ತನ್ನ ಇಕ್ವಿಟಿ ಸ್ವತ್ತನ್ನು ಹೆಚ್ಚಿಸಿಕೊಂಡ ಫ್ಲಿಪ್ಕಾರ್ಟ್: 24.9 ಬಿಲಿಯನ್ ಡಾಲರ್ ಮೌಲ್ಯ
ನವದೆಹಲಿ, ಜುಲೈ 15: ಫ್ಲಿಪ್ಕಾರ್ಟ್ ಮಂಗಳವಾರ ತನ್ನ ಪ್ರಮುಖ ಮಾಲೀಕ ವಾಲ್ಮಾರ್ಟ್ ಇಂಕ್ ನೇತೃತ್ವದ ಹೂಡಿಕೆಯಲ್ಲಿ 1.2 ಬಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸಿದೆ.
ಫ್ಲಿಪ್ಕಾರ್ಟ್ ಗ್ರೂಪ್ ತನ್ನ ಇ-ಕಾಮರ್ಸ್ ಮಾರುಕಟ್ಟೆಯಲ್ಲಿ ಹೆಚ್ಚುವರಿ 1.2 ಬಿಲಿಯನ್ ಇಕ್ವಿಟಿ ಸ್ವತ್ತನ್ನು ಹೆಚ್ಚಿಸಿಕೊಂಡಿದೆ. ಫ್ಲಿಪ್ಕಾರ್ಟ್ನ ಬಹುಪಾಲು ಪಾಲುದಾರಿಕೆ ಹೊಂದಿರುವ ವಾಲ್ಮಾರ್ಟ್ ನೇತೃತ್ವದಲ್ಲಿ ಕಂಪನಿಯ ಇತರೆ ಷೇರುದಾರರು ಈ ಹೂಡಿಕೆ ಮಾಡಿದ್ದಾರೆ. ಇದರೊಂದಿಗೆ ಕಂಪನಿಯ ಮೌಲ್ಯ 24.9 ಬಿಲಿಯನ್ ಡಾಲರ್ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಹಣವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಫ್ಲಿಪ್ಕಾರ್ಟ್ ಕೋವಿಡ್ -19 ಬಿಕ್ಕಟ್ಟಿನಿಂದ ಭಾರತ ಹೊರಹೊಮ್ಮುತ್ತಿದ್ದಂತೆ ತನ್ನ ಇ-ಕಾಮರ್ಸ್ ಮಾರುಕಟ್ಟೆಯ ಮುಂದುವರಿದ ಅಭಿವೃದ್ಧಿಗೆ ಬಳಸುತ್ತದೆ ಎಂದು ಅದು ಹೇಳಿದೆ.

ಈ ಬಗ್ಗೆ ಮಾತನಾಡಿರುವ ಫ್ಲಿಪ್ಕಾರ್ಟ್ನ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, 'ಕೊರೋನಾ ವೈರಸ್ ನಂತಹ ಸಾಂಕ್ರಾಮಿಕ ಸವಾಲಿನ ಸಮಯದಲ್ಲಿ ನಾವು ನಮ್ಮ ಸಂಸ್ಥೆಯನ್ನು ಸದೃಢವಾಗಿ ಬೆಳೆಸುವುದಕ್ಕೆ ಮತ್ತು ಭಾರತೀಯರ ಅವಶ್ಯಕತೆಗಳನ್ನು ಪೂರೈಸುವಿಕೆ ಹೆಚ್ಚುತ್ತಿರುವುದರಿಂದ ನಮ್ಮ ಷೇರುದಾರರು ಬೆಂಬಲವಾಗಿ ನಿಂತಿದ್ದಕ್ಕೆ ಅವರಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.
ಅಂತೆಯೇ ಫ್ಲಿಪ್ಕಾರ್ಟ್ನಲ್ಲಿ ವಾಲ್ಮಾರ್ಟ್ ಹೂಡಿಕೆ ಆರಂಭ ಆದಾಗಿನಿಂದಲೂ ನಮ್ಮ ತಂತ್ರಜ್ಞಾನ, ಪಾಲುದಾರಿಕೆ ಮತ್ತು ಹೊಸ ಸೇವೆಗಳ ಮೂಲಕ ನಾವು ನಮ್ಮ ಕೊಡುಗೆಯನ್ನು ಹೆಚ್ಚು ವಿಸ್ತರಿಸಿಕೊಂಡಿದ್ದೇವೆ. ಇಂದು, ನಾವು ಎಲೆಕ್ಟ್ರಾನಿಕ್ಸ್ ಮತ್ತು ಫ್ಯಾಷನ್ನಲ್ಲಿ ಹೆಚ್ಚು ಮುನ್ನಡೆಯುತ್ತಿದ್ದೇವೆ. ಮತ್ತು ನಮ್ಮ ಗ್ರಾಹಕರಿಗೆ ತಡೆರಹಿತ ಪಾವತಿ ಮತ್ತು ವಿತರಣೆ ಇತರೆ ಸಾಮಾನ್ಯ ಸರಕು ವಿಭಾಗಗಳು ಮತ್ತು ದಿನಸಿಗಳಲ್ಲಿ ಪಾಲನ್ನು ಹೆಚ್ಚಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ 200 ಮಿಲಿಯನ್ ಭಾರತೀಯ ವ್ಯಾಪಾರಿಗಳನ್ನು ಆನ್ಲೈನ್ ವ್ಯವಸ್ಥೆಯಡಿ ತರುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
2007 ರಲ್ಲಿ ಸ್ಥಾಪನೆಯಾದ ಫ್ಲಿಪ್ಕಾರ್ಟ್ ಸಮೂಹವು, ಡಿಜಿಟಲ್ ಪಾವತಿ ಪ್ಲಾಟ್ಫಾರ್ಮ್ಗಳಾದ ಫೋನ್ ಪೇ, ಫ್ಯಾಶನ್ ಸ್ಪೆಷಾಲಿಟಿ, ಮತ್ತು ಇ-ಕಾರ್ಟ್ ಅನ್ನು ಒಳಗೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications