ಅಗ್ಗವಾಗಲಿದೆ ಮೊಬೈಲ್, ಸ್ಥಿರ ದೂರವಾಣಿ ದರ
ನವದೆಹಲಿ, ಫೆ. 24 : ಮೊಬೈಲ್ ಮತ್ತು ಸ್ಥಿರ ದೂರವಾಣಿ ಬಳಕೆದಾರರಿಗೆ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಶುಭ ಸುದ್ದಿಯೊಂದನ್ನು ನೀಡಿದೆ.
ದೂರ ಸಂಪರ್ಕ ಸೇವಾ ಸಂಸ್ಥೆಗಳು ಸ್ಥಿರ ದೂರವಾಣಿ ಕರೆಗಳ ವಿನಿಮಯ ಮತ್ತು ಇತರೆ ದೂರವಾಣಿ ಸಂಸ್ಥೆಗೆ ನೀಡ ಬೇಕಿದ್ದ ಶುಲ್ಕವನ್ನು ರದ್ದು ಮಾಡಲಾಗಿದೆ. ಹಾಗಾಗಿ ಮೊಬೈಲ್ ಮತ್ತು ಸ್ಥಿರ ದೂರವಾಣಿ ಕರೆಗಳು ಮತ್ತಷ್ಟು ಅಗ್ಗವಾಗಲಿವೆ.[ದೇಶದ 2,500 ನಗರದಲ್ಲಿ ವೈ ಫೈ, ಮೈಸೂರಿಗೂ ಸಿಗುತ್ತೆ]

ಸ್ಥಿರ ದೂರವಾಣಿ ಸಂಪರ್ಕ ಹಾಗೂ ಬಳಕೆದಾರರ ಸಂಖ್ಯೆ ಹೆಚ್ಚಿಸಲು ಟ್ರಾಯ್ ಈ ಕ್ರಮ ಕೈಗೊಂಡಿದೆ. ಸ್ಥಿರ ದೂರವಾಣಿಯ ಬಳಕೆದಾರರು ಇನ್ನೊಂದು ಸಂಸ್ಥೆಯ ಸ್ಥಿರ ದೂರವಾಣಿ ಅಥವಾ ಮೊಬೈಲ್ ಗೆ ಕರೆ ಮಾಡಿದರೆ, ಕರೆಯ ವಿನಿಮಯಕ್ಕೆ 20 ಪೈಸೆ ಶುಲ್ಕ ವಿಧಿಸಲಾಗುತ್ತಿತ್ತು. ಆದರೆ ಇದೀಗ ಅದನ್ನು ರದ್ದುಪಡಿಸಲಾಗಿದೆ.
ಮೊಬೈಲ್ ಫೋನ್ ನಿಂದ ಬೇರೊಂದು ಸೇವಾ ಸಂಸ್ಥೆಯ ಚಂದಾದಾರಿಗೆ ಕರೆ ಮಾಡಿದಾಗ ಇಂಟರ್ಕನೆಕ್ಷನ್ ಯೂಸೇಜ್ ಚಾರ್ಜ್ (ಅಂತರಸಂಪರ್ಕ ಸೇವೆ ಬಳಕೆ ಶುಲ್ಕ) ಎಂದು 20 ಪೈಸೆ ಸಂಗ್ರಹಿಸಲಾಗುತ್ತಿತ್ತು. ಇಲ್ಲಿಯೂ ಶೇ. 30ರಷ್ಟು ಕಡಿತ ಪ್ರಕಟಿಸಿರುವ ಟ್ರಾಯ್, ಶುಲ್ಕವನ್ನು 6 ಪೈಸೆ ಇಳಿಕೆ ಮಾಡಿದೆ.[ತರಂಗಾಂತರ ಹರಾಜಿಂದ 1 ಲಕ್ಷ ಕೋಟಿ ಆದಾಯ ನಿರೀಕ್ಷೆ]
ಸ್ಥಿರ ದೂರವಾಣಿ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಬಂಡವಾಳ ಹೂಡಿಕೆ ಮಾಡಲು ಮತ್ತು ಬಂಡವಾಳ ಹೂಡಿಕೆದಾರರಿಗೆ ಉತ್ತೇಜನ ನೀಡಲು ಆಗುವಂತೆ ಮಾಡಬೇಕಿದೆ. ಹೂಡಿಕೆದಾರರನ್ನು ಉತ್ತೇಜಿಸುವ ಸಲುವಾಗಿಯೇ ಕರೆ ವಿನಿಮಯ ಶುಲ್ಕ ರದ್ದು ಮತ್ತು ಸಂಪರ್ಕ ಸೇವೆ ಬಳಕೆ ಶುಲ್ಕ ಇಳಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಾಯ್ ವಿವರಿಸಿದೆ.
ಶುಲ್ಕ ಕಡಿತ ಬಿಎಸ್ ಎನ್ ಎಲ್ ಮತ್ತು ಎಂಟಿ ಎನ್ ಎಲ್ ಗ್ರಾಹಕರಿಗೆ ವಿಶೇಷ ಲಾಭ ತಂದುಕೊಡಲಿದೆ. ಅಲ್ಲದೇ ಇಷ್ಟು ದಿನ ನೀಡುತ್ತಿದ್ದ ಬಿಲ್ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಲಿದೆ ಎಂದು ಟ್ರಾಯ್ ವಕ್ತಾರ ಅರವಿಂದ್ ಕುಮಾರ್ ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications