ಚಿನ್ನದ ದರ ಮತ್ತೆ ಕುಸಿತ, ಗ್ರಾಹಕರಿಗೆ ಸಂತಸ
ನವದೆಹಲಿ, ಜೂ.30: ಹಳದಿ ಲೋಹ ಚಿನ್ನದ ಬೆಲೆ ಮತ್ತೆ ಕುಸಿತ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 55 ರು ಬೆಲೆ ಕಳೆದುಕೊಂಡು ಪ್ರತಿ 10 ಗ್ರಾಂಗೆ 28,745 ರು ಗೆ ಕುಸಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ, ಷೇರುದಾರರಿಂದ ಚಿನ್ನ ಮಾರಾಟ ಸ್ಥಗಿತ ಎಲ್ಲವೂ ಬೆಲೆ ಇಳಿಕೆಗೆ ಕಾರಣವಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವವರು ಮಾತ್ರ ಕಂಗಾಲಾಗಿದ್ದರೆ, ಗ್ರಾಹಕರು ಸಂತಸಗೊಂಡಿದ್ದಾರೆ.
ಇತ್ತೀಚೆಗೆ ಆರ್ಬಿಐನ ನೂತನ ಚಿನ್ನ ಆಮದು ನೀತಿ ಪ್ರಕಟಿಸಿದ ಬೆನ್ನಲ್ಲೆ ಚಿನ್ನದ ದರ ಕಳೆದ 9 ತಿಂಗಳುಗಳಲ್ಲಿ ಕಾಣದ ಪ್ರಮಾಣಕ್ಕೆ ಕುಸಿತ ಕಂಡಿತ್ತು. ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಶೇ.3ರಷ್ಟು ಇಳಿಕೆ ಇಳಿಕೆ ಕಂಡು ಬಂದಿದ್ದು ಒಟ್ಟಾರೆ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 800ರು. ಇಳಿಕೆಯಾಗಿತ್ತು. [ಮೇ ತಿಂಗಳ ಇಳಿಕೆ ವರದಿ]

ನವದೆಹಲಿಯಲ್ಲಿ ಮೇ.22ರಂದು 10 ಗ್ರಾಂ ಚಿನ್ನದ ಬೆಲೆ 28,550 ರು ನಷ್ಟಿದ್ದರೆ ಬೆಳ್ಳಿ ದರ 50 ರು ಇಳಿಕೆ ಕಂಡು ಪ್ರತಿ ಕೆ.ಜಿಗೆ 41,650 ರು ನಷ್ಟಿತ್ತು. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 27,140 ರು ನಷ್ಟಿತ್ತು. 24 ಕ್ಯಾರೆಟ್ ಚಿನ್ನದ ಬೆಲೆ 29,060 ರು ನಷ್ಟಿತ್ತು. ಬೆಂಗಳೂರಿನಲ್ಲಿ ಈ ಸಮಯಕ್ಕೆ ಚಿನ್ನದ ದರ 22 Karat ಪ್ರತಿ 10 ಗ್ರಾಂಗೆ 26,720 ಹಾಗೂ ಅಪರಂಜಿ ಪ್ರತಿ 10 ಗ್ರಾಂಗೆ 28,530 ರು ನಷ್ಟಿದೆ.
ಈಗ ದೆಹಲಿಯಲ್ಲಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ 28,475 ರು ಹಾಗೂ 1 ಕೆಜಿ ಬೆಳ್ಳಿ ಬೆಲೆ 44,800 ರು ಗೆ ಕುಸಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಲಂಡನ್ನಿನಲ್ಲಿ ಶೇ 0.1ರಷ್ಟು ಪ್ರತಿ ಔನ್ಸಿಗೆ 1,314.99 ಯುಎಸ್ ಡಾಲರ್ ಹಾಗೂ ಬೆಳ್ಳಿ ಬೆಲೆ 0.3 % ಪ್ರತಿ ಔನ್ಸಿಗೆ 20.91 ಯುಎಸ್ ಡಾಲರ್ ನಷ್ಟು ಇಳಿಕೆ ಕಂಡು ಬಂದಿದೆ. [ಓದಿ: ದೀಪಾವಳಿ ವೇಳೆಗೆ ಚಿನ್ನದ ಬೆಲೆ ಏಷ್ಟಿರಬಹುದು?]
ಎಲ್ಲರ ಚಿತ್ತ ಬಜೆಟ್ ನತ್ತ: ಜುಲೈ 10 ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಲಿರುವ ಬಜೆಟ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಮೂಲಗಳ ಪ್ರಕಾರ ಚಿನ್ನದ ಆಮದಿನ ಮೇಲಿನ ನಿರ್ಬಂಧಗೊಳಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಸ್ಥಳೀಯ ವರ್ತಕರ ಬೇಡಿಕೆ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ 2ರಷ್ಟು ಕಡಿಮೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications