Gold Price: ಚಿನ್ನ ಬೆಲೆ 5,500 ರೂಪಾಯಿ ಏರಿಕೆ, ಆಭರಣ ಪ್ರಿಯರಿಗೆ ಆಘಾತ...
ಚಿನ್ನದ ಬೆಲೆ ಕುಸಿದು ಬೀಳುತ್ತದೆ ಅಂತಾ ಕಾಯುತ್ತಿದ್ದರೆ ಮತ್ತೊಂದು ಕಡೆ ಚಿನ್ನ ಕೈಗೆ ಸಿಗದ ರೀತಿ ಏರಿಕೆ ಕಾಣುತ್ತಲೇ ಇದೆ. ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದ ಹಿನ್ನೆಲೆ ಆಭರಣ ಪ್ರಿಯರಿಗೆ ಆಘಾತವೇ ಎದುರಾಗಿತ್ತು. ಆದರೆ ಸತತ 2 ದಿನಗಳ ಕಾಲ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಕೂಡ ಕುಸಿತ ಕಾಣುವ ನಿರೀಕ್ಷೆ ಇತ್ತು. ಆದರೆ ಇಂದು ದಿಢೀರ್ ಚಿನ್ನದ ಬೆಲೆ 5,500 ರೂಪಾಯಿ ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ಆಘಾತ...
ಚಿನ್ನ ಅಂದ್ರೆ ಆಭರಣ ಪ್ರಿಯ ಮಹಿಳೆಯರಿಗೆ ಮಾತ್ರವಲ್ಲದೆ ಹೂಡಿಕೆ ಮಾಡುವ ಹುಡುಗರು & ಹುಡುಗಿಯರಿಗೆ ಕೂಡ ಸಿಕ್ಕಾಪಟ್ಟೆ ಇಷ್ಟ. ಯಾಕಂದ್ರೆ ಚಿನ್ನ ಖರೀದಿ ಮಾಡಿ ಅಥವಾ ಆ ಚಿನ್ನದ ಮೇಲೆ ಹೂಡಿಕೆ ಮಾಡಿರುವ ಯಾರಿಗೇ ಆಗಿದ್ದರೂ ನಷ್ಟ ಆಗಿಲ್ಲ ಎನ್ನಬಹುದು. ಈ ಮೂಲಕ ಚಿನ್ನದ ಮೇಲೆ ಹೂಡಿಕೆ ಮಾಡಲು ಎಲ್ಲರೂ ಇಷ್ಟಪಡುತ್ತಾರೆ. ಹೀಗಿದ್ದಾಗಲೇ ಚಿನ್ನ ಖರೀದಿ ಮಾಡೋಣ, ಈ ಮೂಲಕ 2025 ರಲ್ಲಿ ಯುಗಾದಿಗೆ ಮೊದಲು ಭರ್ಜರಿಯಾಗಿ ಹೊಸ ವರ್ಷಕ್ಕೆ ಎಂಟ್ರಿ ಕೊಡೋಣ ಅಂತಾ ಕಾಯುತ್ತಿದ್ದ ಆಭರಣ ಪ್ರಿಯರಿಗೆ ಆಘಾತ ಎದುರಾಗಿದೆ!

ಚಿನ್ನ ಬೆಲೆ 5,500 ರೂಪಾಯಿ ಏರಿಕೆ!
ಚಿನ್ನ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ ಆಗುವತ್ತ ಮುಂದೆ ನುಗ್ಗುತ್ತಿದ್ದು, ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ ಕಾರಣಕ್ಕೆ ಆಭರಣ ಪ್ರಿಯ ಸಾಮಾನ್ಯ ಜನ ಸಾಕಷ್ಟು ಆಘಾತ ಎದುರಿಸುವಂತೆ ಆಗಿದೆ. ಚಿನ್ನದ ಬೆಲೆ ಇನ್ನೇನು ಭಾರಿ ಪ್ರಮಾಣದಲ್ಲಿ ಕುಸಿತ ಕಾಣಬಹುದು ಎಂಬ ನಿರೀಕ್ಷೆಯೂ ಮೂಡಿರುವ ಸಮಯದಲ್ಲೇ ಚಿನ್ನದ ಬೆಲೆ ಒಂದೇ ದಿನದಲ್ಲಿ 5,500 ರೂಪಾಯಿ ಏರಿಕೆಯಾಗಿ ಭಾರಿ ದೊಡ್ಡ ಆಘಾತ ನೀಡಿದೆ! ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ?
ಬಂಗಾರದ ಬೆಲೆ ದಿಢೀರ್ ಏರಿಕೆ!
ಚಿನ್ನ ಬೆಲೆ ಭಾರಿ ಏರಿಕೆ ಕಾಣುತ್ತಿದ್ದು, ಚಿನ್ನ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಭರ್ಜರಿ ಡಿಮ್ಯಾಂಡ್ ಬಂದ ಕಾರಣ ಚಿನ್ನ ಬೆಲೆ ಹೆಚ್ಚಾಗುತ್ತಿದೆ. ಒಂದೇ ದಿನ 24 ಕ್ಯಾರೆಟ್ ಶುದ್ಧ ಚಿನ್ನವು 5,500 ಪ್ರತಿ 100 ಗ್ರಾಂಗೆ ಏರಿಕೆ ಕಂಡು, 8,77,100 ರೂಪಾಯಿ ತಲುಪಿದೆ. ಹಾಗೇ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆಯು ಪ್ರತಿ 10 ಗ್ರಾಂಗೆ, 550 ರೂಪಾಯಿ ಏರಿಕೆ ಕಂಡು 87,710 ರೂಪಾಯಿಗೆ ತಲುಪಿದೆ.
ಹೀಗಿದ್ದಾಗಲೇ, 22 ಕ್ಯಾರೆಟ್ ಆಭರಣ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 5,000 ರುಪಾಯಿ ಏರಿಕೆ ಕಂಡಿದೆ. ಹೀಗಾಗಿ 22 ಕ್ಯಾರೆಟ್ ಆಭರಣ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 8,04,000 ರೂಪಾಯಿ ಆಗಿದೆ. ಹಾಗೇ, 22 ಕ್ಯಾರೆಟ್ ಆಭರಣ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 500 ರೂಪಾಯಿ ಏರಿಕೆ ಕಂಡು 80,400 ರೂಪಾಯಿಗೆ ತಲುಪಿದೆ. ಹೀಗಾಗಿ ಆಭರಣ ಪ್ರಿಯರಲ್ಲಿ ಬೆಲೆ ಏರಿಕೆ ಇದೀಗ ಆತಂಕ ಹುಟ್ಟಿಸಿದೆ.
-
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications