ಆಹಾರ ಹಣದುಬ್ಬರ: ಮೇ ತಿಂಗಳಿನಲ್ಲಿ 9.28 ಪರ್ಸೆಂಟ್ಗೆ ಏರಿಕೆ
ನವದೆಹಲಿ, ಜೂನ್ 13: ದೇಶದಲ್ಲಿ ಕೊರೊನಾವೈರಸ್ದಿಂದಾಗಿ ಆಗಿರುವ ಅವಾಂತರ ಅಷ್ಟಿಷ್ಟಲ್ಲ. ಅನೇಕ ಉದ್ಯಮಗಳು ನೆಲಕಚ್ಚಿ ಮತ್ತೆ ಎದ್ದು ನಿಲ್ಲುವುದೇ ಅನುಮಾನ ಎಂಬಂತಹ ಪರಿಸ್ಥಿತಿಗೆ ತಲುಪಿವೆ. ಇದರ ನಡುವೆ ಲಾಕ್ಡೌನ್ ಕಾರಣಕ್ಕೆ ಮೇ ತಿಂಗಳಿನಲ್ಲಿ ಆಹಾರ ಹಣದುಬ್ಬರುವ 9.28 ಪರ್ಸೆಂಟ್ಗೆ ಏರಿಕೆಯಾಗಿದೆ.
Recommended Video
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ವಿವರಗಳಲ್ಲಿ ಚಿಲ್ಲರೆ ಹಣದುಬ್ಬರದ ಕೆಲ ವಿವರಗಳನ್ನಷ್ಟೇ ಪ್ರಕಟಿಸಿದ್ದು, ಗ್ರಾಹಕರ ಆಹಾರ ಬೆಲೆ ಸೂಚ್ಯಂಕವು (ಸಿಎಫ್ಪಿಐ) 9.28 ಪರ್ಸೆಂಟ್ ತಲುಪಿದೆ ಎಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1.83 ಪರ್ಸೆಂಟ್ರಷ್ಟಿತ್ತು.
ಆದಾಗ್ಯೂ, ಚಿಲ್ಲರೆ ಆಹಾರ ಹಣದುಬ್ಬರವು ವರ್ಷದಿಂದ ವರ್ಷಕ್ಕೆ 9.28 ಪರ್ಸೆಂಟ್ಗೆ ಏರಿಕೆಯಾಗಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MOSPI) ಶುಕ್ರವಾರ ಬಿಡುಗಡೆ ಮಾಡಿದೆ. ನಗರ ಪ್ರದೇಶಗಳಲ್ಲಿ ಈ ಸಂಖ್ಯೆ 8.36 ಪರ್ಸೆಂಟ್ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಆಹಾರ ಹಣದುಬ್ಬರ 9.69 ಪರ್ಸೆಂಟ್ರಷ್ಟಿದೆ.

ಹಿಂದಿನ ತಿಂಗಳ ಬಿಡುಗಡೆಯ ಪ್ರಕಾರ, ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿಯ (ಎನ್ಎಸ್ಒ) ಬೆಲೆ ಚಲನೆಯ ಮಾಹಿತಿಯು ಮಾರ್ಚ್ನಲ್ಲಿ ಆಹಾರ ಹಣದುಬ್ಬರವು 8.76 ಪರ್ಸೆಂಟ್ರಷ್ಟಿದೆ ಮತ್ತು ಚಿಲ್ಲರೆ ಹಣದುಬ್ಬರವನ್ನು ಆ ತಿಂಗಳಿಗೆ 5.84 ಪರ್ಸೆಂಟ್ ಎಂದು ದಾಖಲಿಸಲಾಗಿದೆ.
ಐಸಿಆರ್ಎ ಪ್ರಮುಖ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಅವರ ಪ್ರಕಾರ, ದ್ವಿದಳ ಧಾನ್ಯಗಳು, ಮಾಂಸ ಮತ್ತು ಮೀನುಗಳುತೈಲಗಳು ಮತ್ತು ಕೊಬ್ಬಿನ ಅಂಶವು ಮೇ ತಿಂಗಳಲ್ಲಿ ದ್ವಿ-ಅಂಕಿಯ(ಡಬಲ್ ಡಿಜಿಟ್) ಹಣದುಬ್ಬರ ಮಟ್ಟವು ಕಳವಳಕ್ಕೆ ಕಾರಣವಾಗಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications