ಜನವರಿ 1ರಿಂದ ಗಲ್ಫ್ ರಾಷ್ಟ್ರಗಳ ಪ್ರವಾಸ ಸಿಕ್ಕಾಪಟ್ಟೆ ದುಬಾರಿ
ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ನಿಮ್ಮ ಮುಂದಿನ ಪ್ರಯಾಣವನ್ನು ಪ್ಲಾನ್ ಮಾಡಿದ್ದರೆ, ಜನವರಿ ಒಂದರ ನಂತರ ಆಗಿದ್ದರೆ ಅದು ದುಬಾರಿ ಆಗಲಿದೆ. ಏಕೆಂದರೆ ಗಲ್ಫ್ ರಾಷ್ಟ್ರಗಳಲ್ಲಿ ಜನವರಿ 1, 2018ರಿಂದ ಹೋಟೆಲ್, ರೆಸ್ಟೋರೆಂಟ್, ಪ್ರವಾಸ- ಟ್ಯಾಕ್ಸಿ, ಆಭರಣ ಸೇರಿದಂತೆ ಹಲವು ಸರಕು ಹಾಗೂ ಸೇವೆಗಳ ಮೇಲೆ ಶೇ 5ರಷ್ಟು ವ್ಯಾಟ್ (ವ್ಯಾಲ್ಯೂ ಆಡೆಡ್ ಟ್ಯಾಕ್ಸ್) ಹಾಕಲಾಗುತ್ತದೆ.
ದುಬೈ ಪ್ರವಾಸೋದ್ಯಮ ಇಲಾಖೆ ಅಧಿಕೃತ ಅಂಕಿಯ ಪ್ರಕಾರ, ದುಬೈಗೆ ತೆರಳುವ ಪ್ರವಾಸಿಗರ ಪೈಕಿ ಭಾರತೀಯರೇ ಹೆಚ್ಚು. ಪ್ರತಿ ವರ್ಷ ಹತ್ತಿರ ಹತ್ತಿರ 1.8 ಕೋಟಿ ಭಾರತೀಯರು ಪ್ರತಿ ವರ್ಷ ಯುಎಇಗೆ ತೆರಳುತ್ತಾರೆ. ಇನ್ನು ದುಬೈ ಹಾಗೂ ಅಬು ಧಾಬಿ ನೆಚ್ಚಿನ ಪ್ರವಾಸಿ ತಾಣವಾಗಿದೆ.

ಆಭರಣಗಳ ಖರೀದಿ, ಪ್ರವಾಸಕ್ಕೆ ಭಾರತೀಯರಿಗೆ ಯುಎಇ ಅದರಲ್ಲೂ ದುಬೈ ಅಚ್ಚುಮೆಚ್ಚು. ಎಲ್ಲ ವಿಶ್ರಾಂತಿ ಚಟುವಟಿಕೆಗಳ ಮೇಲೆ ಶೇ 5ರಷ್ಟು ತೆರಿಗೆ ಬೀಳುತ್ತದೆ. ಇದರಿಂದ ಭಾರತೀಯರಿಂದ ಶೇಕಡಾ 6ರಿಂದ 8ರಷ್ಟು ಹೆಚ್ಚಿನ ಖರ್ಚು ಬೀಳುತ್ತದೆ. ಕಳೆದ ಕೆಲ ವರ್ಷಗಳಿಂದ ತೈಲ ದರದಲ್ಲಿ ಇಳಿಕೆ ಆಗುತ್ತಿರುವುದರಿಂದ ಆದಾಯ ಹೆಚ್ಚಳಕ್ಕೆ ಯತ್ನಿಸುತ್ತಿದೆ ಮತ್ತು ಅದರ ಭಾಗವಾಗಿ ವ್ಯಾಟ್ ಪರಿಚಯಿಸಲಾಗುತ್ತಿದೆ.
ಪ್ರವಾಸಿಗರನ್ನು ಹೊರತು ಪಡಿಸಿ, ವ್ಯಾಟ್ ಪರಿಚಯಿಸುತ್ತಿರುವ ಕಾರಣಕ್ಕೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಆಗುತ್ತದೆ. ಅಲ್ಲಿ ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆ ಆಗಿದೆ. ಜನವರಿ ಒಂದರಿಂದ ಮತ್ತೂ ಹೆಚ್ಚಾಗಲಿದೆ.
ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ವಿದೇಶಿ ನೌಕರರಿಗೆ ತೆರಿಗೆ ರಹಿತ ಜೀವನಶೈಲಿಯ ಆಮಿಷ ಒಡ್ಡಲಾಗಿತ್ತು. ಆದರೆ ಈಗ ತೆರಿಗೆ ಹೆಚ್ಚಿಸುವ ಪ್ರಯತ್ನದಿಂದಾಗಿ ವರ್ಚಸ್ಸಿಗೆ ಹಾನಿಯಾಗಲಿದೆ. ಮುಂಬರುವ ವರ್ಷಗಳಲ್ಲಿ ಗಲ್ಫ್ ನ ಇತರ ರಾಷ್ಟ್ರಗಳಲ್ಲಿ ವ್ಯಾಟ್ ಅನ್ನು ವಿಧಿಸುವ ಆಲೋಚನೆ ಇದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications