Gold Price: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಸಾಧ್ಯತೆ! ಕಾರಣವೇನು?
ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆ ಎಂದಾಗ ಚಿನ್ನದಷ್ಟು ಭದ್ರತೆ ಬೇರೆ ಯಾವ ಹೂಡಿಕೆ ನೀಡುವುದಿಲ್ಲ. ಅದಕ್ಕೆ ಎಲ್ಲಾ ದೇಶಗಳು ಮೀಸಲು ಚಿನ್ನದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಿವೆ. ಚಿನ್ನ ಎಂದರೆ ಆಪತ್ಕಾಲದ ನೆಂಟ ಎನ್ನುವ ಮಾತಿದೆ. ಭಾರತೀಯರಿಗೆ ಚಿನ್ನದ ಜೊತೆ ಅವಿನಾಭಾವ ನಂಟಿದೆ. ಯಾವುದೇ ಶುಭಕಾರ್ಯ ಎಂದರೆ ಅಲ್ಲಿ ಚಿನ್ನದ ಖರೀದಿ ಇದ್ದೇ ಇರುತ್ತದೆ.
ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಏರಿಳಿಕೆ ಕಾಣುತ್ತಿದೆ. 100 ಗ್ರಾಂ ಚಿನ್ನದ ಬೆಲೆ ಒಂದೇ ದಿನ 20 ಸಾವಿರ ಕುಸಿತ ಕಂಡ ನಂತರ, ಬಳಿಕ ಸೋಮವಾರ 1500 ರೂಪಾಯಿಗಳ ಅಲ್ಪ ಏರಿಕೆ ಕಂಡಿದೆ.

ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕುಸಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಜಾಗತಿಕವಾಗಿ ಕೆಲವು ಬೆಳವಣಿಗೆಗಳನ್ನು ಗಮನಿಸಿದಾಗ ಚಿನ್ನದ ಬೆಲೆ ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಚಿನ್ನ ಖರೀದಿ ನಿಲ್ಲಿಸಿದ ಚೀನಾ
ಚಿನ್ನದ ಬೆಲೆ ಗಗನಕ್ಕೇರುತ್ತಿದ್ದಂತೆ ಕಳೆದ ಶುಕ್ರವಾರವೇ ಚೀನಾದ ಸೆಂಟ್ರಲ್ ಬ್ಯಾಂಕ್ ಚಿನ್ನದ ಖರೀದಿಯನ್ನು ನಿಲ್ಲಿಸಿತು. ಪೀಪಲ್ಸ್ ಬ್ಯಾಂಕ್ ಆಫ್ ಚೀನಾ ಕೂಡ ಚಿನ್ನ ಖರೀದಿಗೆ ಬ್ರೇಕ್ ಹಾಕಿದ್ದು ಚಿನ್ನದ ಬೆಲೆ ಕುಸಿತಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಯುಎಸ್ ಡಾಲರ್ ದರ ಏರಿಕೆ ಕೂಡ ಚಿನ್ನದ ದರದ ಮೇಲೆ ಪರಿಣಾಮ ಬೀರುವ ಮತ್ತೊಂದು ಅಂಶವಾಗಿದೆ.
ಬುಧವಾರ ಮತ್ತಷ್ಟು ಕುಸಿತ?
ಮಂಗಳವಾರ ಆಭರಣ (22 ಕ್ಯಾರೆಟ್) ಚಿನ್ನದ ಬೆಲೆ ಗ್ರಾಂಗೆ 15 ರೂಪಾಯಿ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 17 ರೂಪಾಯಿ ಏರಿಕೆಯಾಗಿದೆ. ಬುಧವಾರ ಚಿನ್ನದ ಬೆಲೆ ಮತ್ತೆ ಕುಸಿತದ ಹಾದಿಗೆ ಬರುತ್ತಾ ಎನ್ನುವ ನಿರೀಕ್ಷೆ ಆಭರಣ ಪ್ರಿಯರದ್ದಾಗಿದೆ.
ಮಂಗಳವಾರ ಚಿನ್ನದ ಬೆಲೆ ಕೆಜಿಗೆ 150 ರೂಪಾಯಿಗಳ ಅಲ್ಪ ಕುಸಿತ ದಾಖಲಿಸಿದೆ. ಸದ್ಯ ಒಂದು ಕೆಜಿ ಚಿನ್ನದ ಬೆಲೆ ₹ 90,250 ಆಗಿದೆ. ಬುಧವಾರ ಚಿನ್ನದ ಬೆಲೆ 90 ಸಾವಿರದ ಒಳಗೆ ಬರುವ ನಿರೀಕ್ಷೆ ಇದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications