ಪಿಎಫ್ ವಿಥ್ ಡ್ರಾ ಮಾಡಿದರೆ ಟಿಡಿಎಸ್ ಕಟ್ಟಬೇಕಾಗಿಲ್ಲ!
ನವದೆಹಲಿ, ಮೇ. 31: ಉದ್ಯೋಗಿಗಳಿಗೆ, ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. 50 ಸಾವಿರ ರು. ವರೆಗೆ ಪಿಎಫ್ ವಿಥ್ ಡ್ರಾ ಮಾಡಿದರೆ ನೀವು ಟಿಡಿಎಸ್ ಕಟ್ಟಬೇಕಾಗಿಲ್ಲ. ಹೊಸ ನೀತಿ ಜೂನ್ 1ರಿಂದಲೇ ಅನ್ವಯವಾಗಲಿದೆ.
ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ನೀತಿಯಲ್ಲಿ ಮಾಡಿರುವ ಬದಲಾವಣೆ ಮಧ್ಯಮ ವರ್ಗದವರಿಗೆ ನೆರವಾಗುವುದರಲ್ಲಿ ಅನುಮಾನವಿಲ್ಲ. ಈ ಮೊದಲು 30 ಸಾವಿರ ರು. ಗೆ ಇದ್ದ ವಿನಾಯಿತಿಯನ್ನು ಈಗ 50 ಸಾವಿರ ರು. ಗೆ ಏರಿಕೆ ಮಾಡಲಾಗಿದೆ. 1962ರ ಹಣಕಾಸು ಕಾನೂನು 192 ಎ ಗೆ ಮಾಡಿರುವ ತಿದ್ದುಪಡಿ ಹೊಸ ನೀತಿ ಜಾರಿಗೆ ಕಾರಣವಾಗುತ್ತಿದೆ.[ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಆಗಸ್ಟ್ 31 ಡೆಡ್ಲೈನ್]

ಯಾಕೆ ಹೊಸ ನೀತಿ: ದೀರ್ಘಾವಧಿ ಹೂಡಿಕೆ ಪ್ರೋತ್ಸಾಹ ಮಾಡಲು ಸರ್ಕಾರ ಈ ನೀತಿಗೆ ಮುಂದಾಗಿದೆ. 50 ಸಾವಿರಕ್ಕೆ ಮಿತಿ ಏರಿಕೆ ಮಾಡಿರುವುದರಿಂದ ಅವಧಿಗೂ ಮುನ್ನವೇ ಹಣ ಡ್ರಾ ಮಾಡುವವರ ಸಂಖ್ಯೆ ಕಡಿಮೆಯಾಗಲಿದ್ದು ದೇಶದ ಸಂಪನ್ಮೂಲ ಕ್ರೋಢಿಕರಣಕ್ಕೆ ಕಾರಣವಾಗಲಿದೆ.
ಪಾನ್ ಕಾರ್ಡ್ ನೀಡಿದರೆ ಶೇ. 10 ನ್ನು ಕಡಿತ ಮಾಡಿಕೊಳ್ಳಲಾಗುತ್ತಿತ್ತು. ಆದರೆ 15 ಜಿ ಮತ್ತು 15 ಎಚ್ ಸಲ್ಲಿಕೆ ಮಾಡಿದರೆ ಯಾವ ಕಡಿತವನ್ನು ಮಾಡಿಕೊಳ್ಳಲಾಗುತ್ತಿರಲಿಲ್ಲ. ಈಗಲೂ ಸಹ ಇದೇ ನೀತಿ ಮುಂದುವರಿಯಲಿದ್ದು ವಿಥ್ ಡ್ರಾ ಮಿತಿ ಮಾತ್ರ ಏರಿಕೆ ಕಂಡಿದೆ.[ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಡೌನ್ ಲೋಡ್ ಹೇಗೆ?]
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು 15 ಜಿ ಸಲ್ಲಿಕೆ ಮಾಡಬೇಕು, 60 ವರ್ಷಕ್ಕಿಂತ ಕೆಳಗಿನವರು 15 ಎಚ್ ಸಲ್ಲಿಕೆ ಮಾಡಬೇಕು ಎಂದು ತಿಳಿಸಲಾಗಿದೆ. ವಿಥ್ ಡ್ರಾ 50 ಸಾವಿರ ರು. ಮೀರಿದ್ದರೆ ಶೇ. 34.608ಕ್ಕಿಂತ ಅಧಿಕ ಟಿಡಿಎಸ್ ಮುರಿದುಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ.[ಕಾರ್ಮಿಕರ ಮೇಲೆ ಲಾಠಿ ಬೀಸಿದ್ದ ಬೆಂಗಳೂರು ಪೊಲೀಸರು]
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications