Gold and Silver Price: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ?
ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ದಿನದಂದು (ಜೂನ್ 1) ಭಾರಿ ಏರಿಕೆ ದಾಖಲಿಸಿದ್ದ ಷೇರು ಮಾರುಕಟ್ಟೆ, ಫಲಿತಾಂಶದ ದಿನ ಏಕಾಏಕಿ ಕುಸಿದು, ಹೂಡಿಕೆದಾರರಿಗೆ ಶಾಕ್ ಕೊಟ್ಟಿದೆ. ಷೇರು ಮಾರುಕಟ್ಟೆ ಕುಸಿತದ ಪರಿಣಾಮ ಮಂಗಳವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ.
ಮಂಗಳವಾರ ಬೆಳಗ್ಗೆ ₹6,61,000 ಇದ್ದ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಸಂಜೆ ವೇಳೆಗೆ ₹ 6,68,000 ಕ್ಕೆ ಏರಿಕೆ ಕಂಡಿತು. ಅಂದರೆ ಪ್ರತಿ ಗ್ರಾಂ ಚಿನ್ನದ ಬೆಲೆ 70 ರೂ ಏರಿಕೆ ದಾಖಲಿಸಿತ್ತು. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 76 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ 7600 ರೂಪಾಯಿ ಹೆಚ್ಚಾಗಿತ್ತು.

ಮಂಗಳವಾರ 76,285.78 ಇದ್ದ ಷೇರುಮಾರುಕಟ್ಟೆ ಸೂಚ್ಯಂಕ 4,389.73 ಅಂಕಗಳಷ್ಟು ಕುಸಿತ ಕಂಡು 72,079.05 ಸೂಚ್ಯಂಕದಲ್ಲಿ ದಿನದ ವಹಿವಾಟನ್ನು ಮುಗಿಸಿತು. ಷೇರು ಮಾರುಕಟ್ಟೆ ತೀವ್ರ ಕುಸಿತ ಕಾಣುತ್ತಿದ್ದಂತೆ ಹೂಡಿಕೆದಾರರು ಬಂಡವಾಳ ವಾಪಸ್ ತೆಗೆಯಲು ಆರಂಭಿಸಿದರು. ಚಿನ್ನದ ಮೇಲೆ ಹೂಡಿಕೆದಾರರು ಆಸಕ್ತಿ ತೋರಿಸಿದ್ದು ಬೆಲೆ ಏರಿಕೆಗೆ ಕಾರಣವಾಯಿತು.
ಬೆಳ್ಳಿ ಬೆಲೆ ಕೂಡ ಹೆಚ್ಚಳ
ಬೆಳ್ಳಿ ಬೆಲೆ ಕೂಡ 1200 ರೂಪಾಯಿ ಏರಿಕೆ ಕಂಡಿದ್ದು, ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ. ಮಂಗಳವಾರ ಬೆಳಗ್ಗೆ ₹ 92,800 ಇದ್ದ ಒಂದು ಕೆ.ಜಿ. ಬೆಳ್ಳಿ ಬೆಲೆ, 94 ಸಾವಿರ ರೂಪಾಯಿಗೆ ಹೆಚ್ಚಳವಾಯಿತು.
ಮತ್ತಷ್ಟು ಹೆಚ್ಚುವ ಸಾಧ್ಯತೆ
ಎನ್ಡಿಎ ಸರ್ಕಾರ ರಚಿಸಲು ಬಹುಮತ ಪಡೆದಿದ್ದರು ಸರ್ಕಾರ ರಚನೆಗೆ ಹಗ್ಗಜಗ್ಗಾಟ ನಡೆಯಲಿದೆ. ಬುಧವಾರ ಕೂಡ ಷೇರುಪೇಟೆ ಕುಸಿಯುವ ಆತಂಕ ಇದ್ದು, ಒಂದು ವೇಳೆ ಷೇರು ಪೇಟೆ ಕುಸಿದರೆ ಚಿನ್ನದ ಮೇಲೆ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರಿದರೆ, ಬೆಲೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications