Gold Price: ಸತತ ಎರಡನೇ ದಿನವೂ ಕುಸಿದ ಚಿನ್ನ; ಬುಧವಾರ ಕೂಡ ಕುಸಿಯುವ ಸಾಧ್ಯತೆ
ಚಿನ್ನ ಖರೀದಿ ಮಾಡುವವರಿಗೆ ಕಳೆದ ಎರಡು ದಿನಗಳಿಂದ ಬೆಲೆ ಕಡಿಮೆಯಾಗುತ್ತಿರುವುದು ಖುಷಿ ತಂದಿದೆ. ಸತತ ಎರಡು ದಿನ ಚಿನ್ನದ ಬೆಲೆ ಕುಸಿತವಾಗಿದೆ. ಬುಧವಾರ ಕೂಡ ಚಿನ್ನದ ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ.
ಸೋಮವಾರ 100 ಗ್ರಾಂ ಚಿನ್ನದ ಬೆಲೆ 2000 ರೂಪಾಯಿ ಕುಸಿತ ಕಂಡಿದ್ದರೆ, ಮಂಗಳವಾರ 1000 ರೂಪಾಯಿ ಕುಸಿತವಾಗಿದೆ. ಸೋಮವಾರ 6,740 ರೂಪಾಯಿ ಇದ್ದ ಒಂದು ಗ್ರಾಂ 22 ಕ್ಯಾರೆಟ್ (ಆಭರಣ) ಚಿನ್ನದ ಬೆಲೆ ಮಂಗಳವಾರ, 6,730 ರೂಪಾಯಿಗೆ ಕುಸಿದಿದೆ.

ಮಂಗಳವಾರ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 70670 ರೂಪಾಯಿಗೆ ಮಾರಾಟವಾಗುತ್ತಿದೆ. ಸತತ ಎರಡು ದಿನಗಳ ಕಾಲ ಚಿನ್ನದ ಬೆಲೆ ಕುಸಿತವಾಗಿದ್ದು ಬುಧವಾರ ಕೂಡ ಚಿನ್ನದ ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ.
ಬೆಳ್ಳಿ ಬೆಲೆ ಹೆಚ್ಚಳ
ಚಿನ್ನದ ಬೆಲೆ ಇಳಿಕೆಯಾದರೆ, ಬೆಳ್ಳಿಯ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. ಬುಧವಾರ 1 ಕೆಜಿ ಬೆಳ್ಳಿ ದರ 500 ರೂಪಾಯಿ ಏರಿಕೆ ಕಂಡಿದೆ. ಸೋಮವಾರ 91,000 ರೂಪಾಯಿ ಇದ್ದ ಬೆಳ್ಳಿ ಬೆಲೆ, ಬುಧವಾರ 91,500 ರೂಪಾಯಿಗೆ ಹೆಚ್ಚಾಗಿದೆ.
ಬುಧವಾರ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಅಥವಾ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಚಿನ್ನದ ಬೆಲೆ ಕುಸಿಯುತ್ತಾ?
ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಳಿತ ಮುಂದುವರೆಯುತ್ತಿದೆ. ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರ ನಿದ್ದೆಗೆಡಿಸಿತ್ತು. ಇನ್ನೇನು ಆಭರಣ ಚಿನ್ನ 10 ಗ್ರಾಂಗೆ 70 ಸಾವಿರ ದಾಟುತ್ತದೆ ಎನ್ನುವಾಗಲೇ ಬೆಲೆ ಕುಸಿತ ಕಂಡಿತು.
ಜಾಗತಿಕವಾಗಿ ಹಲವು ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಚೀನಾದ ಸೆಂಟ್ರಲ್ ಬ್ಯಾಂಕ್ ಮೀಸಲಿಗಾಗಿ ಚಿನ್ನ ಖರೀದಿ ನಿಲ್ಲಿಸಿದ್ದರಿಂದ ಚಿನ್ನದ ಬೆಲೆ ಏರಿಕೆಗೆ ಕಡಿವಾಣ ಬೀಳಲು ಪ್ರಮುಖ ಕಾರಣವಾಗಿತ್ತು. ಚೀನಾದ ಸೆಂಟ್ರಲ್ ಬ್ಯಾಂಕ್ ಮತ್ತೆ ಚಿನ್ನದ ಖರೀದಿ ಆರಂಭಿಸಿದರೆ ಚಿನ್ನದ ದರ ಏರಿಕೆಯಾಗುವ ಸಾಧ್ಯತೆ ಇದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications