"ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ, ತೆರಿಗೆ ಉಳಿಸಿ"
ನವದೆಹಲಿ, ಜೂ.23: ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಿಸಲು ವಿತ್ತ ಸಚಿವಾಲಯ ಮುಂದಿಟ್ಟಿರುವ ಹೊಸ ಐಡಿಯಾಕ್ಕೆ ಬಹುತೇಕ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಕಂಡು ಬಂದಿದೆ.
ಈಗಾಗಲೇ ಗ್ರಾಹಕರು ಈ ಹೊಸ ಸೌಲಭ್ಯದಿಂದ ಯಾವ ಯಾವ ಅನುಕೂಲ ಸಿಗಲಿದೆ ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ನಗದು ಬಳಕೆಗಿಂತ ಕಾರ್ಡ್ ಬಳಕೆ ಹೆಚ್ಚಿಸಿದರೆ ಆದಾಯ ತೆರಿಗೆ ರಿಲೀಫ್ ಸಿಗಲಿದೆ ಎಂಬುದು ಎಲ್ಲರ ಕಣ್ಣರಳಿಸಿದೆ.[ಡೆಬಿಟ್ ಕಾರ್ಡ್ ಬಳಕೆದಾರರ ಗಮನಕ್ಕೆ]
ವಿತ್ತ ಸಚಿವಾಲಯ ಸೋಮವಾರ ಸಲ್ಲಿಸಿದ ಪ್ರಸ್ತಾವನೆಯಂತೆ ನಗದು ಬಳಕೆಗಿಂತ ಕಾರ್ಡ್ ಬಳಸಿ ನಿರ್ದಿಷ್ಟವಾದ ಪ್ರಮಾಣದಲ್ಲಿ ಹಣ ಪಾವತಿಸುವ ಗ್ರಾಹಕರಿಗೆ ಆದಾಯ ತೆರಿಗೆ ಸೌಲಭ್ಯ ಪರಿಗಣಿಸಲಾಗುತ್ತದೆ ಎನ್ನುವುದು ಈ ಪ್ರಸ್ತಾವನೆಯಲ್ಲಿನ ಪ್ರಮುಖ ಅಂಶವಾಗಿದೆ.

* 1 ಲಕ್ಷ ರೂ.ಗಿಂತ ಹೆಚ್ಚಿನ ಚಲಾವಣೆಗೆ ತಂತ್ರಜ್ಞಾನ ಬಳಕೆಯನ್ನು ಕಡ್ಡಾಯಗೊಳಿಸಿದೆ. ಅಂದರೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಕೆಗೆ ಹೆಚ್ಚಿನ ಮಹತ್ವ ನೀಡಿದೆ. [ಎಟಿಎಂನಲ್ಲಿ ಕಾರ್ಡ್ ಸಿಕ್ಕಿಕೊಂಡರೆ ಏನು ಮಾಡಬೇಕು?]
* ಪೆಟ್ರೋಲ್ ಬಂಕ್, ಗ್ಯಾಸ್ ಏಜೆನ್ಸಿ ಹಾಗೂ ರೈಲ್ವೆ ಟಿಕೆಟ್ಗಳಿಗೆ ಕಾರ್ಡ್ನಿಂದ ಪಾವತಿ ಮಾಡುವ ಹಣಕ್ಕೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂಬ ಅಂಶವೂ ಗ್ರಾಹಕರನ್ನು ಸೆಳೆಯುತ್ತಿದೆ.[ಕ್ರೆಡಿಟ್ ಕಾರ್ಡ್ ಪಿನ್ ಅಂಚೆಯಲ್ಲಿ ಬರಲ್ಲ]
* ಇ ವ್ಯವಹಾರ ನಿಪುಣ ಉದ್ಯಮಿ, ವ್ಯಾಪಾರಿಗಳಿಗೂ ಈ ಸೌಲಭ್ಯ ನೀಡಲಾಗುವುದು. ತೆರಿಗೆ ರಿಯಾಯಿತಿಯೂ ಸಿಗುತ್ತದೆ.
* ಹಣ ಚಲಾವಣೆ ಮೋಸದಿಂದ ಕೂಡಿದೆ ಎನ್ನುವುದು ಕಂಡುಬಂದಲ್ಲಿ ಗ್ರಾಹಕನ ಖಾತೆಗೇ ವರ್ಗಾವಣೆ ಮಾಡಲಾಗುತ್ತದೆ.
ಈ ಸೌಲಭ್ಯ ಅನುಷ್ಠಾನಗೊಳ್ಳುವುದಕ್ಕೂ ಮೊದಲು ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಸರ್ಕಾರ ಕೇಳಿಕೊಂಡಿದೆ. mygov.in ಗೆ ಭೇಟಿ ನೀಡಿ ಜೂ.29ರೊಳಗೆ ನಿಮ್ಮ ಅನಿಸಿಕೆ, ಅಭಿಪ್ರಾಯವನ್ನು ತಿಳಿಸಬಹುದು. (ಒನ್ ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications