ಸಮಾಜ ಸೇವೆಗೆ 60 ಸಾವಿರ ಕೋಟಿ ನೀಡಲು ಅದಾನಿ ನಿರ್ಧಾರ
ಮುಂಬೈ, ಜೂನ್ 23: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಮತ್ತು ಅವರ ಕುಟುಂಬ ಗುರುವಾರ ಅದಾನಿ 60 ನೇ ಹುಟ್ಟುಹಬ್ಬದ ಅಂಗವಾಗಿ ವಿವಿಧ ಸಾಮಾಜಿಕ ಕಾರ್ಯಗಳಿಗೆ 60,000 ಕೋಟಿ ರೂಪಾಯಿ ದೇಣಿಗೆ ನೀಡಲು ವಾಗ್ದಾನ ಮಾಡಿದರು. ಈ ಕೆಲಸವನ್ನು ಅದಾನಿ ಫೌಂಡೇಶನ್ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ದೇಣಿಗೆ ಕುರಿತು ಮಾತನಾಡಿರುವ ಗೌತಮ್ ಅದಾನಿ, "ನನ್ನ ಸ್ಪೂರ್ತಿದಾಯಕ ತಂದೆಯ 100 ನೇ ಜನ್ಮ ವಾರ್ಷಿಕೋತ್ಸವದ ಜೊತೆಗೆ, ಈ ವರ್ಷ ನನ್ನ 60 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದೇನೆ. ನಮ್ಮ ಕುಟುಂಬವು ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ ದತ್ತಿ ಚಟುವಟಿಕೆಗಳಿಗೆ 60,000 ಕೋಟಿ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ, ವಿಶೇಷವಾಗಿ ನಮ್ಮ ರಾಷ್ಟ್ರದ ಗ್ರಾಮೀಣ ಪ್ರದೇಶಗಳಿಗೆ ಇದನ್ನು ವಿನಿಯೋಗಿಸಲಾಗುವುದು". ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತದ ಜನಸಂಖ್ಯಾ ಪ್ರಯೋಜನದ ಸಾಮರ್ಥ್ಯ ಬಳಸಿಕೊಳ್ಳಲು, ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಅಗತ್ಯತೆ ಹೆಚ್ಚುತ್ತಿದೆ. ಈ ಪ್ರತಿಯೊಂದು ಪ್ರದೇಶಗಳಲ್ಲಿನ ಕೊರತೆಗಳು ಆತ್ಮನಿರ್ಭರ ಭಾರತಕ್ಕೆ ತೊಡಕಾಗಿವೆ ಎಂದು ಅವರು ಹೇಳಿದ್ದಾರೆ.

ಒಳ್ಳೆಯತನದೊಂದಿಗೆ ಬೆಳವಣಿಗೆ ಉದ್ದೇಶ
"ಮೂಲಭೂತ ಮಟ್ಟದಲ್ಲಿ, ಆರೋಗ್ಯ, ಶಿಕ್ಷಣ, ಕೌಶಲ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮಗ್ರವಾಗಿ ನೋಡಬೇಕು ಮತ್ತು ಸಮಾನ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಭಾರತವನ್ನು ನಿರ್ಮಿಸಲು ಅವು ಒಟ್ಟಾಗಿ ಅರ್ಹ ವ್ಯಕ್ತಿಗಳನ್ನು ರೂಪಿಸುತ್ತವೆ. ದೊಡ್ಡ ಪ್ರಾಜೆಕ್ಟ್ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿನ ನಮ್ಮ ಅನುಭವ ಮತ್ತು ಅದಾನಿ ಫೌಂಡೇಶನ್ ಮಾಡಿದ ಕೆಲಸದ ಕಲಿಕೆಗಳು ಈ ಕಾರ್ಯಕ್ರಮಗಳನ್ನು ಅನನ್ಯವಾಗಿ ವೇಗಗೊಳಿಸಲು ನಮಗೆ ಸಹಾಯ ಮಾಡುತ್ತದೆ" ಎಂದರು.
"ಅದಾನಿ ಕುಟುಂಬದ ಈ ಕೊಡುಗೆಯು ನಮ್ಮ 'ಒಳ್ಳೆಯತನದೊಂದಿಗೆ ಬೆಳವಣಿಗೆ' (Growth with Goodness) ತತ್ವವನ್ನು ಪೂರೈಸುವ ಕಡೆಗೆ ಕೆಲಸ ಮಾಡಲು ಅದಾನಿ ಫೌಂಡೇಶನ್ ಉತ್ಸಾಹ ಹೊಂದಿರುವ ಪ್ರತಿಭೆಗಳನ್ನು ಸೆಳೆಯುವ ಉದ್ದೇಶವನ್ನು ಹೊಂದಿದೆ" ಎಂದು ಅದಾನಿ ಹೇಳಿದರು.

ಶುಕ್ರವಾರ 60 ವರ್ಷಕ್ಕೆ ಕಾಲಿಡುವ ಮೊದಲ ತಲೆಮಾರಿನ ಉದ್ಯಮಿ ಭಾರತೀಯ ಉದ್ಯಮಿ, ಮಾರ್ಕ್ ಜುಕರ್ಬರ್ಗ್ ಮತ್ತು ವಾರೆನ್ ಬಫೆಟ್ ಅವರಂತಹ ಜಾಗತಿಕ ಬಿಲಿಯನೇರ್ಗಳ ಶ್ರೇಣಿಗೆ ಸೇರುತ್ತಾರೆ.
ತಮ್ಮ ಸಂಪತ್ತಿನ ಹೆಚ್ಚಿನ ಭಾಗವನ್ನು ಸಮಾಜಸೇವೆಗೆ ಬಳಸಲು ಬದ್ಧರಾಗಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ನ ಪ್ರಕಾರ ಸುಮಾರು 92 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ, ಈ ವರ್ಷ ತನ್ನ 15 ಬಿಲಿಯನ್ ಡಾಲರ್ ಸಂಪತ್ತು ಹೆಚ್ಚಿಸಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications