Gold Rate: ₹2200 ಕುಸಿದ ಚಿನ್ನದ ಬೆಲೆ, ಬೆಳ್ಳಿ ಬೆಲೆ ಕೂಡ ಕುಸಿತ
ಜೂನ್ 4 ರಂದು ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲವಾದ ಕಾರಣ, ಚಿನ್ನ ಬೆಳ್ಳಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿತ್ತು. ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿತ್ತು. ಇಂದು (ಬುಧವಾರ) ಷೇರು ಮಾರುಕಟ್ಟೆಯಲ್ಲಿ ಸುಧಾರಣೆ ಕಂಡಿದ್ದು ಪರಿಣಾಮ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಮುಖವಾಗಿದೆ.
ಜೂನ್ 4 ₹6,68,000 ಇದ್ದ100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2000 ರೂಪಾಯಿ ಕುಸಿತ ಕಂಡಿದ್ದು ₹ 6,66,000 ಆಗಿದೆ. ಮಂಗಳವಾರ ₹ 7,28,700 ಇದ್ದ 100 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ₹ 7,26,500 ಗೆ ಇಳಿಕೆಯಾಗಿದೆ. ಅಂದರೆ ₹2200 ಕುಸಿತ ಕಂಡಿದೆ.

18 ಕ್ಯಾರೆಟ್ ಚಿನ್ನದ ಬೆಲೆ 1600 ರೂಪಾಯಿ ಕುಸಿದಿದೆ. ಜೂನ್ 4ರಂದು ₹ 5,44,900 ಇದ್ದ ಬೆಲೆ ಇಂದು ₹ 5,46,500 ಗೆ ಕುಸಿದಿದೆ. ಷೇರು ಮಾರುಕಟ್ಟೆ ಮತ್ತಷ್ಟು ಏರಿಕೆಯಾದರೆ ಚಿನ್ನದ ಬೆಲೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಕೂಡ ಇದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.
ಬೆಳ್ಳಿ ಬೆಲೆ ಕೂಡ ಇಳಿಕೆ
ಚಿನ್ನದ ಬೆಲೆ ಕುಸಿತದ ಜೊತೆಗೆ ಬೆಳ್ಳಿ ಬೆಲೆಯಲ್ಲಿ ಕೂಡ ಕುಸಿತ ಉಂಟಾಗಿದೆ. ಜೂನ್ 4 ರಂದು ಒಂದು ಕೆಜಿ ಬೆಳ್ಳಿ ದರ ₹ 94,000 ಇದ್ದರೆ 2300 ರೂಪಾಯಿ ಕುಸಿದಿದ್ದು ಇಂದಿನ ದರ 91,700 ಆಗಿದೆ. ಬೆಳ್ಳಿ ಬೆಲೆ ಸಂಜೆ ವೇಳೆಗೆ ಮತ್ತಷ್ಟು ಕುಸಿಯುವ ಸಾಧ್ಯತೆ ಕೂಡ ಇದೆ.
ಷೇರು ಮಾರುಕಟ್ಟೆ ಚೇತರಿಕೆ
ಲೋಕಸಭಾ ಚುನಾವಣೆ ಫಲಿತಾಂಶ ಅತಂತ್ರವಾಗುತ್ತದೆ ಎನ್ನುವ ಆತಂಕದಲ್ಲಿ ಮಂಗಳವಾರ ಷೇರುಮಾರುಕಟ್ಟೆ ತೀವ್ರ ಕುಸಿತ ಕಂಡಿತ್ತು. ಆದರೆ ಸಂಜೆ ವೇಳೆಗೆ ಎನ್ಡಿಎ ಅಧಿಕಾರ ಹಿಡಿಯುವುದು ಖಚಿತವಾದ ನಂತರ ಬುಧವಾರ ಷೇರುಮಾರುಕಟ್ಟೆ ಸುಧಾರಿಸಿಕೊಂಡಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಸೂಚ್ಯಂಕ 1,463.02 ಅಂಕಗಳಷ್ಟು ಏರಿಕೆ ದಾಖಲಿಸಿದೆ.
-
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications