ಚಿನ್ನದ ಪ್ರಿಯರಿಗೆ ಈ ತಿಂಗಳಲ್ಲಿ ಸಿಗಲಿದೆ ಸುವರ್ಣ ಹೂಡಿಕೆ ಅವಕಾಶ !
ಬೆಂಗಳೂರು, ಏಪ್ರಿಲ್ 03: ಚಿನ್ನದ ಮೇಲೆ ಹೂಡಿಕೆ ಮಾಡಿ ಲಾಭ ಮಾಡುವ ಉದ್ದೇಶವಿದ್ದರೆ ಏಪ್ರಿಲ್ ತಿಂಗಳಾಂತ್ಯದಲ್ಲಿ ಖರೀದಿಸಲು ಪ್ಲಾನ್ ಮಾಡಿಕೊಳ್ಳಿ. ಯಾಕೆಂದರೆ ಏಪ್ರಿಲ್ ತಿಂಗಳಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಕಡಿಮೆಯಾಗಲಿದೆ ಎಂದು ಗೋಲ್ಡ್ ಎಕ್ಸ್ ಪರ್ಟ್ ಗೋಲ್ಡ್ ಗುರು ತಿಳಿಸಿದ್ದಾರೆ. ಅವರು ವಿಶ್ಲೇಷಣೆ ಮಾಡಿದಂತೆ ಕಳೆದ ವಾರವೂ ಚಿನ್ನದ ಬೆಲೆ ಒಂದು ಗ್ರಾಂ ಮೇಲೆ ನೂರು ರೂ. ಕಡಿಮೆಯಾಗಿತ್ತು. ಏಪ್ರಿಲ್ ನಲ್ಲಿ ಚಿನ್ನದ ಬೆಲೆ ಇನ್ನೂ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮಾ. 23 ರಂದು ಗೋಲ್ಡ್ ಗುರು ಹೇಳಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆಯಾಗಿತ್ತು. ಬೆಂಗಳೂರು ಮಾರುಕಟ್ಟೆಯಲ್ಲಿ ಕೂಡ ಒಂದು ಗ್ರಾಂ ಚಿನ್ನದ ಬೆಲೆ 4575 ಕ್ಕೆ ಇಳಿದಿತ್ತು. ಗುರುವಾರ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಹೆಚ್ಚಳಗೊಂಡಿದೆ. ಇದರಿಂದ ಚಿನ್ನದ ಬೆಲೆ ಮತ್ತೆ ಹೆಚ್ಚಾಗುತ್ತದೆ ಎಂದು ಭಾವಿಸುವ ಅಗತ್ಯವಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕಾ ಡಾಲರ್ ಬೆಲೆ ಸ್ಥಿರತೆ ಕಾಪಾಡಿಕೊಂಡಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇನ್ನೂ ಕಡಿಮೆಯಾಗಲಿದ್ದು, ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ.ನಿಂದ 200 ರೂ. ವರೆಗೂ ಕಡಿಮೆಯಾಗಲಿದೆ ಎಂದು ಗೋಲ್ಡ್ ಗುರು ವಿಶ್ಲೇಷಣೆ ಮಾಡಿದ್ದಾರೆ.

ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆಯಲ್ಲಿ ಸ್ಥಿರತೆ ಇರಲಿಲ್ಲ. ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತುಸು ಏರಿಕೆ ಕಂಡಿತ್ತು. ಚಿನ್ನದ ಮೇಲೆ ಹೂಡಿಕೆ ಮಾಡಿ ಲಾಭ ಗಳಿಸುವ ಉದ್ದೇಶವಿದ್ದರೆ ಏಪ್ರಿಲ್ ತಿಂಗಳಾಂತ್ಯಕ್ಕೆ ಇನ್ನೂ ಕಡಿಮೆಯಾಗಲಿದ್ದು, ಹೂಡಿಕೆ ಮಾಡಲು ಸೂಕ್ತ ಎಂದು ಗೋಲ್ಡ್ ಗುರು ಸಲಹೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 3800 ರೂ. ತಲುಪುವ ಸಾಧ್ಯತೆಗಳಿವೆ. ಹೀಗಾಗಿ ಇನ್ನೂ ಒಂದೆರಡು ವಾರ ನೋಡಿಕೊಂಡು ಚಿನ್ನದ ಮೇಲೆ ಹೂಡಿಕೆ ಮಾಡುವುದು ಸೂಕ್ತ ಎಂದಿದ್ದಾರೆ ಗೋಲ್ಡ್ ಗುರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications