ಫ್ಲಿಪ್ಕಾರ್ಟ್ನಿಂದ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ
ಬೆಂಗಳೂರು, ಮೇ 18, 2020: ದೇಶೀಯ ಇಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ ತನ್ನ ಸಪ್ಲೈ ಚೇನ್ನಲ್ಲಿ ಉತ್ಪನ್ನಗಳನ್ನು ಸುಸ್ಥಿರ ರೀತಿಯಲ್ಲಿ ಪ್ಯಾಕ್ ಮಾಡುವ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.
ಶೂನ್ಯ ತ್ಯಾಜ್ಯ ಉತ್ಪಾದನೆ ಪರಿಕಲ್ಪನೆಯತ್ತ ಗಮನಹರಿಸಿರುವ ಫ್ಲಿಪ್ಕಾರ್ಟ್ ತನ್ನ ಸಪ್ಲೈ ಚೇನ್ನಲ್ಲಿ ಉತ್ಪನ್ನಗಳ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡುತ್ತಿದೆ. ಇದರ ಪರಿಣಾಮ ತನ್ನದೇ ಆದ ಸಪ್ಲೈ ಚೇನ್ನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸುಮಾರು ಶೇ.50 ರಷ್ಟು ಕಡಿಮೆ ಮಾಡಿದೆ. ಮಹಾರಾಷ್ಟ್ರದಲ್ಲಿ ತನ್ನದೇ ಸ್ವಂತ ಸಪ್ಲೈ ಚೇನ್ನಲ್ಲಿ ಮೇ 1, 2020 ರಿಂದ ಸಂಪೂರ್ಣವಾಗಿ ಕಾಗದದ ಪೊಟ್ಟಣಗಳಲ್ಲಿ ಪ್ಯಾಕ್ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತಗೊಳಿಸಿದೆ.
ತನ್ನ ಸುಸ್ಥಿರ ಬೆಳವಣಿಗೆಗೆ ಕಂಪನಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುವತ್ತ ಗಮನಹರಿಸಿದೆ. ಇದರಲ್ಲಿ ಪ್ರಮುಖವಾಗಿ ಪರಿಸರಸ್ನೇಹಿ ಪೇಪರ್ ಶ್ರೆಡ್ಸ್ ಬಳಕೆ, ಪಾಲಿ ಪೌಚ್ಗಳ ಬದಲಿಗೆ ಪುನರ್ಬಳಕೆ ಮಾಡಬಹುದಾದ ಪೇಪರ್ ಬ್ಯಾಗ್ಗಳ ಬಳಕೆ, ಬಬಲ್ ರ್ಯಾಪ್ಗಳು ಮತ್ತು ಏರ್ ಬ್ಯಾಗ್ಗಳ ಬದಲಾಗಿ ಕಾರ್ಟನ್ ವೇಸ್ಟ್ ಶ್ರೆಡೆಡ್ ಉತ್ಪನ್ನಗಳಂತಹ ಹಲವಾರು ಬಗೆಯ ಪರಿಸರಸ್ನೇಹಿ ಉತ್ಪನ್ನಗಳನ್ನು ಬಳಕೆ ಮಾಡಲು ಆರಂಭಿಸಿದೆ.

ಪ್ಲಾಸ್ಟಿಕ್ ಸೆಕ್ಯೂರಿಟಿ ಬ್ಯಾಗ್
ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ಸೆಕ್ಯೂರಿಟಿ ಬ್ಯಾಗ್ ಗಳಿಗೆ ಬದಲಾಗಿ ಕಾಗದದಿಂದ ತಯಾರಿಸಲಾದ ಸೆಕ್ಯೂರಿಟಿ ಎನ್ವಲಪ್ಗಳ ಬಳಕೆ ಮಾಡಲಾಗುತ್ತಿದೆ. rapping ಫಿಲ್ಮ್ಗಳ ಬದಲಾಗಿ ಪುನರ್ಬಳಕೆ ಮಾಡಿದ ಕಾಗದದಿಂದ ತಯಾರಿಸಲಾಗಿರುವ ಕುಶನಿಂಗ್ ಉತ್ಪನ್ನಗಳನ್ನು ಬಳಸಲಾಗುತ್ತಿದೆ.
ಫ್ಲಿಪ್ಕಾರ್ಟ್ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಮತ್ತು ಇತರೆ ಪರಿಸರ ಸ್ನೇಹಿ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿದ್ದುಕೊಂಡು ಸುಸ್ಥಿರ ಪರಿಸರ ನಿರ್ಮಾಣದತ್ತ ಹೆಜ್ಜೆ ಇರಿಸಿದೆ. ಈ ಮೂಲಕ ತನ್ನ ಲಕ್ಷಾಂತರ ಮಾರಾಟಗಾರ ಪಾಲುದಾರರೂ ಸಹ ಸುಸ್ಥಿರ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರಣೆ ನೀಡುತ್ತಿದೆ.

2,00,000 ಕ್ಕೂ ಅಧಿಕ ಸ್ಥಳೀಯ ಮಾರಾಟಗಾರರು
ಪ್ಲಾಸ್ಟಿಕ್ ಇನ್ನಿತರೆ ಉತ್ಪನ್ನಗಳಿಂದ ತಯಾರಿಸಲಾದ ಪ್ಯಾಕೇಜಿಂಗ್ ಉತ್ಪನ್ನಗಳಿಗಿಂತ ಕಾಗದದಿಂದ ತಯಾರಿಸಲಾದ ಉತ್ಪನ್ನಗಳಿಗೆ ಕಡಿಮೆ ವೆಚ್ಚವಾಗುತ್ತದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡುತ್ತಿದೆ.
ಫ್ಲಿಪ್ಕಾರ್ಟ್ ಪ್ರಸ್ತುತ 2,00,000 ಕ್ಕೂ ಅಧಿಕ ಸ್ಥಳೀಯ ಮಟ್ಟದ ಮಾರಾಟಗಾರರನ್ನು ಹೊಂದಿದೆ. ಇದರಲ್ಲಿ ಪ್ರಮುಖವಾಗಿ ಹೆಚ್ಚಿನವರು ಎಂಎಸ್ಎಂಇಗಳಾಗಿವೆ. ಇವರಲ್ಲಿ ಬಹುಪಾಲು ಮಾರಾಟಗಾರರು ಗ್ರಾಹಕರಿಂದ ನೇರವಾಗಿ ಆರ್ಡರ್ ಗಳನ್ನು ಪಡೆಯುತ್ತಿದ್ದಾರೆ ಮತ್ತು ತಮ್ಮದೇ ಆದ ಪ್ಯಾಕೇಜಿಂಗ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಫ್ಲಿಪ್ಕಾರ್ಟ್ ಗ್ರೂಪ್ನ ರಜನೀಶ್ ಕುಮಾರ್
ಫ್ಲಿಪ್ಕಾರ್ಟ್ ಗ್ರೂಪ್ನ ಚೀಫ್ ಕಾರ್ಪೊರೇಟ್ ಅಫೇರ್ಸ್ ಆಫೀಸರ್ ರಜನೀಶ್ ಕುಮಾರ್ ಅವರು ಮಾತನಾಡಿ, ''ಪರಿಸರ ಸುಸ್ಥಿರತೆ ವಾತಾವರಣವನ್ನು ನಿರ್ಮಾಣ ಮಾಡಲು ಫ್ಲಿಪ್ಕಾರ್ಟ್ ಬದ್ಧವಾಗಿದೆ ಮತ್ತು ದೀರ್ಘಾವಧಿಯ ಸುಸ್ಥಿರತೆ ಉಪಕ್ರಮಗಳನ್ನು ಕೈಗೊಳ್ಳುವತ್ತ ವಿವಿಧ ಪಾಲುದಾರರೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆ. ಈ ಮೂಲಕ ಪರಿಸರಸ್ನೇಹಿ ಜಾಗೃತಿ ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಾವು ನಮ್ಮದೇ ಸಪ್ಲೈ ಚೇನ್ನಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಪರಿಚಯಿಸುತ್ತಿದ್ದೇವೆ. ಈ ನಮ್ಮ ಉಪಕ್ರಮವು ಈಗ ಮತ್ತು ಭವಿಷ್ಯದಲ್ಲಿ ಉತ್ತಮ ರೀತಿಯ ಪರಿಣಾಮ ಮತ್ತು ಫಲಿತಾಂಶವನ್ನು ನೀಡಲಿದೆ'' ಎಂದು ಅಭಿಪ್ರಾಯಪಟ್ಟರು.

ಎಲೆಕ್ಟ್ರಿಕ್ ವಾಹನಗಳ ಬಳಕೆ
ಫ್ಲಿಪ್ಕಾರ್ಟ್ ತನ್ನ ವ್ಯವಹಾರಗಳಲ್ಲಿ ಮತ್ತು ವ್ಯಾಲ್ಯೂ ಚೇನ್ನಲ್ಲಿ ಸುಸ್ಥಿರತೆಯ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಬದ್ಧವಾಗಿದೆ. ಈ ಮೂಲಕ ಪರಿಸರ ಸುಸ್ಥಿರತೆ ಮತ್ತು ಸಾಮಾಜಿಕ ಜವಾಬ್ದಾರಿಗೆ ಮಹತ್ವ ನೀಡಲಾಗುತ್ತಿದೆ. ಕಡೆಯ ವಿತರಣಾ ಜಾಲದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ, ಸಂಪನ್ಮೂಲ ಕಾರ್ಯದಕ್ಷತೆ ಮತ್ತು ನವೀಕರಿಸಬಹುದಾದ ಉತ್ಪನ್ನಗಳ ಬಳಕೆ ಸೇರಿದಂತೆ ಇನ್ನೂ ಹಲವಾರು ಉಪಕ್ರಮಗಳನ್ನು ಪರಿಚಯಿಸುತ್ತಿದೆ. ಇದಲ್ಲದೇ, ತ್ಯಾಜ್ಯ ಪ್ರಮಾಣದಲ್ಲಿ ಇಳಿಕೆ, ನಿರ್ವಹಣೆ ಹಾಗೂ ಐಎಸ್ಒ 14001 ಪ್ರಮಾಣಿಕೃತ ಕಾರ್ಯತಂತ್ರದ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ಕೆಲಸದ ಸ್ಥಳಗಳಲ್ಲಿ ಪರಿಸರ ಮಾಲಿನ್ಯವನ್ನು ತಗ್ಗಿಸುವ ಕೆಲಸ ಮಾಡುತ್ತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications