ಕುಸಿದ ಆರ್ಥಿಕ ಪ್ರಗತಿ; ಕಳೆದ ಮೂರು ವರ್ಷಗಳಲ್ಲಿ ಅತ್ಯಂತ ಕಳಪೆ
ಇದೇ ಆರ್ಥಿಕ ವರ್ಷದಲ್ಲಿ ಏಪ್ರಿಲ್-ಜೂನ್ ವರೆಗಿನ ಅವಧಿಯಲ್ಲಿ ಆದ ಪ್ರಗತಿ ಇಳಿಕೆ. ಅಪನಗದೀಕರಣ, ಜಿಎಸ್ ಟಿ ಪರಿಣಾಮಗಳಿಂದಾಗಿ ಆರ್ಥಿಕ ಬೆಳವಣಿಗೆಗೆ ಹೊಡೆತ.
ನವದೆಹಲಿ, ಸೆಪ್ಟಂಬರ್ 1: ಪ್ರಸಕ್ತ ಹಣಕಾಸು ವರ್ಷದಲ್ಲಿ ಏಪ್ರಿಲ್ ನಿಂದ ಜೂನ್ ವರೆಗಿನ ಆರ್ಥಿಕ ಬೆಳವಣಿಗೆಯು ಶೇ. 5.7ರಷ್ಟು ಕುಗ್ಗಿದ್ದು, ಇದು ಕಳೆದ ಮೂರು ವರ್ಷಗಳಲ್ಲೇ ಅತಿ ಕಡಿಮೆ ಆರ್ಥಿಕ ಬೆಳವಣಿಗೆ ಎಂದು ವಿಶ್ಲೇಷಿಸಲಾಗಿದೆ.
ಈ ಸ್ಥಿತಿಗೆ ಎರಡು ಕಾರಣಗಳನ್ನು ಆರ್ಥಿಕ ತಜ್ಞರು ಕಂಡುಕೊಂಡಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ನಡೆದ ಅಪನಗದೀಕರಣ ಒಂದು ಕಾರಣವಾದರೆ, ಜಿಎಸ್ ಟಿ ಪರಿಣಾಮವಾಗಿ ಆ ಮೂರು ತಿಂಗಳ ಅವಧಿಯಲ್ಲಿ ಹಳೆಯ ಸರಕುಗಳನ್ನು ಬೇಗನೇ ವಿಲೇವಾರಿ ಮಾಡುವಂಥ ಒತ್ತಡಕ್ಕೆ ವ್ಯಾಪಾರಿಗಳು ಸಿಲುಕಿದ್ದು ಮತ್ತೊಂದು ಕಾರಣ ಎನ್ನಲಾಗಿದೆ.

ಏಷ್ಯಾದಲ್ಲಿ ಭಾರತದ ಆರ್ಥಿಕತೆಗೆ ಪ್ರಬಲ ಪೈಪೋಟಿಯೊಡ್ಡಿರುವ ಚೀನಾ ದೇಶದ ಆರ್ಥಿಕ ಪ್ರಗತಿಯು ಇದೇ ವರ್ಷ ಏಪ್ರಿಲ್ ನಿಂದ ಜೂನ್ ವರೆಗೆ ಭಾರತಕ್ಕಿಂತ ಉತ್ತಮವಾಗಿದೆ. ಅದರ ಜಿಡಿಪಿ ಬೆಳವಣಿಗೆ 6.9ರಷ್ಟು ಹೆಚ್ಚಿದೆ. ಆದರೆ, ಅದರ ಮುಂದೆ ಭಾರತ ನೀರಸ ಸಾಧನೆ ಮಾಡಿದೆ ಎಂದು ಹೇಳಲಾಗಿದೆ.
ಏಪ್ರಿಲ್-ಜೂನ್ ವರೆಗಿನ ಅವಧಿಯಲ್ಲಿ ಉತ್ಪಾದನಾ ವಲಯವು ಶೇ. 1.2ರಷ್ಟು ಹಿನ್ನಡೆ ಅನುಭವಿಸಿದ್ದರೆ, ಗಣಿಗಾರಿಕೆಯಂಥ ಬೃಹತ್ ಉದ್ದಿಮೆಗಳು 0.7ರಷ್ಟು ಹಿನ್ನಡೆ ಅನುಭವಿಸಿವೆ.
ಆದರೆ, ಇದರ ನಡುವೆಯೂ ಕೆಲ ಕ್ಷೇತ್ರಗಳ ಆರ್ಥಿಕ ಬೆಳವಣಿಗೆ ಚೇತೋಹಾರಿಯಾಗಿದೆ. ವಿದ್ಯುತ್ ಕ್ಷೇತ್ರವು ಶೇ. 7ರಷ್ಟು, ವ್ಯಾಪಾರ, ಹೋಟೆಲ್, ಸಂಪರ್ಕ ಕ್ಷೇತ್ರಗಳು ಶೇ 11.1 ರಷ್ಟು, ನಿರ್ಮಾಣ ಕ್ಷೇತ್ರ ಶೇ. 2ರಷ್ಟು ಪ್ರಗತಿ ಸಾಧಿಸಿವೆ ಎಂದು ಹೇಳಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications