ಚಿನ್ನದ ಬೆಲೆ ಇಳಿಮುಖ, ಆಭರಣ, ನಾಣ್ಯ ಖರೀದಿಗೆ ಸುಸಮಯ
ಬೆಂಗಳೂರು, ಡಿಸೆಂಬರ್ 13: ಚಿನಿವಾರ ಪೇಟೆ ಕಳೆದ ಏಳುದಿನಗಳಿಂದ ಯಾಕೋ ಸಕತ್ ಡಲ್ ಹೊಡೆಯುತ್ತಿದೆ. ಸತತವಾಗಿ ಚಿನ್ನದ ದರ ಇಳಿಮುಖ ಕಂಡಿದ್ದು, ಕಳೆದ ವಾರದಲ್ಲಿ 1000 ರುಗೂ ಅಧಿಕ ಬೆಲೆ ಕುಸಿದಿದೆ. ಚಿನ್ನಾಭರಣ ಖರೀದಿಗೆ ಇದು ಸುಸಮಯ.
ದೆಹಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರದಂದು ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 180 ರು. ಕಡಿಮೆಯಾಗಿತ್ತು. ಅಪನಗದೀಕರಣ ಜಾರಿ ನಂತರ ನವೆಂಬರ್ 28,2016ರಲ್ಲಿ 16 ದಿನಗಳ ಕಾಲ ವ್ಯವಹಾರ ಸ್ಥಗಿತಗೊಂಡು ಬೆಲೆ ಸುಮಾರು 1,750 ರು ನಷ್ಟು ಕುಸಿತವಾಗಿತ್ತು. ಇದಾದ ಬಳಿಕ ಈಗ ಚಿನ್ನದ ಬೆಲೆ ಸತತ ಇಳಿಮುಖವಾಗಿದೆ.

ಶೇ. 99.9 ಅಪರಂಜಿ ಚಿನ್ನ ಪ್ರತಿ 10 ಗ್ರಾಂಗೆ 29,400 ರು. ಮತ್ತು ಶೇ. 99.5 ಶುದ್ಧತೆಯ ಚಿನ್ನ ಪ್ರತಿ 10 ಗ್ರಾಂಗೆ 29,250ರುಗೆ ಇಳಿದಿದೆ.
ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಕಡಿಮೆಯಾಗಿದೆ. ಬೆಳ್ಳಿ ಬೆಲೆ ಕೆ.ಜಿ.ಗೆ. 25 ರೂ. ಕಡಿಮೆಯಾಗಿದೆ. ಬೆಳ್ಳಿ ನಾಣ್ಯಗಳ ಬೆಲೆಯಲ್ಲಿ 1 ವಾರದಲ್ಲಿ 4000 ರೂ. ಕಡಿಮೆಯಾಗಿದೆ.
ಜಾಗತಿಕ ಮಾರುಕಟ್ಟೆ ಪರಿಣಾಮ ಮತ್ತು ದೇಶಿ ಮಾರುಕಟ್ಟೆಯಲ್ಲಿನ ಬೇಡಿಕೆ ಹಬ್ಬ ಹರಿದಿನ, ಮದುವೆ ಮುಂತಾದ ಶುಭ ಸಮಾರಂಭ, ಸರ್ಕಾರದ ಆರ್ಥಿಕ ನೀತಿಗೆ ಅನುಗುಣವಾಗಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗುತ್ತದೆ.
ಈಗ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವ ಕಾರಣ ಚಿನ್ನ ಮತ್ತು ಬೆಳ್ಳಿ ನಾಣ್ಯದ ಬೆಲೆಯೂ ಇಳಿಕೆಯಾಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 27, 240 ರೂ., 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 29,120 ರೂ. ಆಗಿದೆ.
ಬೆಂಗಳೂರಿನಲ್ಲಿ ಡಿಸೆಂಬರ್ 13ರಂದು 22 ಕ್ಯಾರೆಟ್ ಚಿನ್ನ ಪ್ರತಿ 10ಗ್ರಾಂ ಗೆ 27,200 ರು ಹಾಗೂ 24 ಕ್ಯಾರೆಟ್ ಚಿನ್ನ ಪ್ರತಿ 10 ಗ್ರಾಂಗೆ 29,080ರು ನಷ್ಟಿದೆ.
-
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications