ಸತತ 5ನೇ ದಿನ ಚಿನ್ನದ ಬೆಲೆ ಕುಸಿತ: ಎಷ್ಟು ಇಳಿಕೆಯಾಗಿದೆ?
ನವದೆಹಲಿ, ನವೆಂಬರ್ 20: ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ತನ್ನ ಕುಸಿತವನ್ನು ಮುಂದುವರಿಸಿದೆ. ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಉಲ್ಬಣದ ಜೊತೆಗೆ ಲಸಿಕೆ ಲಭ್ಯವಾಗುವ ಆಶಾವಾದವು ಮಾರುಕಟ್ಟೆಯ ಮೇಲೆ ಪ್ರಭಾವ ಬೀರುತ್ತಿದೆ.
Recommended Video
ದುರ್ಬಲ ಜಾಗತಿಕ ಸೂಚನೆಗಳ ಮಧ್ಯೆ ಚಿನ್ನದ ಬೆಲೆಗಳು ಸತತ ಐದನೇ ದಿನವೂ ಭಾರತೀಯ ಮಾರುಕಟ್ಟೆಗಳಲ್ಲಿ ಇಳಿಮುಖ ಸಾಧಿಸಿವೆ. ಹಿಂದಿನ ನಾಲ್ಕು ಸೆಷನ್ಗಳಲ್ಲಿ ನಷ್ಟ ಅನುಭವಿಸಿದ ನಂತರ ಎಂಸಿಎಕ್ಸ್ನಲ್ಲಿ ಚಿನ್ನವು 10 ಗ್ರಾಂಗೆ ಶೇ. 0.11 ರಷ್ಟು ಇಳಿದು, 50,029 ರೂಪಾಯಿಗೆ ತಲುಪಿದೆ.
ಬೆಳ್ಳಿ ಭವಿಷ್ಯವು ಶೇ. 0.3ರಷ್ಟು ಏರಿಕೆ ಕಂಡು 61,616 ಕ್ಕೆ ತಲುಪಿದೆ. ಹಿಂದಿನ ಅಧಿವೇಶನದಲ್ಲಿ, ಚಿನ್ನದ ಬೆಲೆ 10 ಗ್ರಾಂಗೆ ಶೇ. 0.7ರಷ್ಟು ಅಥವಾ 350 ರೂಪಾಯಿ ಕುಸಿದಿದ್ದರೆ, ಬೆಳ್ಳಿ ಪ್ರತಿ ಕೆಜಿಗೆ 1,000 ರೂ. ಅಥವಾ ಶೇ. 1.63ರಷ್ಟು ಇಳಿಕೆಯಾಗಿತ್ತು.

ಜಾಗತಿಕ ಮಾರುಕಟ್ಟೆಗಳಲ್ಲಿ, ಅಮೆರಿಕಾದ ಹೆಚ್ಚಿನ ಪ್ರಚೋದಕ ಕ್ರಮಗಳ ಬಗ್ಗೆ ಅನಿಶ್ಚಿತತೆಯ ನಡುವೆ ಚಿನ್ನದ ಬೆಲೆಗಳು ಇಂದು ಕಡಿಮೆಯಾಗಿದೆ. ಸ್ಪಾಟ್ ಚಿನ್ನವು ಔನ್ಸ್ಗೆ ಶೇ. 0.2 ಕುಸಿದು 1,863.21 ಡಾಲರ್ಗೆ ತಲುಪಿದೆ. ಇತರ ಅಮೂಲ್ಯ ಲೋಹಗಳ ಪೈಕಿ ಬೆಳ್ಳಿ ಔನ್ಸ್ಗೆ ಶೇ. 0.1ರಷ್ಟು ಕುಸಿದು 24.06 ಡಾಲರ್ಗೆ ತಲುಪಿದ್ದರೆ, ಪ್ಲಾಟಿನಂ ಶೇ. 0.2ರಷ್ಟು ಇಳಿಕೆಯಾಗಿ ಔನ್ಸ್ಗೆ 949.88 ಡಾಲರ್ ಮುಟ್ಟಿದೆ.
ಕೋವಿಡ್ ಲಸಿಕೆ ಪ್ರಗತಿಯ ಬಗ್ಗೆ ಹೂಡಿಕೆದಾರರ ಆಶಾವಾದವು ಈ ವಾರದ ಆರಂಭದಲ್ಲಿ ಜಾಗತಿಕ ಇಕ್ವಿಟಿ ಮಾರುಕಟ್ಟೆಗಳನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಸಿತು. ಆದರೆ ವೈರಸ್ ಪ್ರಕರಣಗಳ ಉಲ್ಬಣ ಮತ್ತು ಪ್ರಚೋದಕ ಕ್ರಮಗಳ ಬಗ್ಗೆ ಅಮೆರಿಕಾವು ಮುಂದಾಗದಿರುವುದರಿಂದ ಹೂಡಿಕೆದಾರರಲ್ಲಿ ಅನಿಶ್ಚಿತತೆ ಕಾಡುತ್ತಿದೆ.
-
'ಕೆಲಸ ಇಲ್ಲ ಅಂದ್ರೆ ಜೀವನ ಮುಗಿದಿಲ್ಲ': ಲಂಡನ್ನಲ್ಲಿ ಕೆಲಸ ಕಳೆದುಕೊಂಡ ಭಾರತೀಯ ಮಹಿಳೆಯ Video Viral -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications