ಮನೆ ಬಾಗಿಲಿಗೆ ಫ್ಲಿಪ್ಕಾರ್ಟ್ ಕ್ವಿಕ್ ಹೈಪರ್ ಲೋಕಲ್ ಸೇವೆ
ಬೆಂಗಳೂರು, ಸೆಪ್ಟಂಬರ್10: ಭಾರತದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ತನ್ನ ಹೈಪರ್ ಲೋಕಲ್ ಸೇವೆಯಾದ ಫ್ಲಿಪ್ ಕಾರ್ಟ್ ಕ್ವಿಕ್ ಅನ್ನು ಇನ್ನೂ ಮೂರು ಮೆಟ್ರೋ ನಗರಗಳಾದ ಕೊಲ್ಕತ್ತ, ಚೆನ್ನೈ ಮತ್ತು ಮುಂಬೈಗೆ ವಿಸ್ತರಣೆ ಮಾಡಿದೆ. ಈ ವಿಸ್ತರಣೆಯಿಂದ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ಸುರಕ್ಷಿತ ಮತ್ತು ತಡೆರಹಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ.
ಕರ್ನಾಟಕದ ಗ್ರಾಹಕರು ಇನ್ನು ಮುಂದೆ ಪೂಜಾ ಸಾಮಗ್ರಿಗಳು, ಮೋದಕ ತಯಾರಿಸುವ ಪದಾರ್ಥಗಳು, ಸಿಹಿತಿಂಡಿಗಳು & ಡ್ರೈಫ್ರೂಟ್ಸ್, ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿಸಬಹುದಾಗಿದೆ. ಈ ವರ್ಷ 75+ ಗಣೇಶ ಚತುರ್ಥಿ ಆಯ್ಕೆಗಳಿದ್ದು, ಫ್ಲಿಪ್ ಕಾರ್ಟ್ ಕ್ವಿಕ್ ಗ್ರಾಹಕರಿಗೆ ಅನನ್ಯ ಕೊಡುಗೆಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ.
ಗ್ರಾಹಕರಿಗೆ ಆನ್ಲೈನ್ನಲ್ಲಿ ಆರ್ಡರ್ ಮಾಡಲು ಮತ್ತು ಮುಂದಿನ 90 ನಿಮಿಷಗಳಲ್ಲಿ ಡೆಲಿವರಿ ಪಡೆಯಲು ಅಥವಾ ಅವರ ಅನುಕೂಲಕ್ಕೆ ಅನುಗುಣವಾಗಿ ಎರಡು ಗಂಟೆ ಸ್ಲಾಟ್ ಬುಕ್ ಮಾಡಲು ಅವಕಾಶ ನೀಡುತ್ತದೆ. ಗ್ರಾಹಕರು ತಮ್ಮ ಮೊದಲ ಆರ್ಡರ್ ನಲ್ಲಿ ಉಚಿತ ವಿತರಣೆಯನ್ನು ಪಡೆಯಲಿದ್ದಾರೆ. ಅಲ್ಲದೇ ಅವರ ನಂತರದ ಆರ್ಡರ್ ಗಾತ್ರವು 199 ರೂಪಾಯಿಗಳಿಗಿಂತ ಹೆಚ್ಚಿದ್ದರೆ ಈ ಅವಕಾಶವನ್ನು ಹೊಂದಲಿದ್ದಾರೆ. ಗ್ರಾಹಕರು ದಿನದ ಯಾವುದೇ ಸಮಯದಲ್ಲಿ ಆರ್ಡರ್ ಗಳನ್ನು ಮಾಡಬಹುದು ಮತ್ತು ಅಂತಹ ಉತ್ಪನ್ನಗಳನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಪಡೆದುಕೊಳ್ಳುವ ಆಯ್ಕೆ ಮಾಡಿಕೊಳ್ಳಬಹುದು.

ಫ್ಲಿಪ್ಕಾರ್ಟ್ ಕ್ವಿಕ್ನ ಉಪಾಧ್ಯಕ್ಷ ಸಂದೀಪ್ ಕಾರ್ವ ಅವರು ಮಾತನಾಡಿ, ''ಫ್ಲಿಪ್ಕಾರ್ಟ್ ಕ್ವಿಕ್ನೊಂದಿಗೆ ನಮ್ಮ ಗ್ರಾಹಕರಿಗೆ ವೈಯಕ್ತಿಕ ಅನುಭವ ಮತ್ತು ಆಯ್ಕೆಯನ್ನು ಒದಗಿಸಲು ತಂತ್ರಜ್ಞಾನ ಮತ್ತು ಪೂರೈಕೆ ಜಾಲ ಸಾಮರ್ಥ್ಯದ ಅನ್ಲಾಕ್ ಮಾಡುವುದು ನಮ್ಮ ಗುರಿಯಾಗಿದೆ. ನಾವು ವೇಗದ ವಿತರಣೆಗಳನ್ನು ಪರಿಹರಿಸಲು ಮಾತ್ರವಲ್ಲದೇ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡಲು ನಾವು ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ ಹಾಗೂ ಹಬ್ಬದ ಋತುವಿನಲ್ಲಿಯೂ ಈ ಪ್ರಾಮುಖ್ಯತೆ ಇರುತ್ತದೆ. ಈ ಅವಧಿಯಲ್ಲಿ ನಾವು ನಮ್ಮ ಗ್ರಾಹಕರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಮಗುವಿನ ಆರೈಕೆಯ ಉತ್ಪನ್ನಗಳನ್ನು ಆರ್ಡರ್ ಮಾಡಿದ 90 ನಿಮಿಷಗಳೊಳಗೆ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದೇವೆ'' ಎಂದರು.
ಬೆಂಗಳೂರಿನಲ್ಲಿ 2020 ರಲ್ಲಿ ಫ್ಲಿಪ್ಕಾರ್ಟ್ ಕ್ವಿಕ್ ಅನ್ನು ಆರಂಭಿಸಲಾಗಿದ್ದು, ಉತ್ಪನ್ನಗಳ ಲಭ್ಯತೆಯನ್ನು ವಿಸ್ತರಣೆ ಮಾಡಲು ಮತ್ತು ಫ್ಲಿಪ್ ಕಾರ್ಟ್ ಹಬ್ಗಳಿಂದ ಉತ್ಪನ್ನಗಳನ್ನು ಆರ್ಡರ್ ಮಾಡುವ ಗ್ರಾಹಕರಿಗೆ ತ್ವರಿತವಾದ ವಿತರಣೆಯನ್ನು ಸಕ್ರಿಯಗೊಳಿಸಲು ಆರಂಭ ಮಾಡಲಾಗಿತ್ತು. ಹೈಪರ್ ಲೋಕಲ್ ವಿತರಣಾ ಸೇವೆಯು ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಉತ್ಪನ್ನಗಳು, ದಿನಸಿ, ಮೊಬೈಲ್ಗಳು, ಎಲೆಕ್ಟ್ರಾನಿಕ್ಸ್ ಮತ್ತು ಮಗುವಿನ ಆರೈಕೆಯಂತಹ ವಿಭಾಗಗಳಲ್ಲಿ 2500 ಕ್ಕೂ ಹೆಚ್ಚು ಉತ್ಪನ್ನಗಳ ಸಂಗ್ರಹವನ್ನು ಒದಗಿಸುತ್ತದೆ. ಬೆಂಗಳೂರು, ದೆಹಲಿ, ಗುರುಗಾಂವ್, ಘಾಜಿಯಾಬಾದ್, ನೋಯ್ಡಾ, ಹೈದ್ರಾಬಾದ್, ಪುಣೆ, ಮುಂಬೈ, ಕೊಲ್ಕತ್ತ ಮತ್ತು ಚೆನ್ನೈ ಸೇರಿದಂತೆ 10 ನಗರಗಳಲ್ಲಿ ಈಗ ಫ್ಲಿಪ್ಕಾರ್ಟ್ ಕ್ವಿಕ್ ಸೇವೆ ಲಭ್ಯವಿದೆ.

ಮುಂಬರುವ ಹಬ್ಬದ ಋತು ಮತ್ತು ಬಿಗ್ ಬಿಲಿಯನ್ ಡೇಸ್ ಹಿನ್ನೆಲೆಯಲ್ಲಿ ಭಾರತದ ಸ್ವದೇಶಿ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇಂದು ತನ್ನ ಕಿರಾಣ ವಿತರಣಾ ಕಾರ್ಯಕ್ರಮ'' ಘೋಷಣೆ ಮಾಡಿದೆ. ಈ ಯೋಜನೆಯು ಸ್ಥಳೀಯ ಜನರಲ್ ಟ್ರೇಡ್ ಸ್ಟೋರ್ಸ್ ವಿತರಣಾ ಪಾಲುದಾರರಾಗೊ ಸಹಾಯ ಮಾಡುತ್ತದೆ. ಈ ಹಬ್ಬದ ಋತುವಿನಲ್ಲಿ ಫ್ಲಿಪ್ ಕಾರ್ಟ್ ದೇಶಾದ್ದಯಂತ 1,00,000 ಕ್ಕೂ ಅಧಿಕ ಕಿರಾಣ ಪಾಲುದಾರರನ್ನು ಹೊಂದುವ ಮೂಲಕ ತನ್ನ ಕಿರಾಣ ವಿತರಣಾ ಕಾರ್ಯಕ್ರಮವನ್ನು ಮತ್ತಷ್ಟು ಬಲವರ್ಧನೆ ಮಾಡಿಕೊಂಡಿದೆ. ಈ ಪಾಲುದಾರಿಕೆ ಮೂಲಕ ಹಬ್ಬದ ಸಂದರ್ಭದಲ್ಲಿ ಮಿಲಿಯನ್ ಗಟ್ಟಲೆ ವಿತರಣೆಯನ್ನು ಮಾಡಲಿದೆ. ಕಳೆದ ವರ್ಷ, ಹಬ್ಬದ ಸಂದರ್ಭದಲ್ಲಿ ಈ ವಿಶೇಷ ತರಬೇತಿ ಹೊಂದಿದ ಕಿರಾಣ ಪಾಲುದಾರರ ಮೂಲಕ ಫ್ಲಿಪ್ ಕಾರ್ಟ್ ದೇಶಾದ್ಯಂತ 10 ಮಿಲಿಯನ್ ಗೂ ಅಧಿಕ ವಿತರಣೆಗಳನ್ನು ಮಾಡಿದೆ.
ಫ್ಲಿಪ್ ಕಾರ್ಟ್ ಲಕ್ಷಾಂತರ ಮಾರಾಟಗಾರರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಪೂರೈಕೆ ಜಾಲವನ್ನು ಸ್ಥಾಪಿಸಲು ಹೆಚ್ಚು ಹೂಡಿಕೆ ಮಾಡಿದೆ ಮತ್ತು ಇ-ಕಾಮರ್ಸ್ನಲ್ಲಿ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡಿದ ಗ್ರಾಹಕರ ಅನುಭವದ ಕೊಡುಗೆಗಳಿಗೆ ಪ್ರಮುಖವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications