ಗೂಗಲ್ ಉದ್ಯೋಗಿಗಳಿಗೆ ಜುಲೈ 2021ರವರೆಗೆ ವರ್ಕ್ ಫ್ರಮ್ ಹೋಮ್
ನವದೆಹಲಿ, ಜುಲೈ 28: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ ತನ್ನ ಸಂಸ್ಥೆಯ 2 ಲಕ್ಷ ಉದ್ಯೋಗಿಗಳು ಮತ್ತು ಗುತ್ತಿಗೆದಾರ ಸಿಬ್ಬಂದಿಗೆ 2021 ಜೂನ್ ವರೆಗೂ ಮನೆಯಿಂದಲೇ ಕೆಲಸ ಮಾಡಬೇಕೆಂದು ನಿರ್ದೇಶಿಸಿದೆ.
Recommended Video
ಕೊರೊನಾವೈರಸ್ ಸೋಂಕು ಹರಡುವಿಕೆಯು ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದ್ದು, ಉದ್ಯೋಗಿಗಳ ಆರೋಗ್ಯ ರಕ್ಷಣೆಯ ದೃಷ್ಟಿಯಲ್ಲಿ ಗೂಗಲ್ ಸಂಸ್ಥೆಯು ಈ ನಿರ್ಧಾರಕ್ಕೆ ಬಂದಿದೆ. ಗೂಗಲ್ನ ಹೊರತಾಗಿ, ಇತರ ಹಲವು ಟೆಕ್ ಕಂಪನಿಗಳು ತಮ್ಮ ಉದ್ಯೋಗಿಗಳಿಗಾಗಿ ಮನೆಯಿಂದ ಕೆಲಸ ಮಾಡಲು ಆಶ್ರಯಿಸಿವೆ ಆದರೆ ವಿಸ್ತರಣೆಯನ್ನು ಯೋಜಿಸುತ್ತಿರುವ ಏಕೈಕ ಕಂಪನಿ ಗೂಗಲ್ ಆಗಿದೆ.
ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಗೂಗಲ್ ಸಿಇಒ ಸುಂದರ್ ಪಿಚೈ ಅವರು ಉನ್ನತ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ. ಪಿಚೈ ಸೋಮವಾರ ಹೊರಡಿಸಿದ ರಿಮೋಟ್-ವರ್ಕ್ ಆದೇಶವು ಗೂಗಲ್ನ ಕಾರ್ಪೊರೇಟ್ ಪೋಷಕ ಆಲ್ಫಾಬೆಟ್ ಇಂಕ್ ಒಡೆತನದ ಇತರ ಕಂಪನಿಗಳಿಗೂ ಅನ್ವಯಿಸಲಿದೆ. ಈ ವರ್ಷ ಉಳಿದ ದಿನಗಳಲ್ಲಿ ತನ್ನ ಹೆಚ್ಚಿನ ಕಚೇರಿಗಳನ್ನು ಮುಚ್ಚುವ ಗೂಗಲ್ನ ಹಿಂದಿನ ಯೋಜನೆಗೆ ಆರು ತಿಂಗಳ ವಿಸ್ತರಣೆ ಮಾಡಲಾಗಿದೆ.

"ಈ ವಿಸ್ತೃತ ಟೈಮ್ಲೈನ್ ಗೆ ಮಿಶ್ರ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗಿದೆ. ಆದರೆ ನೀವು ನಿಮ್ಮ ಬಗ್ಗೆ ಕಾಳಜಿ ವಹಿಸುತ್ತಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ" ಆಲ್ಫಾಬೆಟ್ನ ಸಿಇಒ ಆಗಿರುವ ಪಿಚೈ ಉದ್ಯೋಗಿಗಳಿಗೆ ಬರೆದ ಈ ಮೇಲ್ ನಲ್ಲಿ ಹೇಳಿದ್ದಾರೆ. ದಿ ವಾಲ್ ಸ್ಟ್ರೀಟ್ ಜರ್ನಲ್ ಪಿಚೈ ಅವರ ಈ ನಿರ್ಧಾರವನ್ನು ಮೊದಲು ಪ್ರಕಟ ಮಾಡಿದೆ.
ಗೂಗಲ್ ಈ ಮೊದಲು ಜುಲೈ 6, 2020 ರೊಳಗೆ ತನ್ನ ಕೆಲವು ಕಚೇರಿಗಳನ್ನು ಮತ್ತೆ ತೆರೆಯುವ ಯೋಜನೆಯನ್ನು ಹೊಂದಿತ್ತು. ಆದರೆ ಈಗ ಸೇರ್ಪಡೆ ದಿನಾಂಕವನ್ನು ಜುಲೈ 2021 ರವರೆಗೆ ವಿಸ್ತರಿಸಿದೆ.
ಗೂಗಲ್ನ ಕಚೇರಿಗಳ ದೀರ್ಘಕಾಲದ ಲಾಕ್ಡೌನ್ ಇತರ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರಿಗೂ ಇದೇ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಪ್ರೇರೇಪಿಸಬಹುದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications