಯುಎಸ್ ಡಾಲರ್ ನೀಡಿದ್ದರು. 1996, 1997 ಹಾಗೂ 1998ರಲ್ಲಿ ಪ್ರಚಾರಕ್ಕಾಗಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. [ಮಲ್ಯ ಆರ್ ಸಿಬಿ ಮಾರುತ್ತಾರಂತೆ!]
ಈ ಒಪ್ಪಂದಕ್ಕೆ ಭಾರತೀಯ ರಿಸರ್ವ್ ಬ್ಯಾಂಕಿನ ಪೂರ್ವಾನುಮತಿ ಬೇಕಿತ್ತು. ಅದರೆ, ಅನುಮತಿ ಪಡೆಯದೆ ಹಣ ರವಾನೆ ಮಾಡಿ ವಿದೇಶಿ ವಿನಿಯಮ ನಿಯಂತ್ರಣ ಕಾಯ್ದೆ(ಫೆರಾ) ಉಲ್ಲಂಘನೆ ಮಾಡಿದ ಆರೋಪ ಹೊರೆಸಿ ಮಲ್ಯ ಅವರ ಮೇಲೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿತ್ತು. [ಪಾರ್ಟ್ನರ್ ವಿರುದ್ಧ ತಿರುಗಿ ಬಿದ್ದ ವಿಜಯ್ ಮಲ್ಯ]
ಅದರೆ, ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ರದ್ದು ಕೋರಿ ಮಲ್ಯ ಅವರು ಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟಿನ ಮುಂದೆ ಈ ಬಗ್ಗೆ ವಿವರಣೆ ನೀಡಿದ ಜಾರಿ ನಿರ್ದೇಶನಾಲಯ, ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಈಗ ಸುಪ್ರೀಂಕೋರ್ಟ್ ಕೂಡಾ ಜಾರಿ ನಿರ್ದೇಶನಾಲಯ ತನ್ನ ತನಿಕೆ ಮುಂದುವರೆಸಬಹುದು ಎಂದು ಆದೇಶ ನೀಡಿದೆ. ನ್ಯಾ. ಜೆ ಚೆಲಮೇಶ್ವರ್ ಹಾಗೂ ಎಕೆ ಗೋಯಲ್ ಅವರಿದ್ದ ನ್ಯಾಯ ಪೀಠ ಮಲ್ಯ ಅವರಿಗೆ 10 ಲಕ್ಷ ರು ದಂಡವನ್ನು ಕೂಡಾ ವಿಧಿಸಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications