ಸವರನ್ ಗೋಲ್ಡ್ ಬಾಂಡ್ ಖರೀದಿಗೆ ಇಂದೇ ಕೊನೆಯ ದಿನ: ಬಿಟ್ಟರೆ ಸಿಗದು
ನವದೆಹಲಿ, ಸೆಪ್ಟೆಂಬರ್ 04: 2021ರ ಆರ್ಥಿಕ ವರ್ಷದ ಸವರನ್ ಚಿನ್ನದ ಬಾಂಡ್ ಯೋಜನೆಯ ಆರನೇ ಮತ್ತು ಅಂತಿಮ ಹಂತದ ಯೋಜನೆ ಚಂದಾದಾರಿಕೆಯು ಇಂದು ಮುಕ್ತಾಯವಾಗಲಿದೆ. ಮಾರುಕಟ್ಟೆಗಿಂತ ಕಡಿಮೆ ದರದಲ್ಲಿ ಚಿನ್ನವನ್ನು ಖರೀದಿಸಲು ಅವಕಾಶವಿದೆ.
ಸದ್ಯ ಷೇರುಪೇಟೆಯಲ್ಲಿ ಭಾರೀ ತಲ್ಲಣವೇ ಉಂಟಾಗುತ್ತಿದೆ. ಶುಕ್ರವಾರ ಭಾರತೀಯ ಷೇರುಪೇಟೆಯು ನೆಲಕಚ್ಚಿದೆ. ಇಂತಹ ಕಷ್ಟದ ಸಮಯದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಅನೇಕರು ಮುಂದಾಗಿದ್ದಾರೆ. ಏಕೆಂದರೆ ಚಿನ್ನದ ಮೇಲಿನ ಹೂಡಿಕೆ ಯಾವತ್ತಿದ್ರೂ ಸೇಫ್ ಅನ್ನೋದು ಹಲವರ ನಂಬಿಕೆ.
ಆಗಸ್ಟ್ 31ರಿಂದ ಆರಂಭಗೊಂಡ ಸವರನ್ ಗೋಲ್ಡ್ ಬಾಂಡ್ ಯೋಜನೆಯು ಇಂದು ಅಂದರೆ ಸೆಪ್ಟೆಂಬರ್ 4ಕ್ಕೆ ಕೊನೆಗೊಳ್ಳುತ್ತಿದೆ. ಹಾಗಿದ್ರೆ ಈ ಗೋಲ್ಡ್ ಬಾಂಡ್ ಯೋಜನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ಕೆಳಗೆ ಓದಿ

ಒಂದು ಗ್ರಾಂ ಚಿನ್ನಕ್ಕೆ ಎಷ್ಟು ರೂಪಾಯಿ?
ಈ ಬಾಂಡ್ ಯೋಜನೆಯಲ್ಲಿ ಸರ್ಕಾರವು ಚಿನ್ನದ ಬೆಲೆಯನ್ನು ಪ್ರತಿ ಗ್ರಾಂಗೆ 5,117 ರೂ. ಅಂದರೆ 10 ಗ್ರಾಂಗೆ 51,170 ರೂ. ಎಂದು ನಿಗದಿಪಡಿಸಿದೆ. ಆದರೆ ನೀವು ಅದನ್ನು ಆನ್ಲೈನ್ನಲ್ಲಿ ಖರೀದಿಸಿದರೆ ಪ್ರತಿ ಗ್ರಾಂಗೆ 50 ರೂಪಾಯಿ ರಿಯಾಯಿತಿ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲಿ ಚಿನ್ನದ ಬಾಂಡ್ಗಳನ್ನು ಖರೀದಿಸುವಾಗ 10 ಗ್ರಾಂ ಬೆಲೆ 50,670 ರೂ.

ಎಷ್ಟು ಗ್ರಾಂ.ವರೆಗೆ ಹೂಡಿಕೆ ಮಾಡಬಹುದು?
ಕನಿಷ್ಠ ಅನುಮತಿಸುವ ಹೂಡಿಕೆ 1 ಗ್ರಾಂ ಚಿನ್ನ. ಆರ್ಥಿಕ ವರ್ಷದಲ್ಲಿ ಅರ್ಹ ವ್ಯಕ್ತಿಗಳು ಮತ್ತು ಎಚ್ಯುಎಫ್ಗಳು ಕನಿಷ್ಠ ಒಂದು ಗ್ರಾಂ ಮತ್ತು ಗರಿಷ್ಠ ನಾಲ್ಕು ಕೆಜಿವರೆಗೆ ಚಿನ್ನವನ್ನು ಪಡೆಯಬಹುದು. ಟ್ರಸ್ಟ್ಗಳು ಮತ್ತು ಅಂತಹುದೇ ಘಟಕಗಳು ಹಣಕಾಸು ವರ್ಷದಲ್ಲಿ 20 ಕಿ.ಗ್ರಾಂ ವರೆಗೆ ಖರೀದಿಸಬಹುದು. ಯೋಜನೆಯ ಮುಕ್ತಾಯ ಅವಧಿ 8 ವರ್ಷಗಳು.

ಬಾಂಡ್ ಹೂಡಿಕೆಯ ಮೇಲೆ ಬಡ್ಡಿ ಎಷ್ಟು ಸಿಗುತ್ತೆ?
ನೀವು ಈ ಬಾಂಡ್ಗಳನ್ನು ಮಾರಾಟ ಮಾಡಲು ಬಯಸಿದರೆ ನೀವು ಕನಿಷ್ಠ 5 ವರ್ಷಗಳವರೆಗೆ ಕಾಯಬೇಕಾಗುತ್ತದೆ ಮತ್ತು ಈ ಯೋಜನೆಯಡಿಯಲ್ಲಿ ನೀವು ಹೂಡಿಕೆಯ ಮೇಲೆ ಶೇಕಡಾ 2.5 ರಷ್ಟು ವಾರ್ಷಿಕ ಬಡ್ಡಿಯನ್ನು ಪಡೆಯುತ್ತೀರಿ.

ಬಾಂಡ್ ಎಲ್ಲೆಲ್ಲಿ ಖರೀದಿಸಬಹುದು?
ಜನರು ನಿಗದಿತ ವಾಣಿಜ್ಯ ಬ್ಯಾಂಕುಗಳಿಂದ (ಸಣ್ಣ ಹಣಕಾಸು ಬ್ಯಾಂಕುಗಳು ಮತ್ತು ಪಾವತಿ ಬ್ಯಾಂಕುಗಳು) ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಚ್ಸಿಐಎಲ್), ಗೊತ್ತುಪಡಿಸಿದ ಅಂಚೆ ಕಚೇರಿಗಳು ಮತ್ತು ಷೇರು ವಿನಿಮಯ ಕೇಂದ್ರಗಳಿಂದ ಬಾಂಡ್ಗಳನ್ನು ಖರೀದಿಸಬಹುದು.
-
Akshaya Tritiya Special: ಅಕ್ಷಯ ತೃತೀಯ ಸ್ಪೆಷಲ್: ಪುರುಷರ ಚಿನ್ನದ ಆಭರಣಗಳಲ್ಲಿ ಹೊಸ ಟ್ರೆಂಡ್ಸ್ ವಿವರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications