ಕೂನಲ್ಲಿ ಹೂಡಿಕೆ ಮಾಡಿದ ಮಾಜಿ ಭಾರತೀಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್
ಬೆಂಗಳೂರು, ಮಾರ್ಚ್ 23: ಭಾರತದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರು ಭಾರತೀಯ ಮೈಕ್ರೋಬ್ಲಾಗ್ ಕೂನ ಮೂಲ ಸಂಸ್ಥೆಯಾದ ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಹೂಡಿಕೆ ಮಾಡಿದ್ದಾರೆ.
ಶ್ರೀನಾಥ್ ಅವರು ರಾಷ್ಟ್ರದ ಅತಿ ವೇಗದ ಬೌಲರ್ ಮತ್ತು ಏಕದಿನ ಪಂದ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ವಿಕೆಟ್ಗಳನ್ನು ಗಳಿಸಿದ ಇತಿಹಾಸ ಹೊಂದಿದ್ದಾರೆ. ಶ್ರೀನಾಥ್ 11 ವರ್ಷಗಳ ಕ್ರಿಕೆಟ್ ವೃತ್ತಿ ಬದುಕನ್ನು ಕಂಡು 2003 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು ಮತ್ತು ಪ್ರಸ್ತುತ ಐಸಿಸಿ ಮ್ಯಾಚ್ ರೆಫರಿಯಾಗಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಮತ್ತು ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರು ಮಾತನಾಡಿ "ಭಾರತದ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಾದ ಕೂಗೆ ಬೆಂಬಲ ನೀಡುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಕಳೆದ ವರ್ಷ ಕೂ ಕನ್ನಡ ಪ್ರಾರಂಭವಾದಾಗಿನಿಂದ ನಾನು ಈ ವೇದಿಕೆಯ ಭಾಗವಾಗಿದ್ದೇನೆ. ಕೂ ತಂಡದವರು ಯಾವ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿರುವರೋ ಅದನ್ನು ನಾನು ಅರಿತಿದ್ದೇನೆ ಮತ್ತು ಮತ್ತು ಅದರ ಪರಿಹಾರಕ್ಕಾಗಿ ಸಹಕರಿಸುತ್ತೇನೆ. ಭಾರತವು 1000 ಭಾಷೆಗಳು ಮತ್ತು ಉಪಭಾಷೆಗಳನ್ನು ಹೊಂದಿರುವ ವೈವಿಧ್ಯಮಯ ದೇಶವಾಗಿದೆ. ಈ ಎಲ್ಲಾ ವೈವಿಧ್ಯಮಯ ಧ್ವನಿಗಳಿಗೆ ಒಂದು ವೇದಿಕೆಯನ್ನು ನೀಡುವುದು ಅತಿಮುಖ್ಯವಾಗಿದ್ದು, ತನ್ಮೂಲಕ ಅವರ ಭಾವನೆಗಳು ಮತ್ತಷ್ಟು ಗಟ್ಟಿಗೊಳ್ಳುತ್ತವೆ. ಭಾರತೀಯ ಭಾಷೆಯ ಪ್ರೇಕ್ಷಕರ ಧ್ವನಿಯನ್ನು ಅಂತರ್ಜಾಲದಲ್ಲಿ ವ್ಯಕ್ತಪಡಿಸುವ ಕೂ ವೇದಿಕೆಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ತೀವ್ರ ಉತ್ಕಟ ಬೆಂಬಲಿಗನಾಗಿ, ಭಾರತವನ್ನು ಮುಂಚೂಣಿಯಲ್ಲಿಡುವಲ್ಲಿ ಸಹಾಯ ಮಾಡುವ ಯಾವುದೇ ಕಾರ್ಯಕ್ಕೂ ನನ್ನ ಪೂರ್ಣ ಸಹಮತವನ್ನು ಹೃದಯಪೂರ್ವಕವಾಗಿ ನೀಡುತ್ತೇನೆ ಎಂದು ಹೇಳಿದರು.

ಕೂ ಸಿಇಒ ಮತ್ತು ಸಹ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಮಾತನಾಡಿ, "ಜಾವಗಲ್ ಶ್ರೀನಾಥ್ ಅವರು ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಆರಂಭಿಕ ದಿನಗಳಿಂದಲೂ ಕೂಗೆ ಬೆಂಬಲವಾಗಿ ನಿಂತಿದ್ದಕ್ಕಾಗಿ ಮತ್ತು ಪ್ರಸ್ತುತ ಹೂಡಿಕೆದಾರರಾಗಿ ನಮ್ಮ ಪ್ರಯಾಣಕ್ಕೆ ಸರ್ಪಡೆಗೊಂಡಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನಾವು ಭಾರತೀಯ ಸಮೂಹ ಮಾಧ್ಯಮದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುತ್ತಿರುವುದನ್ನು ಅವರು ಗೌರವಿಸುತ್ತಾರೆ ಮತ್ತು ಕೂ ನಂತಹ ಉತ್ಪನ್ನಗಳ ಬಗ್ಗೆ ಉತ್ಸುಕರಾಗಿದ್ದಾರೆ. ಈ ಹಿಂದೆ, ಗ್ಲೋಬಲ್ ಫೀನಿಕ್ಸ್ ಸೊಲ್ಯೂಷನ್ಸ್ ಮೂಲಕ, ತಂತ್ರಜ್ಞಾನವನ್ನು ಕ್ರೀಡೆಯಲ್ಲಿ ತಂದ ಮೊದಲ ವ್ಯಕ್ತಿಗಳಲ್ಲಿ ಅವರು ಕೂಡ ಒಬ್ಬರು. ಅಲ್ಲದೆ ಅವರು ಸಮಸ್ಯೆಗಳ ಪರಿಹಾರಕ್ಕಾಗಿ ತಂತ್ರಜ್ಞಾನವನ್ನು ಬಳಸುವುದರಲ್ಲಿ ನಂಬಿಕೆಯುಳ್ಳವರಾಗಿದ್ದಾರೆ" ಎಂದು ಹೇಳಿದರು.
ಕೂ ಸಹ ಸಂಸ್ಥಾಪಕ ಮಯಾಂಕ್ ಬಿಡಾವತ್ಕಾ ಅವರು ಮಾತನಾಡಿ, "ಶ್ರೀನಾಥ್ ಬಗ್ಗೆ ಹೇಳುವುದಾದರೆ ಅವರು ಕ್ರಿಕೆಟ್ ಲೋಕದ ದಂತಕಥೆ. ಅವರು ಹಲವು ವೈಯಕ್ತಿಕ ಅಡೆ ತಡೆಗಳ ನಡುವೆಯೂ ಭಾರತಕ್ಕಾಗಿ ಆಡಿದ್ದಾರೆ. ಅವರದ್ದು ಎಲ್ಲರೂ ಗೌರವಿಸುವಂತಹ ಆರ್ಹ ವ್ಯಕ್ತಿತ್ವ. ಕೂ ಅವರ ಕ್ರೀಡಾ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಂತಿದೆ. ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಒಬ್ಬರು ಈಗ ತಂತ್ರಜ್ಞಾನದಲ್ಲೂ ಸ್ವಾವಲಂಬಿಗಳಾಗುತ್ತಿರುವ ಭಾರತೀಯರ ಅನ್ವೇಷಣೆಯನ್ನು ಬೆಂಬಲಿಸುತ್ತಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ" ಎಂದು ಹೇಳಿದರು.
ವೇದಿಕೆಯಲ್ಲಿ ಕನ್ನಡ ಭಾಷೆಯ ಆಯ್ಕೆಯೊಂದೇ ಲಭ್ಯವಿದ್ದಾಗ ಜಾವಗಲ್ ಶ್ರೀನಾಥ್ ಕೂಗೆ ಸೇರಿದರು. ಟ್ವಿಟ್ಟರಲ್ಲಿ 11,250 ಅನುಯಾಯಿಗಳಿಗೆ ಹೋಲಿಸಿದರೆ ಅವರು ಕೂನಲ್ಲಿ 100,000+ ಅನುಯಾಯಿಗಳನ್ನು ಹೊಂದಿದ್ದಾರೆ. ಕೂನಲ್ಲಿ ತನ್ನ ಅನುಯಾಯಿಗಳೊಂದಿಗೆ ಸಂಪರ್ಕದಲ್ಲಿರಲು ಅವರು ಆಡಿಯೋ ಕೂಗಳನ್ನು ಬಳಸುವುದು ಸಾಮಾನ್ಯವಾಗಿದೆ.
Recommended Video
ಕೂ ಎಂಬುದು ಭಾರತದ ಸ್ಥಳೀಯ ಭಾಷೆಗಳಲ್ಲಿ ಮೈಕ್ರೊ-ಬ್ಲಾಗಿಂಗ್ ವೇದಿಕೆಯಾಗಿದೆ. ಜನರು ಪಠ್ಯ, ಆಡಿಯೋ ಅಥವಾ ವಿಡಿಯೋ ಬಳಸಿ ತಮ್ಮ ಮಾತೃಭಾಷೆಯಲ್ಲಿ ತಮ್ಮ ಮನದಾಳವನ್ನು ತಾವು ವ್ಯಕ್ತಪಡಿಸಿಕೊಳ್ಳಬಹುದು. ಬಳಕೆದಾರರು ಇತರರನ್ನು ಹಿಂಬಾಲಿಸಬಹುದು ಮತ್ತು ಅವರ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಕೇಳಬಹುದು. ಕೂ ಮೊದಲು ಕನ್ನಡ ಭಾಷೆಯಲ್ಲಿ ಪ್ರಾರಂಭವಾಯಿತು ಹಾಗೂ ಇಂದು ಅನೇಕ ಭಾರತೀಯ ಭಾಷೆಗಳಲ್ಲಿದೆ. ಪ್ರಸ್ತುತ ಹಿಂದಿ, ಕನ್ನಡ, ತೆಲುಗು, ಬಂಗಾಳಿ, ಮುಂತಾದ ಅನೇಕ ಭಾಷೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications