ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚಲು ಮುಂದಾದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 09: "ಟೆಲಿಕಾಂ ಮಾರುಕಟ್ಟೆಯ ದರ ಸಮರದಲ್ಲಿ ಸಂಪೂರ್ಣವಾಗಿ ಹಿನ್ನಡೆ ಅನುಭವಿಸಿರುವ ಬಿಎಸ್ಎನ್ಎಲ್ಆದಾಯವಿಲ್ಲದೇ ದಿವಾಳಿತನ ಹಾದಿ ಹಿಡಿದಿದೆ" ಎಂದು ಬಿಎಸ್ಎನ್ಎಲ್ ಉದ್ಯೋಗಿಗಳ ಒಕ್ಕೂಟ ಹೇಳಿದೆ.
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಹಾಗೂ ಮಹಾನಗರ್ ಟೆಲಿಕಾಂ ಲಿಮಿಟೆಡ್ (ಎಂಟಿಎನ್ಎಲ್) ನಷ್ಟದಲ್ಲಿದ್ದು, ಎರಡು ಸಂಸ್ಥೆಗಳನ್ನು ಬಂದ್ ಮಾಡಲು ಸರ್ಕಾರ ಮುಂದಾಗಿರುವ ಸುದ್ದಿ ಬಂದಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಇಲಾಖೆ ಶಿಫಾರಸ್ಸು ಮಾಡಿದೆ.

ನೌಕರರಿಗೆ ಸಕಾಲಕ್ಕೆ ಸಂಬಳವನ್ನೂ ನೀಡಲಾಗದ ಪರಿಸ್ಥಿತಿಯಲ್ಲಿ ಈ ಸಂಸ್ಥೆಗಳಿದ್ದು, 74 ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವಂತೆ ಹಣಕಾಸು ಇಲಾಖೆಯನ್ನು ಕೋರಲಾಗಿತ್ತು. ಆದರೆ ಸಮಗ್ರ ಪರಿಶೀಲನೆ ನಡೆಸಿರುವ ಹಣಕಾಸು ಇಲಾಖೆ ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದೆ. ಭಾರತ್ ಸಂಚಾರ್ ನಿಗಮ ನಿಯಮಿತದಲ್ಲಿ 1.76 ಲಕ್ಷ ಮಂದಿ ನೌಕರರಿದ್ದರೆ, ಮಹಾನಗರ ಟೆಲಿಕಾಂ ಲಿಮಿಟೆಡ್ ನಲ್ಲಿ 22 ಸಾವಿರ ಮಂದಿ ನೌಕರರಿದ್ದಾರೆ. ಇವರುಗಳಿಗೆ ಕಡ್ಡಾಯವಾಗಿ ಸ್ವಯಂ ನಿವೃತ್ತಿ(ವಿಆರ್ ಎಸ್) ಅನ್ವಯಿಸುವುದು ಸೂಕ್ತ ಎಂದು ಹಣಕಾಸು ಇಲಾಖೆ ತನ್ನ ಶಿಫಾರಸ್ಸಿನಲ್ಲಿ ಹೇಳಿದೆ.
ಬಿಎಸ್ಎನ್ಎಲ್ನ ಒಟ್ಟು ಆದಾಯದ ಶೇ 55ರಷ್ಟು ಸಿಬ್ಬಂದಿ ವೇತನ ಪಾವತಿಗೆ ವಿನಿಯೋಗವಾಗುತ್ತಿದೆ. ವಾರ್ಷಿಕವಾಗಿ ಸಂಸ್ಥೆಯ ವೇತನಶುಲ್ಕ ಶೇ 8ರಷ್ಟು ಹೆಚ್ಚಳವಾಗುತ್ತಿದೆ. ಆದರೆ, ಆದಾಯ ಮಾತ್ರ ನಿಧಾನಗತಿಯಲ್ಲಿ ಸಾಗುತ್ತಿದೆ. 2018ರಲ್ಲಿ ಸುಮಾರು 8 ಸಾವಿರ ಕೋಟಿ ರು ನಷ್ಟು ನಷ್ಟ ಎದುರಿಸಿದೆ. 2017ರ ಆರ್ಥಿಕ ವರ್ಷದಲ್ಲಿ 4,786 ಕೋಟಿ ರು, 2019ರಲ್ಲಿ 8 ಸಾವಿರ ಕೋಟಿ ರುಗೂ ಅಧಿಕ ನಷ್ಟ ನಿರೀಕ್ಷಿಸಲಾಗಿದೆ.
ಗ್ರಾಹಕರಿಗೆ ಕಳಪೆ ಸೇವೆ, ತಂತ್ರಜ್ಞಾನ ಮೇಲ್ದರ್ಜೆಗೇರಿಸುವಿಕೆಯಲ್ಲಿ ಮಂದಗತಿ, ಅಶಿಸ್ತಿನ ಆಡಳಿತ, ಅತಿ ವೇತನದಿಂದ ಹೊರೆಯಾಗಿರುವ ಸಿಬ್ಬಂದಿ, ಸರ್ಕಾರದ ಕೆಲವು ದಾರಿ ತಪ್ಪಿಸುವ ಸೂಚನೆ ಮತ್ತು ಅನಗತ್ಯ ಮೂಗು ತೂರಿಸುವಿಕೆಯಿಂದಲೂ ಈ ಸಂಸ್ಥೆಗಳು ಹೈರಾಣಾಗಿವೆ.
'ನಾವೆಲ್ಲರೂ ಕೇಂದ್ರ ಸರ್ಕಾರದ ಉದ್ಯೋಗದ ವ್ಯಾಪ್ತಿಯಲ್ಲಿ ಇರುವವರು. ಯಾವುದೇ ಅಧಿಸೂಚನೆ ಇಲ್ಲದೆ ಏಕಾಏಕಿ ಯಾರಿಗೂ ರಾಜೀನಾಮೆ ನೀಡುವಂತೆ ಅಥವಾ ವಿಆರ್ಎಸ್ ತೆಗೆದುಕೊಳ್ಳುವಂತೆ ಸೂಚನೆ ನೀಡಲು ಸಾಧ್ಯವಿಲ್ಲ' ಎಂದು ಒಕ್ಕೂಟ ಹೇಳಿದೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications